<p>ರಾಜರಾಜೇಶ್ವರಿನಗರ: ‘ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ 90ಕ್ಕಿಂತಲೂ ಹೆಚ್ಚು ಅಂಕ ಪಡೆದ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಪ್ರತಿಭಾ ಪುರಸ್ಕಾರ ಮತ್ತು ಉಡುಗೊರೆ ನೀಡಲಾಗುವುದು’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಮಾಗಡಿ ರಸ್ತೆಯ ಅಂಜನಾನಗರ ಬಳಿಯ ಶಾಸಕರ ಕಚೇರಿಯಲ್ಲಿ ನಡೆದ 17 ಗ್ರಾಮ ಪಂಚಾಯಿತಿ ಮತ್ತು 11 ವಾರ್ಡ್ ವ್ಯಾಪ್ತಿಯ ಬ್ಲಾಕ್, ವಾರ್ಡ್ ಕಾಂಗ್ರೆಸ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು , ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಮೇ 15ರಂದು ಹೇರೋಹಳ್ಳಿಯ ಭರತ್ ನಗರದ ಕೆಂಪೇಗೌಡ ಕ್ರೀಡಾಂಗಣದಲ್ಲಿ ಪ್ರತಿಭಾ ಪುರಸ್ಕಾರ, ಬಸವ ಜಯಂತಿ, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ನಡೆಯಲಿದೆ. ಶಿವರಾತ್ರಿ ದೇಶೀಕೇಂದ್ರ ಸ್ವಾಮಿಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಭಾಗವಹಿಸುವರು’ ಎಂದು ಹೇಳಿದರು.</p>.<p>‘ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ 10 ಸಾವಿರ ಹೆಣ್ಣುಮಕ್ಕಳಿಗೆ ಬಹುಮಾನ ನೀಡುವ ಕಾರ್ಯಕ್ರಮವನ್ನು ಮೇ 17ರಂದು ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಿಕ್ಕರಾಜು, ಮೈಲಸಂದ್ರ ನಾಗರಾಜು, ರೇವಣ್ಣಸಿದ್ದಯ್ಯ, ಎಚ್.ಶ್ರೀಧರ್, ಕೆ.ಎಸ್.ಪರ್ವೀಜ್, ಕಾಂಗ್ರೆಸ್ ಮುಖಂಡ ಆರ್.ಶಿವಮಾದಯ್ಯ, ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್, ಅಮೃತ್ಗೌಡ, ಅಂಜನಾನಗರ ಎಂ.ಗಂಗರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-1997068157</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜರಾಜೇಶ್ವರಿನಗರ: ‘ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ 90ಕ್ಕಿಂತಲೂ ಹೆಚ್ಚು ಅಂಕ ಪಡೆದ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಪ್ರತಿಭಾ ಪುರಸ್ಕಾರ ಮತ್ತು ಉಡುಗೊರೆ ನೀಡಲಾಗುವುದು’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಮಾಗಡಿ ರಸ್ತೆಯ ಅಂಜನಾನಗರ ಬಳಿಯ ಶಾಸಕರ ಕಚೇರಿಯಲ್ಲಿ ನಡೆದ 17 ಗ್ರಾಮ ಪಂಚಾಯಿತಿ ಮತ್ತು 11 ವಾರ್ಡ್ ವ್ಯಾಪ್ತಿಯ ಬ್ಲಾಕ್, ವಾರ್ಡ್ ಕಾಂಗ್ರೆಸ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು , ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಮೇ 15ರಂದು ಹೇರೋಹಳ್ಳಿಯ ಭರತ್ ನಗರದ ಕೆಂಪೇಗೌಡ ಕ್ರೀಡಾಂಗಣದಲ್ಲಿ ಪ್ರತಿಭಾ ಪುರಸ್ಕಾರ, ಬಸವ ಜಯಂತಿ, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ನಡೆಯಲಿದೆ. ಶಿವರಾತ್ರಿ ದೇಶೀಕೇಂದ್ರ ಸ್ವಾಮಿಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಭಾಗವಹಿಸುವರು’ ಎಂದು ಹೇಳಿದರು.</p>.<p>‘ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ 10 ಸಾವಿರ ಹೆಣ್ಣುಮಕ್ಕಳಿಗೆ ಬಹುಮಾನ ನೀಡುವ ಕಾರ್ಯಕ್ರಮವನ್ನು ಮೇ 17ರಂದು ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಿಕ್ಕರಾಜು, ಮೈಲಸಂದ್ರ ನಾಗರಾಜು, ರೇವಣ್ಣಸಿದ್ದಯ್ಯ, ಎಚ್.ಶ್ರೀಧರ್, ಕೆ.ಎಸ್.ಪರ್ವೀಜ್, ಕಾಂಗ್ರೆಸ್ ಮುಖಂಡ ಆರ್.ಶಿವಮಾದಯ್ಯ, ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್, ಅಮೃತ್ಗೌಡ, ಅಂಜನಾನಗರ ಎಂ.ಗಂಗರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-1997068157</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>