ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ವರ್ಷಗಳಲ್ಲಿ 1 ಕೋಟಿ ಸಸಿ ಬೆಳೆಸುವ ಗುರಿ

ಕೋಟಿ ವೃಕ್ಷ ಆಂದೋಲನಕ್ಕೆ ಚಾಲನೆ
Last Updated 5 ಜೂನ್ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ‘ಕೋಟಿ ವೃಕ್ಷ ಆಂದೋಲನ’ಕ್ಕೆ ಚಾಲನೆ ನೀಡಲಾಯಿತು. ಸಸಿ ನೆಡುವ ಮೂಲಕ ಮೇಯರ್‌ ಗೌತಮ್‌ ಕುಮಾರ್‌ ಚಾಲನೆ ನೀಡಿದರು.

ಪಾಲಿಕೆ ಅರಣ್ಯ ವಿಭಾಗ,ಕೋಟಿ ವೃಕ್ಷ ಸೈನ್ಯ, ಎನ್.ಜಿ.ಓ ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 1 ಕೋಟಿ ಸಸಿ ನೆಟ್ಟು ಪೋಷಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.

‘ಪರಿಸರ ದಿನದ ಅಂಗವಾಗಿ ಪ್ರತಿವರ್ಷವೂ ಗಿಡಗಳನ್ನು ನೆಡಲಾಗುತ್ತದೆ. ಆದರೆ, ಅದನ್ನು ಪೋಷಿಸುವ ಕಾರ್ಯ ಮಾಡುವುದು ಕಡಿಮೆ. ಈ ನಿಟ್ಟಿನಲ್ಲಿ ಪಾಲಿಕೆಯು ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಸಸಿಗಳನ್ನು ನೆಟ್ಟು ನಿರ್ವಹಣೆ ಮಾಡುವ ಕೆಲಸ ಮಾಡಲಿದೆ’ ಎಂದರು.

ಶಾಸಕ ದಿನೇಶ್‌ ಗುಂಡೂರಾವ್, ‘ಪರಿಸರ ಮಾಲಿನ್ಯದಿಂದ ಅನೇಕ ನೈಸರ್ಗಿಕ ವಿಕೋಪಗಳು ಉಂಟಾಗುತ್ತಿವೆ. ಅದನ್ನು ತಡೆಯಬೇಕಾದರೆ ನಾವು ಪರಿಸರವನ್ನು ಕಾಪಾಡಬೇಕು’ ಎಂದರು.

ಪಾಲಿಕೆ ಅರಣ್ಯ ವಿಭಾಗದ ವಿಶೇಷ ಆಯುಕ್ತ ಜಿ.ಮಂಜುನಾಥ್, ‘ಪಾಲಿಕೆಯಲ್ಲಿ ನಾಲ್ಕು ನರ್ಸರಿಗಳಿದ್ದು, ಸುಮಾರು 10 ಲಕ್ಷ ಸಸಿಗಳು ಇವೆ. ಅದನ್ನು ಪಾಲಿಕೆ, ಸಾರ್ವಜನಿಕರು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ನೆಡಲಾಗುವುದು’ ಎಂದು ಹೇಳಿದರು.

ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ಮಾತನಾಡಿದರು. ತೋಟಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾದೇವಿ ನಾಗರಾಜು, ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಆಡಳಿತ ಪಕ್ಷದ ನಾಯಕ ಕೆ.ಎ.ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್‌ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT