<p><strong>ಬೆಂಗಳೂರು</strong>: ಯಲಹಂಕ ಉಪ ನಗರ– ದೊಡ್ಡಬಳ್ಳಾಪುರ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಯಲಹಂಕ ಉಪನಗರ ವ್ಯಾಪ್ತಿಯಲ್ಲಿ ಮೇಜರ್ ಸಂದೀಪ್ ಉಣ್ಣಿಕೃಷ್ಣನ್ ಮುಖ್ಯರಸ್ತೆ ಬಳಿ ಪರಿಶೀಲಿಸಿ ಮಾತನಾಡಿದ ಅವರು, ‘ಪಾದಚಾರಿ ಮಾರ್ಗದಲ್ಲಿ ಕೆಲವೆಡೆ ಕುಸಿತವಾಗಿದ್ದು, ಅದರಿಂದ ನಾಗರಿಕರ ಓಡಾಟಕ್ಕೆ ಸಮಸ್ಯೆ ಆಗಲಿದೆ. ದುರಸ್ತಿ ಕಾರ್ಯ ಕೈಗೊಂಡು ಕೂಡಲೇ ಸರಿಪಡಿಸಬೇಕು’ ಎಂದು ಹೇಳಿದರು.</p>.<p>ಯಲಹಂಕ ಉಪನಗರ 16ನೇ ಬಿ ಅಡ್ಡರಸ್ತೆಯಲ್ಲಿ ಕೆಲವು ಅಂಗಡಿ ಮಾಲೀಕರು ಪಾದಚಾರಿ ಮಾರ್ಗದಲ್ಲಿ ತ್ಯಾಜ್ಯ ಬಿಸಾಡಿರುವುದನ್ನು ಗಮನಿಸಿ, ಅಂಗಡಿ ಮಾಲೀಕರಿಗೆ ದಂಡ ವಿಧಿಸುವಂತೆ ಮಾರ್ಷಲ್ಗಳಿಗೆ ನಿರ್ದೇಶನ ನೀಡಿದರು.</p>.<p>ಯಲಹಂಕ ಉಪನಗರ ಎ- ಸೆಕ್ಟರ್ನಲ್ಲಿರುವ 1ನೇ ಮುಖ್ಯರಸ್ತೆಯಲ್ಲಿ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ಕಟ್ಟಡ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಯಲಹಂಕ ಉಪನಗರದಲ್ಲಿ ನಿರ್ಮಿಸಿರುವ ವಾಚ್ ಟವರ್, ಸೈಕಲ್ ಟ್ರ್ಯಾಕ್, ಕಾರ್ ಟವರ್, ಕನ್ನಡ ಅಕ್ಷರ ಮಾಲೆ ಹಾಗೂ ಇತರೆ ಆಲಂಕಾರಿಕ ದೀಪಗಳಿಗೆ ಸಂಬಂಧಿಸಿದಂತೆ ವಾರ್ಷಿಕ ನಿರ್ವಹಣೆಗೆ ಅಗತ್ಯವಿರುವ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸುವಂತೆ ಅಧಿಕಾರಿಗಳಿಗೆ ಹೇಳಿದರು.</p>.<p>ಯಲಹಂಕ ವಲಯ ಆಯುಕ್ತ ಕರೀಗೌಡ, ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್, ಮುಖ್ಯ ಎಂಜಿನಿಯರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಲಹಂಕ ಉಪ ನಗರ– ದೊಡ್ಡಬಳ್ಳಾಪುರ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಯಲಹಂಕ ಉಪನಗರ ವ್ಯಾಪ್ತಿಯಲ್ಲಿ ಮೇಜರ್ ಸಂದೀಪ್ ಉಣ್ಣಿಕೃಷ್ಣನ್ ಮುಖ್ಯರಸ್ತೆ ಬಳಿ ಪರಿಶೀಲಿಸಿ ಮಾತನಾಡಿದ ಅವರು, ‘ಪಾದಚಾರಿ ಮಾರ್ಗದಲ್ಲಿ ಕೆಲವೆಡೆ ಕುಸಿತವಾಗಿದ್ದು, ಅದರಿಂದ ನಾಗರಿಕರ ಓಡಾಟಕ್ಕೆ ಸಮಸ್ಯೆ ಆಗಲಿದೆ. ದುರಸ್ತಿ ಕಾರ್ಯ ಕೈಗೊಂಡು ಕೂಡಲೇ ಸರಿಪಡಿಸಬೇಕು’ ಎಂದು ಹೇಳಿದರು.</p>.<p>ಯಲಹಂಕ ಉಪನಗರ 16ನೇ ಬಿ ಅಡ್ಡರಸ್ತೆಯಲ್ಲಿ ಕೆಲವು ಅಂಗಡಿ ಮಾಲೀಕರು ಪಾದಚಾರಿ ಮಾರ್ಗದಲ್ಲಿ ತ್ಯಾಜ್ಯ ಬಿಸಾಡಿರುವುದನ್ನು ಗಮನಿಸಿ, ಅಂಗಡಿ ಮಾಲೀಕರಿಗೆ ದಂಡ ವಿಧಿಸುವಂತೆ ಮಾರ್ಷಲ್ಗಳಿಗೆ ನಿರ್ದೇಶನ ನೀಡಿದರು.</p>.<p>ಯಲಹಂಕ ಉಪನಗರ ಎ- ಸೆಕ್ಟರ್ನಲ್ಲಿರುವ 1ನೇ ಮುಖ್ಯರಸ್ತೆಯಲ್ಲಿ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ಕಟ್ಟಡ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಯಲಹಂಕ ಉಪನಗರದಲ್ಲಿ ನಿರ್ಮಿಸಿರುವ ವಾಚ್ ಟವರ್, ಸೈಕಲ್ ಟ್ರ್ಯಾಕ್, ಕಾರ್ ಟವರ್, ಕನ್ನಡ ಅಕ್ಷರ ಮಾಲೆ ಹಾಗೂ ಇತರೆ ಆಲಂಕಾರಿಕ ದೀಪಗಳಿಗೆ ಸಂಬಂಧಿಸಿದಂತೆ ವಾರ್ಷಿಕ ನಿರ್ವಹಣೆಗೆ ಅಗತ್ಯವಿರುವ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸುವಂತೆ ಅಧಿಕಾರಿಗಳಿಗೆ ಹೇಳಿದರು.</p>.<p>ಯಲಹಂಕ ವಲಯ ಆಯುಕ್ತ ಕರೀಗೌಡ, ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್, ಮುಖ್ಯ ಎಂಜಿನಿಯರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>