<p><strong>ಬೆಂಗಳೂರು</strong>: ವಿಶ್ವ ಹೃದಯ ದಿನದ ಅಂಗವಾಗಿ ರಾಜಾಜಿನಗರದ ಸೇಂಟ್ ಥೆರೆಸಾ ತಥಾಗತ್ ಹಾರ್ಟ್ ಕೇರ್ ಸೆಂಟರ್ ಸೋಮವಾರ ವಾಕಥಾನ್ ಆಯೋಜಿಸಿತ್ತು.</p>.<p>‘ಆರೋಗ್ಯವಂತ ಹೃದಯಕ್ಕಾಗಿ ನಾಲ್ಕು ಹೆಜ್ಜೆ’ ಎಂಬ ಧ್ಯೇಯದೊಂದಿಗೆ ಆರಂಭವಾದ ವಾಕಥಾನ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.</p>.<p>ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ವಾಕಥಾನ್ನಲ್ಲಿ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಸಂಘ, ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರು, ಯುವ ಜನಾಂಗ ಮತ್ತು ಆಸ್ಪತ್ರೆಯ ಸಿಬ್ಬಂದಿ ಸೆರಿದಂತೆ ನೂರಾರು ಜನರು ಹೆಜ್ಜೆ ಹಾಕಿದರು.</p>.<p>‘ಹೃದಯದ ಆರೋಗ್ಯಕ್ಕಾಗಿ ನಿತ್ಯ ನಾಲ್ಕು ಹೆಜ್ಜೆ ಹಾಕಿ’ ಎಂಬ ಘೋಷಣೆಗಳು ದಾರಿಯುದ್ದಕ್ಕೂ ಮೊಳಗಿದವು. ಹೃದಯದ ಆರೋಗ್ಯ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಫಲಕಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.</p>.<p>‘ಒತ್ತಡದ ಜೀವನಶೈಲಿ ಹೃದಯ ಕಾಯಿಲೆಗಳಿಗೆ ರಹದಾರಿ. ಒತ್ತಡ, ಆತಂಕ, ಖಿನ್ನತೆಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ನೆಮ್ಮದಿಯ ಜೀವನಶೈಲಿ ರೂಪಿಸಿಕೊಂಡರೆ ಆರೋಗ್ಯವಂತ ಬದುಕು ನಮ್ಮದಾಗುತ್ತದೆ’ ಎಂದು ದಿನೇಶ್ ಗುಂಡೂರಾವ್ ಕಿವಿಮಾತು ಹೇಳಿದರು. </p>.<p>ಜೀವನಶೈಲಿಯಲ್ಲಿ ಮಾಡಿಕೊಳ್ಳುವ ಸಣ್ಣಪುಟ್ಟ ಬದಲಾವಣೆ ಹೃದಯ ಮತ್ತು ಜೀವನವನ್ನು ಜೋಪಾನವಾಗಿಡುತ್ತದೆ. ಹೃದಯ ಕಾಯಿಲೆಗೆ ಈ ಮೊದಲಿನಂತೆ ವಯಸ್ಸಿನ ಇತಿಮಿತಿಗಳಿಲ್ಲ. ಯಾವುದೇ ವಯಸ್ಸಿನವರಿಗಾದರೂ ಗಂಭೀರ ಹೃದಯ ಕಾಯಿಲೆ ಕಾಣಿಸಿಕೊಳ್ಳಬಹುದು ಎಂದು ತಥಾಗತ್ ಹಾರ್ಟ್ ಕೇರ್ ಸೆಂಟರ್ನ ವ್ಯವಸ್ಥಾಪಕ ನಿರ್ದೇಶಕ ಡಾ. ಮಹಾಂತೇಶ ಆರ್. ಚರಂತಿಮಠ ಎಚ್ಚರಿಕೆ ನೀಡಿದರು.</p>.<p>ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ, ಎಂ.ಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ ಅಧ್ಯಕ್ಷೆ ವೀಣಾ ಮಹಾಂತೇಶ, ತಥಾಗತ್ ಹಾರ್ಟ್ ಕೇರ್ ಸೆಂಟರ್ ನಿರ್ದೇಶಕ ಡಾ.ಶ್ರೀನಿವಾಸ್ ವೇಲು, ಅರುಣಾ ಮಠದಪಾಟೀಲ ಹೆಜ್ಜೆ ಹಾಕಿದರು.</p>.<p>ಕಾರ್ಡಿಯಾಲಜಿ ಸೊಸೈಟಿ ಆಫ್ ಇಂಡಿಯಾ, ಭಾರತೀಯ ಉದ್ಯೋಗ ಸಂಸ್ಥೆ ಕರ್ನಾಟಕ ಶಾಖೆ, ಬಸವ ಬಳಗ, ರೋಟರಿ ಕ್ಲಬ್ ಮುಂತಾದ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ವಾಕಥಾನ್ ಆಯೋಜಿಸಲಾಗಿತ್ತು.</p>.<p>ವಾಕಥಾನ್ನಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಉಚಿತವಾಗಿ ಹೃದಯ, ದೇಹದಲ್ಲಿನ ಕೊಬ್ಬಿನಾಂಶ, ರಕ್ತ ತಪಾಸಣೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ ತಪಾಸಣೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಶ್ವ ಹೃದಯ ದಿನದ ಅಂಗವಾಗಿ ರಾಜಾಜಿನಗರದ ಸೇಂಟ್ ಥೆರೆಸಾ ತಥಾಗತ್ ಹಾರ್ಟ್ ಕೇರ್ ಸೆಂಟರ್ ಸೋಮವಾರ ವಾಕಥಾನ್ ಆಯೋಜಿಸಿತ್ತು.</p>.<p>‘ಆರೋಗ್ಯವಂತ ಹೃದಯಕ್ಕಾಗಿ ನಾಲ್ಕು ಹೆಜ್ಜೆ’ ಎಂಬ ಧ್ಯೇಯದೊಂದಿಗೆ ಆರಂಭವಾದ ವಾಕಥಾನ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.</p>.<p>ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ವಾಕಥಾನ್ನಲ್ಲಿ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಸಂಘ, ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರು, ಯುವ ಜನಾಂಗ ಮತ್ತು ಆಸ್ಪತ್ರೆಯ ಸಿಬ್ಬಂದಿ ಸೆರಿದಂತೆ ನೂರಾರು ಜನರು ಹೆಜ್ಜೆ ಹಾಕಿದರು.</p>.<p>‘ಹೃದಯದ ಆರೋಗ್ಯಕ್ಕಾಗಿ ನಿತ್ಯ ನಾಲ್ಕು ಹೆಜ್ಜೆ ಹಾಕಿ’ ಎಂಬ ಘೋಷಣೆಗಳು ದಾರಿಯುದ್ದಕ್ಕೂ ಮೊಳಗಿದವು. ಹೃದಯದ ಆರೋಗ್ಯ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಫಲಕಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.</p>.<p>‘ಒತ್ತಡದ ಜೀವನಶೈಲಿ ಹೃದಯ ಕಾಯಿಲೆಗಳಿಗೆ ರಹದಾರಿ. ಒತ್ತಡ, ಆತಂಕ, ಖಿನ್ನತೆಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ನೆಮ್ಮದಿಯ ಜೀವನಶೈಲಿ ರೂಪಿಸಿಕೊಂಡರೆ ಆರೋಗ್ಯವಂತ ಬದುಕು ನಮ್ಮದಾಗುತ್ತದೆ’ ಎಂದು ದಿನೇಶ್ ಗುಂಡೂರಾವ್ ಕಿವಿಮಾತು ಹೇಳಿದರು. </p>.<p>ಜೀವನಶೈಲಿಯಲ್ಲಿ ಮಾಡಿಕೊಳ್ಳುವ ಸಣ್ಣಪುಟ್ಟ ಬದಲಾವಣೆ ಹೃದಯ ಮತ್ತು ಜೀವನವನ್ನು ಜೋಪಾನವಾಗಿಡುತ್ತದೆ. ಹೃದಯ ಕಾಯಿಲೆಗೆ ಈ ಮೊದಲಿನಂತೆ ವಯಸ್ಸಿನ ಇತಿಮಿತಿಗಳಿಲ್ಲ. ಯಾವುದೇ ವಯಸ್ಸಿನವರಿಗಾದರೂ ಗಂಭೀರ ಹೃದಯ ಕಾಯಿಲೆ ಕಾಣಿಸಿಕೊಳ್ಳಬಹುದು ಎಂದು ತಥಾಗತ್ ಹಾರ್ಟ್ ಕೇರ್ ಸೆಂಟರ್ನ ವ್ಯವಸ್ಥಾಪಕ ನಿರ್ದೇಶಕ ಡಾ. ಮಹಾಂತೇಶ ಆರ್. ಚರಂತಿಮಠ ಎಚ್ಚರಿಕೆ ನೀಡಿದರು.</p>.<p>ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ, ಎಂ.ಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ ಅಧ್ಯಕ್ಷೆ ವೀಣಾ ಮಹಾಂತೇಶ, ತಥಾಗತ್ ಹಾರ್ಟ್ ಕೇರ್ ಸೆಂಟರ್ ನಿರ್ದೇಶಕ ಡಾ.ಶ್ರೀನಿವಾಸ್ ವೇಲು, ಅರುಣಾ ಮಠದಪಾಟೀಲ ಹೆಜ್ಜೆ ಹಾಕಿದರು.</p>.<p>ಕಾರ್ಡಿಯಾಲಜಿ ಸೊಸೈಟಿ ಆಫ್ ಇಂಡಿಯಾ, ಭಾರತೀಯ ಉದ್ಯೋಗ ಸಂಸ್ಥೆ ಕರ್ನಾಟಕ ಶಾಖೆ, ಬಸವ ಬಳಗ, ರೋಟರಿ ಕ್ಲಬ್ ಮುಂತಾದ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ವಾಕಥಾನ್ ಆಯೋಜಿಸಲಾಗಿತ್ತು.</p>.<p>ವಾಕಥಾನ್ನಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಉಚಿತವಾಗಿ ಹೃದಯ, ದೇಹದಲ್ಲಿನ ಕೊಬ್ಬಿನಾಂಶ, ರಕ್ತ ತಪಾಸಣೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ ತಪಾಸಣೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>