ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿಗೆ ಚಾಲನೆ

Last Updated 11 ಮಾರ್ಚ್ 2020, 23:17 IST
ಅಕ್ಷರ ಗಾತ್ರ

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಥಣಿಸಂದ್ರ ವಾರ್ಡ್‌ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ಬಿಬಿಎಂಪಿ ನಿರ್ವಹಣೆ ಮತ್ತು ಅಭಿವೃದ್ಧಿ ಅನುದಾನದಡಿಯಲ್ಲಿ ₹2 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಸಾರಾಯಿಪಾಳ್ಯ ಮುಖ್ಯರಸ್ತೆಯಲ್ಲಿ ಹೆಚ್ಚಿನ ಸಂಚಾರದಟ್ಟಣೆಯಿದ್ದು, ಕಾವೇರಿ ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ ಕೈಗೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಹಾಳಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಇದರ ನಿವಾರಣೆಗಾಗಿ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದರು.

‘ಬಡಾವಣೆಯಲ್ಲಿ ನೀರಿನ ಸಮಸ್ಯೆಯಿದ್ದು, ಕೂಡಲೇ ಪರಿಹರಿಸಬೇಕು’ ಎಂದು ಸಾರ್ವಜನಿಕರು ಕೃಷ್ಣಬೈರೇಗೌಡ ಅವರಿಗೆ ಮನವಿ ಮಾಡಿದರು.

ಇದೇ ವೇಳೆ ಕಾಂಗ್ರೆಸ್ ಮುಖಂಡ ಮರಿಮಾದಪ್ಪ ಅವರು ಸಾರ್ವಜನಿಕರಿಗೆ 150 ಮುಖಗವಸುಗಳನ್ನು ವಿತರಿಸಿದರು. ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಪಳನಿ ವೆಂಕಟೇಶ್, ಡಿ.ಬಿ.ಸುರೇಶ್ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT