<p><strong>ಕೆಂಗೇರಿ</strong>: ಡಯಾಲಿಸಿಸ್ ಹಾಗೂ ಮೂತ್ರಪಿಂಡ ಮರುಜೋಡಣೆ ಶಸ್ತ್ರಚಿಕಿತ್ಸೆಗೆ ಒಳಗಾದವರು ಕೂಡ ಜನಸಾಮಾನ್ಯರಂತೆ ಬದುಕು ನಡೆಸಬಹುದು ಎಂದು ಗ್ಲೆನಿಗಲ್ಸ್ ಬಿಜಿಎಸ್ ಆಸ್ಪತ್ರೆ ನೆಫ್ರಾಲಜಿ ವಿಭಾಗದ ಮುಖ್ಯಸ್ಥ ಹಾಗೂ ಮೂತ್ರಪಿಂಡ ಮರುಜೋಡಣಾ ತಜ್ಞ ಡಾ.ಅನಿಲ್ ಕುಮಾರ್ ಹೇಳಿದರು.</p>.<p>ವಿಶ್ವ ಮೂತ್ರಪಿಂಡ ದಿನಾಚರಣೆ ಅಂಗವಾಗಿ ಗ್ಲೆನಿಗಲ್ಸ್ ಬಿಜಿಎಸ್ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನ ಹಾಗೂ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.</p>.<p>ಜೀವನ ಶೈಲಿಯು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಿಯಮಿತ ದೈಹಿಕ ಚಟುವಟಿಕೆಗಳು, ಆಹಾರ ಕ್ರಮಗಳು ನಮ್ಮನ್ನು ರೋಗದಿಂದ ಮುಕ್ತಗೊಳಿಸುತ್ತವೆ. ಈ ನಿಟ್ಟಿನಲ್ಲಿ ಎಲ್ಲ ವಯೋಮಾನದವರು ಆಹಾರ ಹಾಗೂ ವ್ಯಾಯಾಮದ ಬಗ್ಗೆ ಆಸಕ್ತಿ ವಹಿಸುವುದು ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು. </p>.<p>‘ಶಸ್ತ್ರಚಿಕಿತ್ಸೆಗಳು ರೋಗಗಳ ತೀವ್ರತೆಯನ್ನು ಶಮನಗೊಳಿಸುತ್ತವೆ. ಇದೇ ವೇಳೆ ರೋಗಿಯ ಅಚಲ ಆತ್ಮವಿಶ್ವಾಸವು ಶಸ್ತ್ರಚಿಕಿತ್ಸೆಯ ಯಶಸ್ಸು ದೀರ್ಘ ಕಾಲ ಉಳಿಯುವಂತೆ ಮಾಡುತ್ತದೆ’ ಎಂದು ಗ್ಲೆನಿಗಲ್ಸ್ ಹಾಸ್ಪಿಟಲ್ಸ್ ಕ್ಲಸ್ಟರ್ ಸಿಒಒ ಡಾ. ಜತಿಂದರ್ ಅರೋರ ಹೇಳಿದರು.</p>.<p>ಯುರಾಲಜಿ ಮತ್ತು ರೀನಲ್ ಟ್ರಾನ್ಸ್ಪ್ಲಾಂಟ್ ಸರ್ಜರಿ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ಸಮಾಲೋಚಕ ಡಾ.ನರೇಂದ್ರ ಎಸ್ ಮಾತನಾಡಿದರು.</p>.<p>ಮೂತ್ರಪಿಂಡ ಶಸ್ತ್ರಚಿಕಿತ್ಸೆಗೆ ಒಳಗಾದವರಿಗಾಗಿ ಕ್ರಿಕೆಟ್, ಲೆಮನ್ ಸ್ಪೂನ್, 100 ಮೀಟರ್ ಓಟ, ಬ್ಯಾಡ್ಮಿಂಟನ್, ಕೇರಂ ಮತ್ತು ಚೆಸ್ ಒಳಗೊಂಡಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ಡಯಾಲಿಸಿಸ್ ಹಾಗೂ ಮೂತ್ರಪಿಂಡ ಮರುಜೋಡಣೆ ಶಸ್ತ್ರಚಿಕಿತ್ಸೆಗೆ ಒಳಗಾದವರು ಕೂಡ ಜನಸಾಮಾನ್ಯರಂತೆ ಬದುಕು ನಡೆಸಬಹುದು ಎಂದು ಗ್ಲೆನಿಗಲ್ಸ್ ಬಿಜಿಎಸ್ ಆಸ್ಪತ್ರೆ ನೆಫ್ರಾಲಜಿ ವಿಭಾಗದ ಮುಖ್ಯಸ್ಥ ಹಾಗೂ ಮೂತ್ರಪಿಂಡ ಮರುಜೋಡಣಾ ತಜ್ಞ ಡಾ.ಅನಿಲ್ ಕುಮಾರ್ ಹೇಳಿದರು.</p>.<p>ವಿಶ್ವ ಮೂತ್ರಪಿಂಡ ದಿನಾಚರಣೆ ಅಂಗವಾಗಿ ಗ್ಲೆನಿಗಲ್ಸ್ ಬಿಜಿಎಸ್ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನ ಹಾಗೂ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.</p>.<p>ಜೀವನ ಶೈಲಿಯು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಿಯಮಿತ ದೈಹಿಕ ಚಟುವಟಿಕೆಗಳು, ಆಹಾರ ಕ್ರಮಗಳು ನಮ್ಮನ್ನು ರೋಗದಿಂದ ಮುಕ್ತಗೊಳಿಸುತ್ತವೆ. ಈ ನಿಟ್ಟಿನಲ್ಲಿ ಎಲ್ಲ ವಯೋಮಾನದವರು ಆಹಾರ ಹಾಗೂ ವ್ಯಾಯಾಮದ ಬಗ್ಗೆ ಆಸಕ್ತಿ ವಹಿಸುವುದು ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು. </p>.<p>‘ಶಸ್ತ್ರಚಿಕಿತ್ಸೆಗಳು ರೋಗಗಳ ತೀವ್ರತೆಯನ್ನು ಶಮನಗೊಳಿಸುತ್ತವೆ. ಇದೇ ವೇಳೆ ರೋಗಿಯ ಅಚಲ ಆತ್ಮವಿಶ್ವಾಸವು ಶಸ್ತ್ರಚಿಕಿತ್ಸೆಯ ಯಶಸ್ಸು ದೀರ್ಘ ಕಾಲ ಉಳಿಯುವಂತೆ ಮಾಡುತ್ತದೆ’ ಎಂದು ಗ್ಲೆನಿಗಲ್ಸ್ ಹಾಸ್ಪಿಟಲ್ಸ್ ಕ್ಲಸ್ಟರ್ ಸಿಒಒ ಡಾ. ಜತಿಂದರ್ ಅರೋರ ಹೇಳಿದರು.</p>.<p>ಯುರಾಲಜಿ ಮತ್ತು ರೀನಲ್ ಟ್ರಾನ್ಸ್ಪ್ಲಾಂಟ್ ಸರ್ಜರಿ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ಸಮಾಲೋಚಕ ಡಾ.ನರೇಂದ್ರ ಎಸ್ ಮಾತನಾಡಿದರು.</p>.<p>ಮೂತ್ರಪಿಂಡ ಶಸ್ತ್ರಚಿಕಿತ್ಸೆಗೆ ಒಳಗಾದವರಿಗಾಗಿ ಕ್ರಿಕೆಟ್, ಲೆಮನ್ ಸ್ಪೂನ್, 100 ಮೀಟರ್ ಓಟ, ಬ್ಯಾಡ್ಮಿಂಟನ್, ಕೇರಂ ಮತ್ತು ಚೆಸ್ ಒಳಗೊಂಡಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>