<p>ಯಲಹಂಕ: ಯಲಹಂಕದ ವಹ್ನಿಕುಲ ಕ್ಷತ್ರಿಯ ಆರಾಧ್ಯದೇವಿ ಮಹೇಶ್ವರಮ್ಮನವರ ಹೂವಿನ ಕರಗ ಮಹೋತ್ಸವ ಹಾಗೂ ವಿವಿಧ ದೇವರುಗಳ ಪಲ್ಲಕ್ಕಿ ಉತ್ಸವ ಈಚೆಗೆ ವಿಜೃಂಭಣೆಯಿಂದ ನಡೆಯಿತು.</p>.<p>ಬಜಾರ್ ರಸ್ತೆಯಲ್ಲಿರುವ ಮಹೇಶ್ವರಮ್ಮನವರ ದೇವಾಲಯದಿಂದ ಹೊರಟ ಹೂವಿನ ಕರಗ, ಕೋಟೆಬೀದಿ, ಬೆಸ್ತರಬೀದಿ, ಕಾಮಾಕ್ಷಮ್ಮ ಬಡಾವಣೆ, ಹೊಸಬೀದಿ, ಗಾಂಧಿನಗರ, ಮನವರ್ತಿ ತೋಟ, ಡೌನ್ಬಜಾರ್ರಸ್ತೆ, ಮಾರುತಿನಗರ ಹಾಗೂ ವೆಂಕಟಾಲ ಮತ್ತಿತರ ಬಡಾವಣೆಗಳಲ್ಲಿ ಸಂಚರಿಸಿ ಮತ್ತೆ ದೇವಾಲಯಕ್ಕೆ ಆಗಮಿಸಿತು.</p>.<p>ಕರಗ ಮನೆಗಳ ಮುಂದೆ ಬಂದಾಗ ಮಹಿಳೆಯರು ಆರತಿ ಬೆಳಗಿ ಹೂವಿನ ಅರ್ಚನೆಮಾಡಿ ಸ್ವಾಗತಿಸಿದರು. ಸುತ್ತಮುತ್ತಲ ಗ್ರಾಮಗಳ 24 ದೇವರಿಂದ ಅಲಂಕೃತಗೊಂಡಿದ್ದ ಪಲ್ಲಕ್ಕಿ ಉತ್ಸವ, ಕರಗ ಮಹೋತ್ಸವಕ್ಕೆ ವಿಶೇಷ ಮೆರುಗು ನೀಡಿತು.</p>.<p>ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನರು ಕರಗ ವೀಕ್ಷಿಸಿದರು. ಅಯ್ಯಪ್ಪ ಅವರು 6ನೇ ಬಾರಿಗೆ ಕರಗ ಹೊತ್ತಿದ್ದರು. ಕರಗ ಮಹೋತ್ಸವ ಪ್ರಯುಕ್ತ ಕೆರೆ ಆವರಣದ ಕರಗಮಂಟಪವನ್ನು ಹೂವು, ದೀಪಗಳಿಂದ ಅಲಂಕರಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-4-2014816307</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಹಂಕ: ಯಲಹಂಕದ ವಹ್ನಿಕುಲ ಕ್ಷತ್ರಿಯ ಆರಾಧ್ಯದೇವಿ ಮಹೇಶ್ವರಮ್ಮನವರ ಹೂವಿನ ಕರಗ ಮಹೋತ್ಸವ ಹಾಗೂ ವಿವಿಧ ದೇವರುಗಳ ಪಲ್ಲಕ್ಕಿ ಉತ್ಸವ ಈಚೆಗೆ ವಿಜೃಂಭಣೆಯಿಂದ ನಡೆಯಿತು.</p>.<p>ಬಜಾರ್ ರಸ್ತೆಯಲ್ಲಿರುವ ಮಹೇಶ್ವರಮ್ಮನವರ ದೇವಾಲಯದಿಂದ ಹೊರಟ ಹೂವಿನ ಕರಗ, ಕೋಟೆಬೀದಿ, ಬೆಸ್ತರಬೀದಿ, ಕಾಮಾಕ್ಷಮ್ಮ ಬಡಾವಣೆ, ಹೊಸಬೀದಿ, ಗಾಂಧಿನಗರ, ಮನವರ್ತಿ ತೋಟ, ಡೌನ್ಬಜಾರ್ರಸ್ತೆ, ಮಾರುತಿನಗರ ಹಾಗೂ ವೆಂಕಟಾಲ ಮತ್ತಿತರ ಬಡಾವಣೆಗಳಲ್ಲಿ ಸಂಚರಿಸಿ ಮತ್ತೆ ದೇವಾಲಯಕ್ಕೆ ಆಗಮಿಸಿತು.</p>.<p>ಕರಗ ಮನೆಗಳ ಮುಂದೆ ಬಂದಾಗ ಮಹಿಳೆಯರು ಆರತಿ ಬೆಳಗಿ ಹೂವಿನ ಅರ್ಚನೆಮಾಡಿ ಸ್ವಾಗತಿಸಿದರು. ಸುತ್ತಮುತ್ತಲ ಗ್ರಾಮಗಳ 24 ದೇವರಿಂದ ಅಲಂಕೃತಗೊಂಡಿದ್ದ ಪಲ್ಲಕ್ಕಿ ಉತ್ಸವ, ಕರಗ ಮಹೋತ್ಸವಕ್ಕೆ ವಿಶೇಷ ಮೆರುಗು ನೀಡಿತು.</p>.<p>ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನರು ಕರಗ ವೀಕ್ಷಿಸಿದರು. ಅಯ್ಯಪ್ಪ ಅವರು 6ನೇ ಬಾರಿಗೆ ಕರಗ ಹೊತ್ತಿದ್ದರು. ಕರಗ ಮಹೋತ್ಸವ ಪ್ರಯುಕ್ತ ಕೆರೆ ಆವರಣದ ಕರಗಮಂಟಪವನ್ನು ಹೂವು, ದೀಪಗಳಿಂದ ಅಲಂಕರಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-4-2014816307</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>