ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಮುರುಗೇಶ ನಿರಾಣಿ, ಜಿ.ಎಚ್.ತಿಪ್ಪಾರೆಡ್ಡಿ, ನೆಹರೂ ಓಲೆಕಾರ್ ಮತ್ತಿತರರು ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿಯ ಮೇಲೆ ಒತ್ತಡ ಹಾಕಲು ಆರಂಭಿಸಿದ್ದಾರೆ. ಕರಾವಳಿ ಭಾಗದ ಕೆಲವು ಶಾಸಕರು ಸಂಘಪರಿವಾರದ ನಾಯಕರಲ್ಲಿ ಸಚಿವ ಸ್ಥಾನದ ಆಕಾಂಕ್ಷೆಯನ್ನು ತೋಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.