ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಬಾರ್‌ ಮುಚ್ಚಿದ್ದಕ್ಕೆ ಕ್ಯಾಷಿಯರ್‌ಗೆ ಚಾಕು ಇರಿತ

Published 1 ಸೆಪ್ಟೆಂಬರ್ 2023, 15:46 IST
Last Updated 1 ಸೆಪ್ಟೆಂಬರ್ 2023, 15:46 IST
ಅಕ್ಷರ ಗಾತ್ರ

ಬೆಂಗಳೂರು: ಯಡಿಯೂರು ಬಳಿಯ ಬಾರ್‌ವೊಂದರ ಕ್ಯಾಷಿಯರ್ ಸ್ವಾಗತ್‌ ಗೌಡ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಆಗಸ್ಟ್ 28ರಂದು ರಾತ್ರಿ ನಡೆದಿರುವ ಘಟನೆ ಸಂಬಂಧ ಸ್ವಾಗತ್ ಅವರು ದೂರು ನೀಡಿದ್ದಾರೆ. ಆರೋಪಿ ಪುನೀತ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಸ್ವಾಗತ್ ಅವರು ರಾತ್ರಿ ಎಂದಿನಂತೆ ಬಾರ್‌ ಮುಚ್ಚಿದ್ದರು. ಮನೆಗೆ ಹೊರಡಲು ಸಜ್ಜಾಗಿದ್ದರು. ಅದೇ ಸಮಯದಲ್ಲಿ ಬೈಕ್‌ನಲ್ಲಿ ಬಂದಿದ್ದ ಮೂವರು ಆರೋಪಿಗಳು, ಮದ್ಯ ನೀಡುವಂತೆ ಕೇಳಿದ್ದರು. ‘ಬಾರ್ ಬಂದ್ ಮಾಡಲಾಗಿದೆ. ಮದ್ಯವಿಲ್ಲ’ ಎಂದು ಸ್ವಾಗತ್ ಹೇಳಿದ್ದರು. ಮದ್ಯ ನೀಡದಿದ್ದಕ್ಕೆ ಕೋಪಗೊಂಡಿದ್ದ ಆರೋಪಿಗಳು, ಸ್ವಾಗತ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ನಂತರ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಬಾರ್ ಸಿಬ್ಬಂದಿ ಹಾಗೂ ಸ್ಥಳಿಯರು, ಸ್ವಾಗತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಗಳು ಗಾಂಜಾ ಮತ್ತಿನಲ್ಲಿ ಕೃತ್ಯ ಎಸಗಿರುವ ಅನುಮಾನವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT