ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷ ಎನ್.ಕೆ.ಜಗನ್ನಿವಾಸ್ ರಾವ್ ಮಾತನಾಡಿ, ‘ಸಮಾವೇಶವನ್ನು ಹೆಬ್ಬೂರಿನ ಕೋದಂಡಾಶ್ರಮ ಮಠದ ಪೀಠಾಧಿಪತಿ ಮಾಧವಾಶ್ರಮ ಸ್ವಾಮೀಜಿ ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ಸ್ಥಾನಿಕ ಬ್ರಾಹ್ಮಣ ಸಭಾದ ಅಧ್ಯಕ್ಷ ರವೀಂದ್ರನಾಥ ರಾವ್ ಬೆಳ್ಳೆ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ‘ರಾಷ್ಟ್ರೋತ್ಥಾನ ಮತ್ತು ಬ್ರಾಹ್ಮಣ್ಯ’ ಎಂಬ ವಿಷಯದ ಮೇಲೆ ಉಪನ್ಯಾಸಕ ಆದರ್ಶ ಗೋಖಲೆ ಮಾತನಾಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿರುವರು’ ಎಂದು ತಿಳಿಸಿದರು.