<p><strong>ರಾಜರಾಜೇಶ್ವರಿನಗರ:</strong> ಕ್ಷೇತ್ರದ ಲಗ್ಗೆರೆ ವಾರ್ಡ್ ವ್ಯಾಪ್ತಿಯ ಚೌಡೇಶ್ವರಿನಗರದ ಬಿ.ಬೆಸ್ಟ್ ಶಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ರಸ್ತೆಗಳು ಅಭಿವೃದ್ದಿಯಾಗದೇ, ಚರಂಡಿ ವ್ಯವಸ್ಥೆ ಸರಿಯಾಗಿಲ್ಲದೇ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ.</p>.<p>ಚರಂಡಿ ವ್ಯವಸ್ಥೆಯಿಲ್ಲದ ಕಾರಣ, ಮಳೆ ಬಂದಾಗ ನೀರು ಮನೆಗಳಿಗೆ ನುಗ್ಗುತ್ತದೆ. ಮಳೆ ನೀರಿನೊಂದಿಗೆ ಮಣ್ಣು, ಕಲ್ಲುಗಳು ಕೊಚ್ಚಿಕೊಂಡು ಮನೆ ಅಂಗಳ ಸೇರುತ್ತವೆ’ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಡವರು, ಕೂಲಿ ಕಾರ್ಮಿಕರು, ಸಣ್ಣ ಕೈಗಾರಿಕೆಗಳಲ್ಲಿ ದುಡಿಯುವ ವರ್ಗದವರೆ ಹೆಚ್ಚಾಗಿ ವಾಸಿಸುವ ಈ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ತತ್ಸಾರ ಮಾಡುತ್ತಿದ್ದಾರೆ. ಬಿಡಿಎ ಬಡಾವಣೆ, ಖಾಸಗಿ ಬಡಾವಣೆಗಳಿಗೆ ತೋರುವ ಆಸಕ್ತಿಯನ್ನು ಬಡವರು ವಾಸಿಸುವ ಬಡಾವಣೆಗೆ ತೋರುವುದಿಲ್ಲ’ ಎಂದು ನಿವಾಸಿ ವಸಂತ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಹಲವು ವರ್ಷಗಳಿಂದ ನಮ್ಮ ಬಡಾವಣೆ ರಸ್ತೆಗೆ ಡಾಂಬರೀಕರಣ ಮಾಡಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಮಳೆ ಬಂದಾಗ ರಸ್ತೆ ಕೆಸರು ಗದ್ದೆಯಂತಾಗುತ್ತದೆ. ಬೇಸಿಗೆಯಲ್ಲಿ ದೂಳು ತುಂಬುತ್ತದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>2010ರಿಂದ ಇಲ್ಲಿ ಮನೆಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದೇವೆ. ವಾರಕ್ಕೊಮ್ಮೆ ಕಾವೇರಿ ನೀರು ಬರುತ್ತದೆ. ಐದು ದಿನಕ್ಕೊಮ್ಮೆ ಬೋರ್ವೆಲ್ ನೀರು ಸಿಗುತ್ತದೆ. ಹಲವು ವರ್ಷಗಳ ಹಿಂದೆ ಒಳಚರಂಡಿ ವ್ಯವಸ್ಥೆ ಮಾಡಿದ್ದಾರೆ. ಆದರೆ ರಸ್ತೆ ಹಾಳಾಗಿದೆ’ ಎನ್ನುತ್ತಾರೆ ಸ್ಥಳೀಯ ನಿವಾಸಿ ಸೋಮಶೇಖರ್.</p>.<p>‘ಈ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾಹಿತಿ ಇದೆ. ಈ ವರ್ಷದ ಕ್ರಿಯಾ ಯೋಜನೆಯ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು’ ಎಂದು ಆರ್.ಆರ್.ನಗರ ಕ್ಷೇತ್ರದ ಕಾರ್ಯಪಾಲಕ ಎಂಜಿನಿಯರ್ ಪಾಪರೆಡ್ಡಿ ಭರವಸೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ಕ್ಷೇತ್ರದ ಲಗ್ಗೆರೆ ವಾರ್ಡ್ ವ್ಯಾಪ್ತಿಯ ಚೌಡೇಶ್ವರಿನಗರದ ಬಿ.ಬೆಸ್ಟ್ ಶಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ರಸ್ತೆಗಳು ಅಭಿವೃದ್ದಿಯಾಗದೇ, ಚರಂಡಿ ವ್ಯವಸ್ಥೆ ಸರಿಯಾಗಿಲ್ಲದೇ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ.</p>.<p>ಚರಂಡಿ ವ್ಯವಸ್ಥೆಯಿಲ್ಲದ ಕಾರಣ, ಮಳೆ ಬಂದಾಗ ನೀರು ಮನೆಗಳಿಗೆ ನುಗ್ಗುತ್ತದೆ. ಮಳೆ ನೀರಿನೊಂದಿಗೆ ಮಣ್ಣು, ಕಲ್ಲುಗಳು ಕೊಚ್ಚಿಕೊಂಡು ಮನೆ ಅಂಗಳ ಸೇರುತ್ತವೆ’ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಡವರು, ಕೂಲಿ ಕಾರ್ಮಿಕರು, ಸಣ್ಣ ಕೈಗಾರಿಕೆಗಳಲ್ಲಿ ದುಡಿಯುವ ವರ್ಗದವರೆ ಹೆಚ್ಚಾಗಿ ವಾಸಿಸುವ ಈ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ತತ್ಸಾರ ಮಾಡುತ್ತಿದ್ದಾರೆ. ಬಿಡಿಎ ಬಡಾವಣೆ, ಖಾಸಗಿ ಬಡಾವಣೆಗಳಿಗೆ ತೋರುವ ಆಸಕ್ತಿಯನ್ನು ಬಡವರು ವಾಸಿಸುವ ಬಡಾವಣೆಗೆ ತೋರುವುದಿಲ್ಲ’ ಎಂದು ನಿವಾಸಿ ವಸಂತ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಹಲವು ವರ್ಷಗಳಿಂದ ನಮ್ಮ ಬಡಾವಣೆ ರಸ್ತೆಗೆ ಡಾಂಬರೀಕರಣ ಮಾಡಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಮಳೆ ಬಂದಾಗ ರಸ್ತೆ ಕೆಸರು ಗದ್ದೆಯಂತಾಗುತ್ತದೆ. ಬೇಸಿಗೆಯಲ್ಲಿ ದೂಳು ತುಂಬುತ್ತದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>2010ರಿಂದ ಇಲ್ಲಿ ಮನೆಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದೇವೆ. ವಾರಕ್ಕೊಮ್ಮೆ ಕಾವೇರಿ ನೀರು ಬರುತ್ತದೆ. ಐದು ದಿನಕ್ಕೊಮ್ಮೆ ಬೋರ್ವೆಲ್ ನೀರು ಸಿಗುತ್ತದೆ. ಹಲವು ವರ್ಷಗಳ ಹಿಂದೆ ಒಳಚರಂಡಿ ವ್ಯವಸ್ಥೆ ಮಾಡಿದ್ದಾರೆ. ಆದರೆ ರಸ್ತೆ ಹಾಳಾಗಿದೆ’ ಎನ್ನುತ್ತಾರೆ ಸ್ಥಳೀಯ ನಿವಾಸಿ ಸೋಮಶೇಖರ್.</p>.<p>‘ಈ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾಹಿತಿ ಇದೆ. ಈ ವರ್ಷದ ಕ್ರಿಯಾ ಯೋಜನೆಯ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು’ ಎಂದು ಆರ್.ಆರ್.ನಗರ ಕ್ಷೇತ್ರದ ಕಾರ್ಯಪಾಲಕ ಎಂಜಿನಿಯರ್ ಪಾಪರೆಡ್ಡಿ ಭರವಸೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>