<p><strong>ಯಲಹಂಕ</strong>: ‘ಬೆಂಗಳೂರು ಸುತ್ತಮುತ್ತಲಿನ ಕಂದಾಯ ನಿವೇಶನಗಳನ್ನು ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಸಕ್ರಮಗೊಳಿಸುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.</p>.<p>ಕಡತನಮಲೆ ಗ್ರಾಮದಲ್ಲಿ ಆಯೋಜಿಸಿದ್ದ ಅರಕೆರೆ ಗ್ರಾಮಪಂಚಾಯ್ತಿಯ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ‘ಕಂದಾಯ ನಿವೇಶನಗಳನ್ನು ಖರೀದಿಸಿ ಮನೆಗಳನ್ನು ನಿರ್ಮಿಸಿಕೊಂಡು ಪಂಚಾಯ್ತಿಯಿಂದ ಮೂಲಸೌಕರ್ಯಗಳನ್ನು ಪಡೆದುಕೊಂಡಿರುವವರಿಗೆ ಪಂಚಾಯ್ತಿಯಿಂದ ಖಾತಾ ದೊರೆಯುತ್ತಿಲ್ಲ. ಇದರಿಂದ ಮಾರಾಟ ಮತ್ತು ಖರೀದಿಮಾಡಲು ಆಗುತ್ತಿಲ್ಲ’ ಎಂದರು.</p>.<p>‘ಮನೆಗಳ ಮಾಲೀಕರಿಗೆ ಶುಲ್ಕವಿಧಿಸಿ, ಸಕ್ರಮ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ಕುರಿತು ಅಂತಿಮ ತೀರ್ಮಾನವಾದರೆ ಗ್ರಾಮಠಾಣಾ ಸುತ್ತಮುತ್ತ ಮನೆಗಳನ್ನು ನಿರ್ಮಿಸಿಕೊಂಡಿರುವವರಿಗೆ ಅನುಕೂಲವಾಗಲಿದೆ. ಅಲ್ಲದೆ ಸರ್ಕಾರ ಮತ್ತು ಪಂಚಾಯ್ತಿಗೆ ಆದಾಯವೂ ಬರಲಿದೆ’ ಎಂದರು.</p>.<p>‘ಅರಕೆರೆ ಪಂಚಾಯ್ತಿಯು ಕೋವಿಡ್ ಸಂದರ್ಭದಲ್ಲಿಯೂ 3 ತಿಂಗಳ ಅವಧಿಯಲ್ಲಿ ₹1.90 ಕೋಟಿ ತೆರಿಗೆ ಸಂಗ್ರಹಿಸಿರುವುದು ಶ್ಲಾಘನೀಯ. ಗ್ರಾಮಸ್ಥರೇ ಸೇರಿಕೊಂಡು ಕಡತನಮಲೆ ಕೆರೆಯ ಹೂಳು ತೆಗೆದು ಅಭಿವೃದ್ಧಿ ಕಾರ್ಯ ಕೈಗೊಂಡು, ಬಹುತೇಕ ಪೂರ್ಣಗೊಳಿಸಿದ್ದಾರೆ. ಇದೇ ಮಾದರಿಯಲ್ಲಿ ಎಲ್ಲ ಪಂಚಾಯ್ತಿಗಳು ಕೆರೆಗಳನ್ನು ಅಭಿವೃದ್ಧಿಗೊಳಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ವೆಂಕಟೇಶ್, ಗ್ರಾಮಪಂಚಾಯ್ತಿ ಅಧ್ಯಕ್ಷ ಕೆ.ಆರ್. ತಿಮ್ಮೇಗೌಡ, ಉಪಾಧ್ಯಕ್ಷೆ ಮಂಜುಳಮ್ಮ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾಗರಾಜ್, ಮುಖಂಡರಾದ ಸತೀಶ್ ಕಡತನಮಲೆ, ಮುನಿದಾಸಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ‘ಬೆಂಗಳೂರು ಸುತ್ತಮುತ್ತಲಿನ ಕಂದಾಯ ನಿವೇಶನಗಳನ್ನು ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಸಕ್ರಮಗೊಳಿಸುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.</p>.<p>ಕಡತನಮಲೆ ಗ್ರಾಮದಲ್ಲಿ ಆಯೋಜಿಸಿದ್ದ ಅರಕೆರೆ ಗ್ರಾಮಪಂಚಾಯ್ತಿಯ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ‘ಕಂದಾಯ ನಿವೇಶನಗಳನ್ನು ಖರೀದಿಸಿ ಮನೆಗಳನ್ನು ನಿರ್ಮಿಸಿಕೊಂಡು ಪಂಚಾಯ್ತಿಯಿಂದ ಮೂಲಸೌಕರ್ಯಗಳನ್ನು ಪಡೆದುಕೊಂಡಿರುವವರಿಗೆ ಪಂಚಾಯ್ತಿಯಿಂದ ಖಾತಾ ದೊರೆಯುತ್ತಿಲ್ಲ. ಇದರಿಂದ ಮಾರಾಟ ಮತ್ತು ಖರೀದಿಮಾಡಲು ಆಗುತ್ತಿಲ್ಲ’ ಎಂದರು.</p>.<p>‘ಮನೆಗಳ ಮಾಲೀಕರಿಗೆ ಶುಲ್ಕವಿಧಿಸಿ, ಸಕ್ರಮ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ಕುರಿತು ಅಂತಿಮ ತೀರ್ಮಾನವಾದರೆ ಗ್ರಾಮಠಾಣಾ ಸುತ್ತಮುತ್ತ ಮನೆಗಳನ್ನು ನಿರ್ಮಿಸಿಕೊಂಡಿರುವವರಿಗೆ ಅನುಕೂಲವಾಗಲಿದೆ. ಅಲ್ಲದೆ ಸರ್ಕಾರ ಮತ್ತು ಪಂಚಾಯ್ತಿಗೆ ಆದಾಯವೂ ಬರಲಿದೆ’ ಎಂದರು.</p>.<p>‘ಅರಕೆರೆ ಪಂಚಾಯ್ತಿಯು ಕೋವಿಡ್ ಸಂದರ್ಭದಲ್ಲಿಯೂ 3 ತಿಂಗಳ ಅವಧಿಯಲ್ಲಿ ₹1.90 ಕೋಟಿ ತೆರಿಗೆ ಸಂಗ್ರಹಿಸಿರುವುದು ಶ್ಲಾಘನೀಯ. ಗ್ರಾಮಸ್ಥರೇ ಸೇರಿಕೊಂಡು ಕಡತನಮಲೆ ಕೆರೆಯ ಹೂಳು ತೆಗೆದು ಅಭಿವೃದ್ಧಿ ಕಾರ್ಯ ಕೈಗೊಂಡು, ಬಹುತೇಕ ಪೂರ್ಣಗೊಳಿಸಿದ್ದಾರೆ. ಇದೇ ಮಾದರಿಯಲ್ಲಿ ಎಲ್ಲ ಪಂಚಾಯ್ತಿಗಳು ಕೆರೆಗಳನ್ನು ಅಭಿವೃದ್ಧಿಗೊಳಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ವೆಂಕಟೇಶ್, ಗ್ರಾಮಪಂಚಾಯ್ತಿ ಅಧ್ಯಕ್ಷ ಕೆ.ಆರ್. ತಿಮ್ಮೇಗೌಡ, ಉಪಾಧ್ಯಕ್ಷೆ ಮಂಜುಳಮ್ಮ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾಗರಾಜ್, ಮುಖಂಡರಾದ ಸತೀಶ್ ಕಡತನಮಲೆ, ಮುನಿದಾಸಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>