<p><strong>ಯಲಹಂಕ</strong>: ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಕೇಂಪೇಗೌಡ ಪ್ರತಿಮೆಗೆ ಶಾಸಕ ಎಸ್.ಆರ್. ವಿಶ್ವನಾಥ್ ಮಾಲಾರ್ಪಣೆ ಮಾಡಿದರು.</p>.<p>‘ಬೆಂಗಳೂರಿನ ಹೆಸರಿನಲ್ಲಿ ಇಂದು ನಾವು ನಮ್ಮ ಕುಟುಂಬಗಳನ್ನು ಪೋಷಣೆ ಮಾಡಿಕೊಂಡು ವ್ಯಾಪಾರ ಮತ್ತು ವ್ಯವಹಾರಗಳನ್ನು ಮಾಡುತ್ತಿರುವುದಕ್ಕೆ ನಾಡಪ್ರಭು ಕೆಂಪೇಗೌಡರು ಮೂಲ ಕಾರಣಕರ್ತರು’ ಎಂದು ಶಾಸಕರು ಸ್ಮರಿಸಿದರು.</p>.<p>ಕೆಂಪೇಗೌಡರ ಪ್ರತಿಮೆಯನ್ನು ಬೆಳ್ಳಿರಥದಲ್ಲಿ ಇಟ್ಟು, ಮಿನಿವಿಧಾನಸೌಧದಿಂದ ಪೊಲೀಸ್ ಠಾಣೆ ವೃತ್ತ, ಸಂತೆ ವೃತ್ತದ ಮೂಲಕ ಕೋಗಿಲು ವೃತ್ತದವರೆಗೆ ಮೆರವಣಿಗೆ ಮಾಡಲಾಯಿತು. ನಾದಸ್ವರ, ಡೊಳ್ಳುಕುಣಿತ, ಗಾರುಡಿಗೊಂಬೆ, ತಮಟೆವಾದ್ಯ, ವಿವಿಧ ಜನಪದ ಕಲಾತಂಡಗಳ ಪ್ರದರ್ಶನಗಳು ಸಾಥ್ ನೀಡಿದವು.</p>.<p>ತಹಶೀಲ್ದಾರ್ ಅನಿಲ್ಕುಮಾರ್ ಆರೋಲಿಕರ್, ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ಸುಧಾಕರರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಿ.ಒ. ರಮೇಶ್, ಅಪೂರ್ವ ಕುಲಕರ್ಣಿ, ಪಾಲಿಕೆ ಮಾಜಿ ಸದಸ್ಯರಾದ ಎಂ.ಸತೀಶ್, ಎಂ.ಮುನಿರಾಜು, ಚಂದ್ರಮ್ಮ ಕೆಂಪೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಕೇಂಪೇಗೌಡ ಪ್ರತಿಮೆಗೆ ಶಾಸಕ ಎಸ್.ಆರ್. ವಿಶ್ವನಾಥ್ ಮಾಲಾರ್ಪಣೆ ಮಾಡಿದರು.</p>.<p>‘ಬೆಂಗಳೂರಿನ ಹೆಸರಿನಲ್ಲಿ ಇಂದು ನಾವು ನಮ್ಮ ಕುಟುಂಬಗಳನ್ನು ಪೋಷಣೆ ಮಾಡಿಕೊಂಡು ವ್ಯಾಪಾರ ಮತ್ತು ವ್ಯವಹಾರಗಳನ್ನು ಮಾಡುತ್ತಿರುವುದಕ್ಕೆ ನಾಡಪ್ರಭು ಕೆಂಪೇಗೌಡರು ಮೂಲ ಕಾರಣಕರ್ತರು’ ಎಂದು ಶಾಸಕರು ಸ್ಮರಿಸಿದರು.</p>.<p>ಕೆಂಪೇಗೌಡರ ಪ್ರತಿಮೆಯನ್ನು ಬೆಳ್ಳಿರಥದಲ್ಲಿ ಇಟ್ಟು, ಮಿನಿವಿಧಾನಸೌಧದಿಂದ ಪೊಲೀಸ್ ಠಾಣೆ ವೃತ್ತ, ಸಂತೆ ವೃತ್ತದ ಮೂಲಕ ಕೋಗಿಲು ವೃತ್ತದವರೆಗೆ ಮೆರವಣಿಗೆ ಮಾಡಲಾಯಿತು. ನಾದಸ್ವರ, ಡೊಳ್ಳುಕುಣಿತ, ಗಾರುಡಿಗೊಂಬೆ, ತಮಟೆವಾದ್ಯ, ವಿವಿಧ ಜನಪದ ಕಲಾತಂಡಗಳ ಪ್ರದರ್ಶನಗಳು ಸಾಥ್ ನೀಡಿದವು.</p>.<p>ತಹಶೀಲ್ದಾರ್ ಅನಿಲ್ಕುಮಾರ್ ಆರೋಲಿಕರ್, ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ಸುಧಾಕರರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಿ.ಒ. ರಮೇಶ್, ಅಪೂರ್ವ ಕುಲಕರ್ಣಿ, ಪಾಲಿಕೆ ಮಾಜಿ ಸದಸ್ಯರಾದ ಎಂ.ಸತೀಶ್, ಎಂ.ಮುನಿರಾಜು, ಚಂದ್ರಮ್ಮ ಕೆಂಪೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>