ಬಿಬಿಎಂಪಿಯಲ್ಲಿ ಫೆಬ್ರುವರಿಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ಯಲಹಂಕದ ಮೇ. ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಡೇರಿವೃತ್ತದ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಡುವ ಪ್ರಸ್ತಾವ ಮಂಡಿಸಲಾಗಿತ್ತು. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಿ, 30 ದಿನ ಕಾಲಾವಕಾಶ ನೀಡಲಾಗಿತ್ತು. ಈ ವೇಳೆ, ಎರಡೇ ಆಕ್ಷೇಪಣೆಗಳು ಬಂದಿದ್ದವು. ಒಬ್ಬರು ಸಾವರ್ಕರ್ ಹೆಸರು ಇಡಬೇಕು ಎಂದು ಹೇಳಿದ್ದರೆ, ಮತ್ತೊಬ್ಬರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಆಕ್ಷೇಪಣೆಗೆ ಸರಿಯಾದ ಆಧಾರ ಇಲ್ಲದ ಹಿನ್ನೆಲೆಯಲ್ಲಿ, ವೀರ ಸಾವರ್ಕರ್ ಹೆಸರಿಡಲು ಆಯುಕ್ತರು ಶಿಫಾರಸು ಮಾಡಿದ್ದರು.