ಪೀಠ ಎರಡು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದಿಂದ ಪ್ರತಿ ವರ್ಷ ಅನುದಾನ ನೀಡಲಾಗುತ್ತಿತ್ತು. ಅದರ ಬದಲು ₹ 5 ಕೋಟಿಯನ್ನು ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿ ಇಟ್ಟು ಅದರಿಂದ ವರ್ಷಕ್ಕೆ ಬರುವ ₹ 40 ಲಕ್ಷ ಬಡ್ಡಿಯಲ್ಲಿ ಪೀಠದ ಕಾರ್ಯಚಟುವಟಿಕೆ ಮುಂದುವರಿಸಲು ತಿಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ತಿಳಿಸಿದರು.