<p><strong>ಬೆಂಗಳೂರು: </strong>‘ಯಕ್ಷಗಾನವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪರಿಣಾಮಕಾರಿ ಕಲಾ ಮಾಧ್ಯಮ. ಇದು ನಮ್ಮ ನಾಡಿನ ಹೆಮ್ಮೆಯ ಕಲೆ. ಹಲವು ಪೌರಾಣಿಕ ಕಥೆಗಳನ್ನು ಜನರ ಮನಸ್ಸಿಗೆ ಮುಟ್ಟಿಸುವಲ್ಲಿ ಯಕ್ಷಗಾನದ ಪಾತ್ರ ಮಹತ್ವದ್ದು’ ಎಂದು ಭಾರತೀಯ ಆಯುರ್ವೇದ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ಎ.ಕಿಶೋರ್ ಹೇಳಿದರು.</p>.<p>ಕಲಾ ಕದಂಬ ಆರ್ಟ್ ಸೆಂಟರ್, ಚಿಕ್ಕಲಸಂದ್ರದ ಕೆಎಸ್ಆರ್ಟಿಸಿ ಬಡಾವಣೆಯಲ್ಲಿರುವ ಸಿದ್ಧಿ ಗಣಪತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ 2020–21ನೇ ಸಾಲಿನ ಯಕ್ಷಗಾನ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಚಂದನ ವಾಹಿನಿಯ ನಿರೂಪಕಿ ಸ್ನೇಹಾ ನೀಲಪ್ಪಗೌಡ ‘ಪುರುಷ ಕಲಾಪ್ರಕಾರವೆನಿಸಿರುವ ಯಕ್ಷಗಾನದಲ್ಲಿ ಮಹಿಳೆಯರೂ ಛಾಪು ಮೂಡಿಸುತ್ತಿರುವುದು ಖುಷಿಯ ವಿಚಾರ. ನಾವೆಲ್ಲಾ ಈ ಕಲೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ‘ಕೃಷ್ಣ ಗಾರುಡಿ’ ಯಕ್ಷಗಾನ ಪ್ರದರ್ಶಿಸಿದರು. ಕಲಾ ಕದಂಬ ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಉರಾಳ ಇದನ್ನು ನಿರ್ದೇಶಿಸಿದ್ದರು.</p>.<p>ಸಿದ್ಧಿ ಗಣಪತಿ ದೇವಾಲಯ ಸಮಿತಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಯಕ್ಷಗಾನವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪರಿಣಾಮಕಾರಿ ಕಲಾ ಮಾಧ್ಯಮ. ಇದು ನಮ್ಮ ನಾಡಿನ ಹೆಮ್ಮೆಯ ಕಲೆ. ಹಲವು ಪೌರಾಣಿಕ ಕಥೆಗಳನ್ನು ಜನರ ಮನಸ್ಸಿಗೆ ಮುಟ್ಟಿಸುವಲ್ಲಿ ಯಕ್ಷಗಾನದ ಪಾತ್ರ ಮಹತ್ವದ್ದು’ ಎಂದು ಭಾರತೀಯ ಆಯುರ್ವೇದ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ಎ.ಕಿಶೋರ್ ಹೇಳಿದರು.</p>.<p>ಕಲಾ ಕದಂಬ ಆರ್ಟ್ ಸೆಂಟರ್, ಚಿಕ್ಕಲಸಂದ್ರದ ಕೆಎಸ್ಆರ್ಟಿಸಿ ಬಡಾವಣೆಯಲ್ಲಿರುವ ಸಿದ್ಧಿ ಗಣಪತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ 2020–21ನೇ ಸಾಲಿನ ಯಕ್ಷಗಾನ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಚಂದನ ವಾಹಿನಿಯ ನಿರೂಪಕಿ ಸ್ನೇಹಾ ನೀಲಪ್ಪಗೌಡ ‘ಪುರುಷ ಕಲಾಪ್ರಕಾರವೆನಿಸಿರುವ ಯಕ್ಷಗಾನದಲ್ಲಿ ಮಹಿಳೆಯರೂ ಛಾಪು ಮೂಡಿಸುತ್ತಿರುವುದು ಖುಷಿಯ ವಿಚಾರ. ನಾವೆಲ್ಲಾ ಈ ಕಲೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ‘ಕೃಷ್ಣ ಗಾರುಡಿ’ ಯಕ್ಷಗಾನ ಪ್ರದರ್ಶಿಸಿದರು. ಕಲಾ ಕದಂಬ ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಉರಾಳ ಇದನ್ನು ನಿರ್ದೇಶಿಸಿದ್ದರು.</p>.<p>ಸಿದ್ಧಿ ಗಣಪತಿ ದೇವಾಲಯ ಸಮಿತಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>