‘ಬಿಜೆಪಿಯವರು ಅಧಿಕಾರ ವ್ಯಾಮೋಹದಿಂದ ಸುಳ್ಳು ಕೇಸು ಹಾಕಿ ದೌರ್ಜನ್ಯ ಮಾಡುತ್ತಿದ್ದಾರೆ. ಬಿಜೆಪಿಗೆ ಭದ್ರಾವತಿಯಲ್ಲಿ ನೆಲೆಯೇ ಇಲ್ಲ. ಬಿಜೆಪಿ ಬೀಜ ಬಿತ್ತಬೇಕು ಎಂದು ಗಲಾಟೆ ಮಾಡಿಸುತ್ತಿದ್ದಾರೆ. ಆದರೆ, ಅಲ್ಲಿನ ಜನ ಬಿಜೆಪಿಯನ್ನು ಒಪ್ಪುವುದಿಲ್ಲ. ಸೌಹಾರ್ದ, ಪ್ರೀತಿಯಿಂದ ಭದ್ರಾವತಿ ಜನ ಬದುಕುತ್ತಿದ್ದಾರೆ. ಆದರೆ, ಯಡಿಯೂರಪ್ಪ, ರಾಘವೇಂದ್ರ, ಈಶ್ವರಪ್ಪ ಸಣ್ಣತನದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.