<p><strong>ಬೆಂಗಳೂರು:</strong> ಅಮೆರಿಕದ ಸ್ಯಾನ್ಹೋಸೆ ನಗರದ ಮೆಕನರಿ ಕನ್ವೆನ್ಷನ್ ಸೆಂಟರ್ನಲ್ಲಿ ಆರಂಭವಾದ ಮೂರು ದಿನಗಳ 18ನೇ ವಿಶ್ವ ಒಕ್ಕಲಿಗ ಮಹಾಸಮ್ಮೇಳನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶನಿವಾರ ಚಾಲನೆ ನೀಡಿದರು.</p>.<p>ವಿಶ್ವದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಮುದಾಯದ ಸದಸ್ಯರು, ವೈವಿಧ್ಯಮಯ ಸಂಸ್ಕೃತಿ, ಪರಂಪರೆ, ಉತ್ಸವವನ್ನು ಈ ಸಮ್ಮೇಳನದ ಮೂಲಕ ಜಗತ್ತಿಗೇ ತೆರೆದಿಟ್ಟರು. ಒಕ್ಕಲಿಗರ ಸಂಸ್ಕೃತಿಯ ಬಣ್ಣನೆ, ಭಕ್ತಿಯ ಮೆರವಣಿಗೆ, ಸುಗ್ಗಿ ಕುಣಿತ, ದೇವರ ಉತ್ಸವ, ಕೋಲಾಟ, ವೇಷ ಭೂಷಣಗಳ ಪ್ರದರ್ಶನವು ಸ್ಯಾನ್ಹೋಸೆ ನಗರದ ರಸ್ತೆಗಳಲ್ಲಿ ಜಾತ್ರಾ ಮಹೋತ್ಸವದ ಅನುಭವ ನೀಡಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿರ್ಮಲಾನಂದನಾಥ ಸ್ವಾಮೀಜಿ, ‘ಒಕ್ಕಲಿಗರು ಜ್ಞಾನ, ಸ್ವಸಾಮರ್ಥ್ಯದಿಂದ ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ತಮ್ಮ ಜ್ಞಾನ ಭಂಡಾರದಿಂದಲೇ ಅಮೆರಿಕ, ಯೂರೋಪ್ ಸೇರಿದಂತೆ ಹಲವು ದೇಶಗಳಲ್ಲಿ ನೆಲಸಿದ್ದಾರೆ’ ಎಂದರು.</p>.<p>ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ‘ಅಮೆರಿಕದಲ್ಲಿರುವ ಹೊಸ ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಕಾಣಲು ಈ ಸಮ್ಮೇಳನ ಮಹತ್ವದ ಪಾತ್ರ ವಹಿಸುತ್ತದೆ’ ಎಂದರು. </p>.<p>ವಿಶ್ವ ಒಕ್ಕಲಿಗರ ಪರಿಷತ್ ಆಫ್ ಅಮೆರಿಕದ ಅಧ್ಯಕ್ಷ ಧನಂಜಯ್ ಮಾತನಾಡಿ, ‘ಮೂಲತಃ ಕೃಷಿಕರಾಗಿರುವ ಒಕ್ಕಲಿಗ ಸಮುದಾಯದವರು ಇಂದು ಜಗತ್ತಿನ ಮೂಲೆ ಮೂಲೆಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಮ್ಮೇಳನವನ್ನು ಮತ್ತಷ್ಟು ವಿಸ್ತಾರಗೊಳಿಸುವ ಯೋಚನೆ ಇದೆ’ ಎಂದರು.</p>.<p>ಸಮ್ಮೇಳನದಲ್ಲಿ ವಿಶಿಷ್ಟ ಭೋಜನ ವ್ಯವಸ್ಥೆ, ಸಮುದಾಯ ವಧು-ವರರ ಪರಿಚಯ ವೇದಿಕೆ, ಉದ್ಯಮಿಗಳಿಗೆ ‘ಬಿಸಿನೆಸ್ ಫೋರಂ’, ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳು, ಮಹಿಳಾ ಚಟುವಟಿಕೆಗಳು ಸೇರಿದಂತೆ ಹಲವು ವಿಷಯಾಧಾರಿತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.</p>.<p>ಸಂಸದ ಡಾ.ಕೆ.ಸುಧಾಕರ, ಶಾಸಕರಾದ ಸಿ.ಎಸ್.ಪುಟ್ಟರಾಜು, ಎಸ್.ಟಿ.ಸೋಮಶೇಖರ್, ಸತೀಶ್ರೆಡ್ಡಿ, ಗುಬ್ಬಿಯ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಒಕ್ಕಲಿಗ ಸಮುದಾಯದ ಮುಖಂಡ ಸಚ್ಚಿದಾನಂದ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು ಎಂದು ಸಂಘಟಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಮೆರಿಕದ ಸ್ಯಾನ್ಹೋಸೆ ನಗರದ ಮೆಕನರಿ ಕನ್ವೆನ್ಷನ್ ಸೆಂಟರ್ನಲ್ಲಿ ಆರಂಭವಾದ ಮೂರು ದಿನಗಳ 18ನೇ ವಿಶ್ವ ಒಕ್ಕಲಿಗ ಮಹಾಸಮ್ಮೇಳನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶನಿವಾರ ಚಾಲನೆ ನೀಡಿದರು.</p>.<p>ವಿಶ್ವದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಮುದಾಯದ ಸದಸ್ಯರು, ವೈವಿಧ್ಯಮಯ ಸಂಸ್ಕೃತಿ, ಪರಂಪರೆ, ಉತ್ಸವವನ್ನು ಈ ಸಮ್ಮೇಳನದ ಮೂಲಕ ಜಗತ್ತಿಗೇ ತೆರೆದಿಟ್ಟರು. ಒಕ್ಕಲಿಗರ ಸಂಸ್ಕೃತಿಯ ಬಣ್ಣನೆ, ಭಕ್ತಿಯ ಮೆರವಣಿಗೆ, ಸುಗ್ಗಿ ಕುಣಿತ, ದೇವರ ಉತ್ಸವ, ಕೋಲಾಟ, ವೇಷ ಭೂಷಣಗಳ ಪ್ರದರ್ಶನವು ಸ್ಯಾನ್ಹೋಸೆ ನಗರದ ರಸ್ತೆಗಳಲ್ಲಿ ಜಾತ್ರಾ ಮಹೋತ್ಸವದ ಅನುಭವ ನೀಡಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿರ್ಮಲಾನಂದನಾಥ ಸ್ವಾಮೀಜಿ, ‘ಒಕ್ಕಲಿಗರು ಜ್ಞಾನ, ಸ್ವಸಾಮರ್ಥ್ಯದಿಂದ ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ತಮ್ಮ ಜ್ಞಾನ ಭಂಡಾರದಿಂದಲೇ ಅಮೆರಿಕ, ಯೂರೋಪ್ ಸೇರಿದಂತೆ ಹಲವು ದೇಶಗಳಲ್ಲಿ ನೆಲಸಿದ್ದಾರೆ’ ಎಂದರು.</p>.<p>ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ‘ಅಮೆರಿಕದಲ್ಲಿರುವ ಹೊಸ ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಕಾಣಲು ಈ ಸಮ್ಮೇಳನ ಮಹತ್ವದ ಪಾತ್ರ ವಹಿಸುತ್ತದೆ’ ಎಂದರು. </p>.<p>ವಿಶ್ವ ಒಕ್ಕಲಿಗರ ಪರಿಷತ್ ಆಫ್ ಅಮೆರಿಕದ ಅಧ್ಯಕ್ಷ ಧನಂಜಯ್ ಮಾತನಾಡಿ, ‘ಮೂಲತಃ ಕೃಷಿಕರಾಗಿರುವ ಒಕ್ಕಲಿಗ ಸಮುದಾಯದವರು ಇಂದು ಜಗತ್ತಿನ ಮೂಲೆ ಮೂಲೆಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಮ್ಮೇಳನವನ್ನು ಮತ್ತಷ್ಟು ವಿಸ್ತಾರಗೊಳಿಸುವ ಯೋಚನೆ ಇದೆ’ ಎಂದರು.</p>.<p>ಸಮ್ಮೇಳನದಲ್ಲಿ ವಿಶಿಷ್ಟ ಭೋಜನ ವ್ಯವಸ್ಥೆ, ಸಮುದಾಯ ವಧು-ವರರ ಪರಿಚಯ ವೇದಿಕೆ, ಉದ್ಯಮಿಗಳಿಗೆ ‘ಬಿಸಿನೆಸ್ ಫೋರಂ’, ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳು, ಮಹಿಳಾ ಚಟುವಟಿಕೆಗಳು ಸೇರಿದಂತೆ ಹಲವು ವಿಷಯಾಧಾರಿತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.</p>.<p>ಸಂಸದ ಡಾ.ಕೆ.ಸುಧಾಕರ, ಶಾಸಕರಾದ ಸಿ.ಎಸ್.ಪುಟ್ಟರಾಜು, ಎಸ್.ಟಿ.ಸೋಮಶೇಖರ್, ಸತೀಶ್ರೆಡ್ಡಿ, ಗುಬ್ಬಿಯ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಒಕ್ಕಲಿಗ ಸಮುದಾಯದ ಮುಖಂಡ ಸಚ್ಚಿದಾನಂದ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು ಎಂದು ಸಂಘಟಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>