<p><strong>ಯಲಹಂಕ</strong>: ಗ್ರಾಮೀಣ ಆಟಗಳು, ನೃತ್ಯ, ಚಿತ್ತಾರದ ರಂಗೋಲಿಗಳು, ಚಿತ್ರಕಲೆ, ಕ್ರೀಡಾ ಸ್ಪರ್ಧೆಗಳು, ರಕ್ತದಾನ-ಆರೋಗ್ಯ ಶಿಬಿರ, ಎತ್ತುಗಳ ಪ್ರದರ್ಶನ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ತೇಲಿಬರುತ್ತಿದ್ದ ಸಂಗೀತದ ಬೀಟ್ಸ್ಗಳಿಗೆ ಕುಣಿದು ಕುಪ್ಪಳಿಸಿದ ಯುವಜನತೆ...</p>.<p>ಕೆಬಿಜಿ ಸ್ವಯಂಸೇವಕರು ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಹಯೋಗದಲ್ಲಿ ಹುಣಸಮಾರನಹಳ್ಳಿಯ ಎಸ್.ಜೆ.ಪಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ʼಜಾಲ ಹಬ್ಬʼದಲ್ಲಿ ಕಂಡುಬಂದ ದೃಶ್ಯಗಳಿವು.</p>.<p>ವಾಲಿಬಾಲ್, ಕಬಡ್ಡಿ, ಹಗ್ಗ-ಜಗ್ಗಾಟ, ಲೆಮೆನ್ ಅಂಡ್ ಸ್ಪೂನ್ ಮತ್ತಿತರ ಕ್ರೀಡಾಸ್ಪರ್ಧೆಗಳು, ಮಹಿಳೆಯರಿಗಾಗಿ ರಂಗೋಲಿ ಹಾಗೂ ಮಕ್ಕಳಿಗಾಗಿ ಚಿತ್ರ ಕಲೆ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೋಷಕರು ಮಕ್ಕಳೊಂದಿಗೆ ಗ್ರಾಮೀಣ ಆಟಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.</p>.<p>ಇದೇ ಸಂದರ್ಭದಲ್ಲಿ ಆಯೋಜಿಸಿದ್ದ ಆರೋಗ್ಯ ಶಿಬಿರದಲ್ಲಿ ವೈದ್ಯರು ರಕ್ತದೊತ್ತಡ, ಮಧುಮೇಹ ಸೇರಿ ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದಂತೆ ತಪಾಸಣೆ ನಡೆಸಿದರು. ರಕ್ತದಾನ ಶಿಬಿರದಲ್ಲಿ ಹಲವುಮಂದಿ ರಕ್ತದಾನ ಮಾಡಿದರು.</p>.<p>ʼನಮ್ಮೂರ ಹೆಮ್ಮೆʼ ಕಾರ್ಯಕ್ರಮದಡಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ 500 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ತಂಡದಿಂದ ಆಯೋಜಿಸಿದ್ದ ಸಂಗೀತ ರಸಸಂಜೆ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ವಸ್ತುಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.</p>.<p>ಈ ವೇಳೆ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿದರು. ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಶೇಷಾದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಅಶೋಕನ್, ಸದಸ್ಯ ದಾನೇಗೌಡ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ. ಜಯಗೋಪಾಲಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ಗ್ರಾಮೀಣ ಆಟಗಳು, ನೃತ್ಯ, ಚಿತ್ತಾರದ ರಂಗೋಲಿಗಳು, ಚಿತ್ರಕಲೆ, ಕ್ರೀಡಾ ಸ್ಪರ್ಧೆಗಳು, ರಕ್ತದಾನ-ಆರೋಗ್ಯ ಶಿಬಿರ, ಎತ್ತುಗಳ ಪ್ರದರ್ಶನ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ತೇಲಿಬರುತ್ತಿದ್ದ ಸಂಗೀತದ ಬೀಟ್ಸ್ಗಳಿಗೆ ಕುಣಿದು ಕುಪ್ಪಳಿಸಿದ ಯುವಜನತೆ...</p>.<p>ಕೆಬಿಜಿ ಸ್ವಯಂಸೇವಕರು ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಹಯೋಗದಲ್ಲಿ ಹುಣಸಮಾರನಹಳ್ಳಿಯ ಎಸ್.ಜೆ.ಪಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ʼಜಾಲ ಹಬ್ಬʼದಲ್ಲಿ ಕಂಡುಬಂದ ದೃಶ್ಯಗಳಿವು.</p>.<p>ವಾಲಿಬಾಲ್, ಕಬಡ್ಡಿ, ಹಗ್ಗ-ಜಗ್ಗಾಟ, ಲೆಮೆನ್ ಅಂಡ್ ಸ್ಪೂನ್ ಮತ್ತಿತರ ಕ್ರೀಡಾಸ್ಪರ್ಧೆಗಳು, ಮಹಿಳೆಯರಿಗಾಗಿ ರಂಗೋಲಿ ಹಾಗೂ ಮಕ್ಕಳಿಗಾಗಿ ಚಿತ್ರ ಕಲೆ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೋಷಕರು ಮಕ್ಕಳೊಂದಿಗೆ ಗ್ರಾಮೀಣ ಆಟಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.</p>.<p>ಇದೇ ಸಂದರ್ಭದಲ್ಲಿ ಆಯೋಜಿಸಿದ್ದ ಆರೋಗ್ಯ ಶಿಬಿರದಲ್ಲಿ ವೈದ್ಯರು ರಕ್ತದೊತ್ತಡ, ಮಧುಮೇಹ ಸೇರಿ ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದಂತೆ ತಪಾಸಣೆ ನಡೆಸಿದರು. ರಕ್ತದಾನ ಶಿಬಿರದಲ್ಲಿ ಹಲವುಮಂದಿ ರಕ್ತದಾನ ಮಾಡಿದರು.</p>.<p>ʼನಮ್ಮೂರ ಹೆಮ್ಮೆʼ ಕಾರ್ಯಕ್ರಮದಡಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ 500 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ತಂಡದಿಂದ ಆಯೋಜಿಸಿದ್ದ ಸಂಗೀತ ರಸಸಂಜೆ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ವಸ್ತುಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.</p>.<p>ಈ ವೇಳೆ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿದರು. ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಶೇಷಾದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಅಶೋಕನ್, ಸದಸ್ಯ ದಾನೇಗೌಡ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ. ಜಯಗೋಪಾಲಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>