<p><strong>ಯಾದಗಿರಿ</strong>: ಬೆಂಗಳೂರು ಉತ್ತರ ತಾಲ್ಲೂಕಿನ ಕೋಗಿಲು ಲೇಔಟ್ನಲ್ಲಿ ನಿರಾಶ್ರಿತರಾದ ಕುಟುಂಬಗಳಿಗೆ ಪುನರ್ವಸತಿ ಹಾಗೂ ಭೂ ಹಕ್ಕುಗಳನ್ನು ಒದಗಿಸುವಂತೆ ಆಗ್ರಹಿಸಿ ಸ್ಲಂ ಜನರ ಸಂಘಟನೆ ಕರ್ನಾಟಕ ಜಿಲ್ಲಾ ಸಮಿತಿ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಡಿಸೆಂಬರ್ ತಿಂಗಳಲ್ಲಿ ಕೋಗಿಲು ಲೇಔಟ್ನಲ್ಲಿ ಇನ್ನೂರಕ್ಕು ಹೆಚ್ಚು ಬಡ ಕುಟುಂಬಗಳ ಮನೆಗಳನ್ನು ಧ್ವಂಸಗೊಳಿಸಲಾಯಿತು. ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ, ವಲಸೆ ಕಾರ್ಮಿಕರು, ಅಸಂಘಟಿತ ಕಾಮಿಕರು, ಗೃಹ ಕಾರ್ಮಿಕರು ಸೇರಿದ ಇತರೆ ಕುಟುಂಬಗಳು ಒಂದೇ ದಿನದಲ್ಲಿ ನಿರಾಶ್ರಿತರಾದರು ಎಂದರು.</p>.<p>ಧ್ವಂಸದ ನಂತರ ಸರ್ಕಾರವು ಎಂಟು ದಿನಗಳೊಳಗೆ ಪುನರ್ವಸತಿ ಒದಗಿಸುವುದಾಗಿ ಭರವಸೆ ನೀಡಿತ್ತು. ರಾಜೀವ್ ಗಾಂಧಿ ವಸತಿ ನಿಗಮವು ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿತು. ದಾಖಲೆ ಪರಿಶೀಲನೆಯ ಪ್ರಕ್ರಿಯೆಯೂ ಹಲವು ಸುತ್ತುಗಳಲ್ಲಿ ನಡೆಯಿತು. ಸಚಿವರು, ಶಾಸಕರು ಮತ್ತು ಮುಖ್ಯಮಂತ್ರಿ ಭರವಸೆ ನೀಡಿದರು. ಆಶ್ವಾಸನೆ ಕೊಟ್ಟು 145 ದಿನಗಳಿಗಿಂತ ಹೆಚ್ಚು ದಿನ ಕಳೆದರೂ ಸಂತ್ರಸ್ತ ಕುಟುಂಬಗಳು ಇನ್ನೂ ಬೀದಿಯಲ್ಲಿ ಬದುಕುತ್ತಿವೆ ಎಂದು ಹೇಳಿದ್ದಾರೆ.</p>.<p>ಬೆಂಗಳೂರು ನಗರವನ್ನು ಕಟ್ಟುವ ಸ್ವಚ್ಛಗೊಳಿಸುವ ಮತ್ತು ಜೀವಂತವಾಗಿಡುವ ಶ್ರಮಜೀವಿಗಳು ವಸತಿ ಹಕ್ಕಿನಿಂದ ವಂಚಿತರಾಗಿದ್ದಾರೆ. ನಗರಾಭಿವೃದ್ಧಿಯ ಅಧಿಕಾರಿಗಳು ಶ್ರೀಮಂತರು ಮತ್ತು ಕಾರ್ಪೋರೆಟ್ ಹಿತಾಸಕ್ತಿಗಳಿಗೆ ಸೀಮಿತವಾಗದೆ ಬಡವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಸಮಿತಿಯ ಜಿಲ್ಲಾ ಅಧ್ಯಕ್ಷ ಫಕಿರಪ್ಪ ಎಸ್. ಹುಲಕಲ್, ಗೌರವ ಅಧ್ಯಕ್ಷ ಖಲೀಲ್ ಅಹಮದ್, ಕಾರ್ಯದರ್ಶಿ ಗಣೇಶ ಕಾಂಬಳೆ, ಸಹ ಕಾರ್ಯದರ್ಶಿ ಶೈಲಜಾ, ಖಜಾಂಚಿಗಳಾದ ಭೀಮಮ್ಮ ಎಂ. ವಡಗೇರಿ, ಸದಸ್ಯರಾದ ಸಿದ್ದಲಿಂಗಮ್ಮ ಟಿ. ರಾಯಚೂರು, ಶಾಹಿನ್, ರೂಬಿನಾ ಬಾನು, ಗೌರಮ್ಮ, ಹಂಪಮ್ಮ, ಅಶೋಕ ರಾಠೋಡ, ಸುರೇಶ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-30-1387178056</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಬೆಂಗಳೂರು ಉತ್ತರ ತಾಲ್ಲೂಕಿನ ಕೋಗಿಲು ಲೇಔಟ್ನಲ್ಲಿ ನಿರಾಶ್ರಿತರಾದ ಕುಟುಂಬಗಳಿಗೆ ಪುನರ್ವಸತಿ ಹಾಗೂ ಭೂ ಹಕ್ಕುಗಳನ್ನು ಒದಗಿಸುವಂತೆ ಆಗ್ರಹಿಸಿ ಸ್ಲಂ ಜನರ ಸಂಘಟನೆ ಕರ್ನಾಟಕ ಜಿಲ್ಲಾ ಸಮಿತಿ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಡಿಸೆಂಬರ್ ತಿಂಗಳಲ್ಲಿ ಕೋಗಿಲು ಲೇಔಟ್ನಲ್ಲಿ ಇನ್ನೂರಕ್ಕು ಹೆಚ್ಚು ಬಡ ಕುಟುಂಬಗಳ ಮನೆಗಳನ್ನು ಧ್ವಂಸಗೊಳಿಸಲಾಯಿತು. ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ, ವಲಸೆ ಕಾರ್ಮಿಕರು, ಅಸಂಘಟಿತ ಕಾಮಿಕರು, ಗೃಹ ಕಾರ್ಮಿಕರು ಸೇರಿದ ಇತರೆ ಕುಟುಂಬಗಳು ಒಂದೇ ದಿನದಲ್ಲಿ ನಿರಾಶ್ರಿತರಾದರು ಎಂದರು.</p>.<p>ಧ್ವಂಸದ ನಂತರ ಸರ್ಕಾರವು ಎಂಟು ದಿನಗಳೊಳಗೆ ಪುನರ್ವಸತಿ ಒದಗಿಸುವುದಾಗಿ ಭರವಸೆ ನೀಡಿತ್ತು. ರಾಜೀವ್ ಗಾಂಧಿ ವಸತಿ ನಿಗಮವು ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿತು. ದಾಖಲೆ ಪರಿಶೀಲನೆಯ ಪ್ರಕ್ರಿಯೆಯೂ ಹಲವು ಸುತ್ತುಗಳಲ್ಲಿ ನಡೆಯಿತು. ಸಚಿವರು, ಶಾಸಕರು ಮತ್ತು ಮುಖ್ಯಮಂತ್ರಿ ಭರವಸೆ ನೀಡಿದರು. ಆಶ್ವಾಸನೆ ಕೊಟ್ಟು 145 ದಿನಗಳಿಗಿಂತ ಹೆಚ್ಚು ದಿನ ಕಳೆದರೂ ಸಂತ್ರಸ್ತ ಕುಟುಂಬಗಳು ಇನ್ನೂ ಬೀದಿಯಲ್ಲಿ ಬದುಕುತ್ತಿವೆ ಎಂದು ಹೇಳಿದ್ದಾರೆ.</p>.<p>ಬೆಂಗಳೂರು ನಗರವನ್ನು ಕಟ್ಟುವ ಸ್ವಚ್ಛಗೊಳಿಸುವ ಮತ್ತು ಜೀವಂತವಾಗಿಡುವ ಶ್ರಮಜೀವಿಗಳು ವಸತಿ ಹಕ್ಕಿನಿಂದ ವಂಚಿತರಾಗಿದ್ದಾರೆ. ನಗರಾಭಿವೃದ್ಧಿಯ ಅಧಿಕಾರಿಗಳು ಶ್ರೀಮಂತರು ಮತ್ತು ಕಾರ್ಪೋರೆಟ್ ಹಿತಾಸಕ್ತಿಗಳಿಗೆ ಸೀಮಿತವಾಗದೆ ಬಡವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಸಮಿತಿಯ ಜಿಲ್ಲಾ ಅಧ್ಯಕ್ಷ ಫಕಿರಪ್ಪ ಎಸ್. ಹುಲಕಲ್, ಗೌರವ ಅಧ್ಯಕ್ಷ ಖಲೀಲ್ ಅಹಮದ್, ಕಾರ್ಯದರ್ಶಿ ಗಣೇಶ ಕಾಂಬಳೆ, ಸಹ ಕಾರ್ಯದರ್ಶಿ ಶೈಲಜಾ, ಖಜಾಂಚಿಗಳಾದ ಭೀಮಮ್ಮ ಎಂ. ವಡಗೇರಿ, ಸದಸ್ಯರಾದ ಸಿದ್ದಲಿಂಗಮ್ಮ ಟಿ. ರಾಯಚೂರು, ಶಾಹಿನ್, ರೂಬಿನಾ ಬಾನು, ಗೌರಮ್ಮ, ಹಂಪಮ್ಮ, ಅಶೋಕ ರಾಠೋಡ, ಸುರೇಶ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-30-1387178056</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>