ಬೆಂಗಳೂರು: ಹಿರಿಯ ಸಾಹಿತಿ ಹಾಗೂ ವಾಗ್ಮಿ ಹೀ.ಚಿ. ಶಾಂತವೀರಯ್ಯ (87) ಭಾನುವಾರ ರಾತ್ರಿ ವಿಜಯನಗರದ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ಅವರು ನಾಲ್ಕು ತಿಂಗಳುಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಕನ್ನಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಸೋಮವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಅವರ ಪುತ್ರ ಡಾ. ಶ್ರೀಪ್ರಸಾದ್ ತಿಳಿಸಿದ್ದಾರೆ. ಮೃತರ ಕುಟುಂಬದ ಸದಸ್ಯರಸಂಪರ್ಕಕ್ಕೆ: 98457 95159