4 ಲಕ್ಷ ಮಂದಿ ಸಾವು: ಇಲಾಖೆಯ ಆಯುಕ್ತ ಡಾ.ಕೆ.ವಿ. ತ್ರಿಲೋಕ ಚಂದ್ರ, ‘ಕ್ಷಯಕ್ಕೆ ಪ್ರತಿವರ್ಷ ದೇಶದಲ್ಲಿ 4 ಲಕ್ಷದಿಂದ 5 ಲಕ್ಷ ಮಂದಿ ಮೃತಪಡುತ್ತಿದ್ದಾರೆ. ದುರ್ಬಲ ವರ್ಗದ ಜನತೆಯನ್ನು ತಲುಪಿ, ಟಿಬಿ ಸೇವೆಗಳನ್ನು ಒದಗಿಸಲು ವಿಶೇಷ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಕೋವಿಡ್ನಿಂದಾಗಿ ಕಳೆದ ವರ್ಷ ಈ ರೋಗದ ಪತ್ತೆ ಮತ್ತು ಚಿಕಿತ್ಸೆಗೆ ಸಮಸ್ಯೆಯಾಗಿತ್ತು. ಅಷ್ಟಾಗಿಯೂ ಅಧಿಕ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಕ್ಷಯ ರೋಗಕ್ಕೆ ವಿಶೇಷ ಸೇವೆಗಳನ್ನು ಒದಗಿಸಲು ಹೆಚ್ಚಿನ ಪ್ರಯತ್ನ ಮಾಡಬೇಕಿದೆ’ ಎಂದರು.