‘ಜಗತ್ತಿನ ಬಲಾಢ್ಯ ದೇಶಗಳಾದ ಅಮೆರಿಕ, ಬ್ರೆಜಿಲ್, ಸ್ಪೇನ್, ಇಟಲಿ, ಲಂಡನ್ ಮತ್ತು ಫ್ರಾನ್ಸ್ಗಳಲ್ಲಿ ಸೋಂಕಿತರ ಸಂಖ್ಯೆ ಲಕ್ಷ ದಾಟಿದ್ದರೆ, ಭಾರತದಲ್ಲಿ ಮಾರ್ಚ್ನಲ್ಲಿ ಸೋಂಕಿತರ ಸಂಖ್ಯೆ 200 ದಾಟಿತ್ತು. ಅದರ ತೀವ್ರತೆ ಅರಿತ ಕೇಂದ್ರ ಸರ್ಕಾರ ದೇಶದೊಳಗೆ ಮಾತ್ರವಲ್ಲದೆ, ಸಾರ್ಕ್ ದೇಶಗಳ ನೆರವಿಗೆ ಮುಂದಾಯಿತು. ವಿದೇಶಗಳಲ್ಲಿ ನೆಲೆಸಿದ್ದ ಭಾರತಿಯರನ್ನು ಕರೆತರುವ ಕೆಲಸ ಮಾಡಿತು, ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೋವಿಡ್ ವಿರುದ್ಧ ಸಂಘಟಿತ ಹೋರಾಟಕ್ಕೆ ಸಜ್ಜುಗೊಳಿಸಲಾಯಿತು. ಕೊರೊನಾ ಕಾರಣದಿಂದ ಭಾರತೀಯ ವೈದ್ಯಕೀಯ ಕ್ಷೇತ್ರಗಳಲ್ಲಿ ಅನೇಕ ಸಂಶೋಧನೆಗಳಿಗೆ ಅವಕಾಶ ನೀಡಲಾಗಿದೆ’ ಎಂದರು.