ವಿಶ್ವ ರೇಬಿಸ್ ದಿನದ ಪ್ರಯುಕ್ತ ಇಲಾಖೆಯು ಗುರುವಾರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ‘ಲೂಯಿ ಪಾಶ್ಚರ್ ಅವರ ಸ್ಮರಣಾರ್ಥ ರೇಬಿಸ್ ದಿನ ಆಚರಿಸಲಾಗುತ್ತಿದೆ. ಈ ರೋಗವು ನಾಯಿಗಳ ಕಡಿತದಿಂದ ಹರಡುತ್ತದೆ. ಇದು ಮಾರಣಾಂತಿಕ ಕಾಯಿಲೆಯಾಗಿದ್ದು, ಸಮಯೋಚಿತ ವೈದ್ಯಕೀಯ ಚಿಕಿತ್ಸೆಯ ಮೂಲಕ ವಾಸಿ ಮಾಡಬಹುದು. ರೋಗ ನಿರ್ಮೂಲನೆಗೆ ಲಸಿಕೆಗಳು, ಔಷಧಗಳು ಹಾಗೂ ಎಲ್ಲಾ ವಿಧದ ಚಿಕಿತ್ಸಾ ಸೇವೆಗಳನ್ನು ಉಚಿತವಾಗಿ ಸರ್ಕಾರ ಒದಗಿಸುತ್ತಿದೆ’ ಎಂದು ಇಲಾಖೆ ಹೇಳಿದೆ.