ಕಿವುಡುತನವನ್ನು ಶೀಘ್ರ ಗುರುತಿಸಿ ತಕ್ಕ ಚಿಕಿತ್ಸೆ ಕೊಡಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8ಕ್ಕೆ ಆರಂಭವಾಗುವ ಕಾಲ್ನಡಿಗೆಯ ನೇತೃತ್ವವನ್ನು ಶಾಸಕ ರವಿಸುಬ್ರಹ್ಮಣ್ಯ ವಹಿಸಲಿದ್ದಾರೆ. ಗಿರಿನಗರ ವಾರ್ಡ್ನ ಪಾಲಿಕೆ ಸದಸ್ಯೆ ನಂದಿನಿ ಭಾಗವಹಿಸಲಿದ್ದಾರೆ. ಜಾಥಾವು ಗಿರಿನಗರ, ಶ್ರೀನಿವಾಸನಗರ, ಶ್ರೀನಗರ, ಹನುಮಂತನಗರದವರೆಗೆ ಸಾಗಲಿದೆ. ಈ ಕಾಲ್ನಡಿಗೆಯಲ್ಲಿ ಎಲ್ಲ ವಯಸ್ಸಿನವರೂ ಭಾಗವಹಿಸಬಹುದು. 080-26727141 ಸಂಖ್ಯೆಗೆ ಕರೆಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.