ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ನಿವೇಶನ ಸಕ್ರಮಕ್ಕೆ ಚಿಂತನೆ: ವಿಶ್ವನಾಥ್

Last Updated 3 ಜುಲೈ 2021, 21:25 IST
ಅಕ್ಷರ ಗಾತ್ರ

ಯಲಹಂಕ: ‘ಬೆಂಗಳೂರು ಸುತ್ತಮುತ್ತಲಿನ ಕಂದಾಯ ನಿವೇಶನಗಳನ್ನು ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಸಕ್ರಮಗೊಳಿಸುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಕಡತನಮಲೆ ಗ್ರಾಮದಲ್ಲಿ ಆಯೋಜಿಸಿದ್ದ ಅರಕೆರೆ ಗ್ರಾಮಪಂಚಾಯ್ತಿಯ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ‘ಕಂದಾಯ ನಿವೇಶನಗಳನ್ನು ಖರೀದಿಸಿ ಮನೆಗಳನ್ನು ನಿರ್ಮಿಸಿಕೊಂಡು ಪಂಚಾಯ್ತಿಯಿಂದ ಮೂಲಸೌಕರ್ಯಗಳನ್ನು ಪಡೆದುಕೊಂಡಿರುವವರಿಗೆ ಪಂಚಾಯ್ತಿಯಿಂದ ಖಾತಾ ದೊರೆಯುತ್ತಿಲ್ಲ. ಇದರಿಂದ ಮಾರಾಟ ಮತ್ತು ಖರೀದಿಮಾಡಲು ಆಗುತ್ತಿಲ್ಲ’ ಎಂದರು.

‘ಮನೆಗಳ ಮಾಲೀಕರಿಗೆ ಶುಲ್ಕವಿಧಿಸಿ, ಸಕ್ರಮ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ಕುರಿತು ಅಂತಿಮ ತೀರ್ಮಾನವಾದರೆ ಗ್ರಾಮಠಾಣಾ ಸುತ್ತಮುತ್ತ ಮನೆಗಳನ್ನು ನಿರ್ಮಿಸಿಕೊಂಡಿರುವವರಿಗೆ ಅನುಕೂಲವಾಗಲಿದೆ. ಅಲ್ಲದೆ ಸರ್ಕಾರ ಮತ್ತು ಪಂಚಾಯ್ತಿಗೆ ಆದಾಯವೂ ಬರಲಿದೆ’ ಎಂದರು.

‘ಅರಕೆರೆ ಪಂಚಾಯ್ತಿಯು ಕೋವಿಡ್ ಸಂದರ್ಭದಲ್ಲಿಯೂ 3 ತಿಂಗಳ ಅವಧಿಯಲ್ಲಿ ₹1.90 ಕೋಟಿ ತೆರಿಗೆ ಸಂಗ್ರಹಿಸಿರುವುದು ಶ್ಲಾಘನೀಯ. ಗ್ರಾಮಸ್ಥರೇ ಸೇರಿಕೊಂಡು ಕಡತನಮಲೆ ಕೆರೆಯ ಹೂಳು ತೆಗೆದು ಅಭಿವೃದ್ಧಿ ಕಾರ್ಯ ಕೈಗೊಂಡು, ಬಹುತೇಕ ಪೂರ್ಣಗೊಳಿಸಿದ್ದಾರೆ. ಇದೇ ಮಾದರಿಯಲ್ಲಿ ಎಲ್ಲ ಪಂಚಾಯ್ತಿಗಳು ಕೆರೆಗಳನ್ನು ಅಭಿವೃದ್ಧಿಗೊಳಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ವೆಂಕಟೇಶ್, ಗ್ರಾಮಪಂಚಾಯ್ತಿ ಅಧ್ಯಕ್ಷ ಕೆ.ಆರ್. ತಿಮ್ಮೇಗೌಡ, ಉಪಾಧ್ಯಕ್ಷೆ ಮಂಜುಳಮ್ಮ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾಗರಾಜ್, ಮುಖಂಡರಾದ ಸತೀಶ್ ಕಡತನಮಲೆ, ಮುನಿದಾಸಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT