ಪಂಚಮಸಾಲಿ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಬೇರೆ ಕಾರ್ಯ ನಿಮಿತ್ತ ನಾನು ದೆಹಲಿಗೆ ಹೋದರೆ ಹೈಕಮಾಂಡ್ನವರೇ ಕರೆಸಿಕೊಂಡರು ಎಂದು ಸುಮ್ಮನೆ ಸುದ್ದಿ ಮಾಡಿಸಿದರು. ಇದೆಲ್ಲ ಮಾಡುವುದು ಬಿಟ್ಟು ಮೀಸಲಾತಿ ನೀಡುತ್ತೇವೆ ಎಂದು ಸ್ವಚ್ಛ ಮನಸಿನಿಂದ ಹೇಳಿ’ ಎಂದು ಯಡಿಯೂರಪ್ಪನವರನ್ನು ಉದ್ದೇಶಿಸಿ ಹೇಳಿದರು.