<p><strong>ಬೆಂಗಳೂರು:</strong> ಅಲಂಕಾರಿಕ ಮೀನು ಉತ್ಪಾದನೆಯನ್ನು ಉತ್ತೇಜಿಸುವುದಕ್ಕಾಗಿ ಹೆಸರಘಟ್ಟ ಮೀನು ಮರಿ ಉತ್ಪಾದನಾ ಕೇಂದ್ರದಲ್ಲಿ ಮೀನು ಕ್ವಾರಂಟೈನ್ (ಜೀವಂತ ಸಂಗ್ರಹ) ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು.</p>.<p>ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ’ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಲಂಕಾರಿಕ ಮೀನು ಮರಿಗಳ ಉತ್ಪಾದನೆ ಮತ್ತು ಮಾರಾಟ ಹೆಚ್ಚುತ್ತಿದೆ. ಈ ಕ್ಷೇತ್ರದಲ್ಲಿ ವ್ಯಾವಹಾರಿಕ ಶಿಸ್ತು ತರಲು ಮತ್ತು ರಫ್ತು ಚಟುವಟಿಕೆ ಉತ್ತೇಜಿಸಲು ಮೀನು ಕ್ವಾರಂಟೈನ್ ಘಟಕವನ್ನು ಶೀಘ್ರದಲ್ಲಿ ಆರಂಭಿಸಲಾಗುವುದು’ ಎಂದರು.</p>.<p>ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ₹ 137.19 ಕೋಟಿ ಮೊತ್ತದ ಕ್ರಿಯಾಯೋಜನೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ತನ್ನ ಪಾಲಿನ ಮೊದಲ ಕಂತಿನ ₹ 21.02 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. 23 ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನದ ಹಂತದಲ್ಲಿದೆ ಎಂದು ತಿಳಿಸಿದರು.</p>.<p>ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ₹ 251.57 ಕೋಟಿ ಅನುದಾನ ಒದಗಿಸಲಾಗಿದೆ. ಅದರಲ್ಲಿ ₹ 200 ಕೋಟಿಯನ್ನು ಮೂಲಸೌಕರ್ಯ ಅಭಿವೃದ್ಧಿಗಾಗಿ ಒದಗಿಸಲಾಗಿದೆ. ಕರಾವಳಿಯಲ್ಲಿ ಯಾಂತ್ರೀಕೃತ ದೋಣಿ<br />ಗಳ ಮೂಲಕ ಮೀನುಗಾರಿಕೆ ನಡೆಸುವವರಿಗೆ ₹ 135 ಕೋಟಿಗಳಷ್ಟು ಡೀಸೆಲ್ ಸಬ್ಸಿಡಿ ನೀಡಲಾಗುತ್ತಿದೆ ಎಂದರು.</p>.<p>ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವಆರ್. ಅಶೋಕ, ಶಾಸಕರಾದ ಕೆ. ರಘುಪತಿ ಭಟ್, ಎಸ್. ಕುಮಾರ್ ಬಂಗಾರಪ್ಪ, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ನಿರ್ದೇಶಕ ರಾಮಾಚಾರ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಲಂಕಾರಿಕ ಮೀನು ಉತ್ಪಾದನೆಯನ್ನು ಉತ್ತೇಜಿಸುವುದಕ್ಕಾಗಿ ಹೆಸರಘಟ್ಟ ಮೀನು ಮರಿ ಉತ್ಪಾದನಾ ಕೇಂದ್ರದಲ್ಲಿ ಮೀನು ಕ್ವಾರಂಟೈನ್ (ಜೀವಂತ ಸಂಗ್ರಹ) ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು.</p>.<p>ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ’ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಲಂಕಾರಿಕ ಮೀನು ಮರಿಗಳ ಉತ್ಪಾದನೆ ಮತ್ತು ಮಾರಾಟ ಹೆಚ್ಚುತ್ತಿದೆ. ಈ ಕ್ಷೇತ್ರದಲ್ಲಿ ವ್ಯಾವಹಾರಿಕ ಶಿಸ್ತು ತರಲು ಮತ್ತು ರಫ್ತು ಚಟುವಟಿಕೆ ಉತ್ತೇಜಿಸಲು ಮೀನು ಕ್ವಾರಂಟೈನ್ ಘಟಕವನ್ನು ಶೀಘ್ರದಲ್ಲಿ ಆರಂಭಿಸಲಾಗುವುದು’ ಎಂದರು.</p>.<p>ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ₹ 137.19 ಕೋಟಿ ಮೊತ್ತದ ಕ್ರಿಯಾಯೋಜನೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ತನ್ನ ಪಾಲಿನ ಮೊದಲ ಕಂತಿನ ₹ 21.02 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. 23 ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನದ ಹಂತದಲ್ಲಿದೆ ಎಂದು ತಿಳಿಸಿದರು.</p>.<p>ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ₹ 251.57 ಕೋಟಿ ಅನುದಾನ ಒದಗಿಸಲಾಗಿದೆ. ಅದರಲ್ಲಿ ₹ 200 ಕೋಟಿಯನ್ನು ಮೂಲಸೌಕರ್ಯ ಅಭಿವೃದ್ಧಿಗಾಗಿ ಒದಗಿಸಲಾಗಿದೆ. ಕರಾವಳಿಯಲ್ಲಿ ಯಾಂತ್ರೀಕೃತ ದೋಣಿ<br />ಗಳ ಮೂಲಕ ಮೀನುಗಾರಿಕೆ ನಡೆಸುವವರಿಗೆ ₹ 135 ಕೋಟಿಗಳಷ್ಟು ಡೀಸೆಲ್ ಸಬ್ಸಿಡಿ ನೀಡಲಾಗುತ್ತಿದೆ ಎಂದರು.</p>.<p>ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವಆರ್. ಅಶೋಕ, ಶಾಸಕರಾದ ಕೆ. ರಘುಪತಿ ಭಟ್, ಎಸ್. ಕುಮಾರ್ ಬಂಗಾರಪ್ಪ, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ನಿರ್ದೇಶಕ ರಾಮಾಚಾರ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>