<p><strong>ಯಲಹಂಕ</strong>: ‘ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಲ್ಲಿ ಕಲಿಯುವ ಅವಧಿಯಲ್ಲಿ ಲಭ್ಯವಾಗುವ ಪ್ರತಿ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು, ಪರಿಪೂರ್ಣ ವ್ಯಕ್ತಿಗಳಾಗಬೇಕು’ ಎಂದು ಡಬ್ಲ್ಯು.ಎಲ್.ಡಿ.ಡಿ ಪ್ರೈ. ಲಿಮಿಟೆಡ್ ಕಂಪನಿಯ ಕಾರ್ಯನಿರ್ವಹಣಾಧಿಕಾರಿ ಅರಿಹಂತ್ ಜೈನ್ ಸಲಹೆ ನೀಡಿದರು.</p>.<p>ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 2025-26ನೇ ಶೈಕ್ಷಣಿಕ ಸಾಲಿನ ತಾಂತ್ರಿಕೇತರ ಕಾರ್ಯಕ್ರಮದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತಕೋರುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪದವಿ ಪಡೆದ ನಂತರ ನಿಮ್ಮೊಂದಿಗೆ ನಿಜವಾಗಿ ಉಳಿಯುವುದು ಅನುಭವ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಉತ್ಸವಗಳು, ಸ್ಪರ್ಧೆಗಳು ಹಾಗೂ ಬಹು ಇಂಟರ್ನ್ಷಿಪ್ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿನಲ್ಲಿ ಎದುರಾಗುವ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಜ್ಜಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ.ಶ್ಯಾಮರಾಜು ಮಾತನಾಡಿ, ‘ವಿಶ್ವವಿದ್ಯಾಲಯವು ಪ್ರತಿಭೆಯನ್ನು ಪೋಷಿಸುವ ಮತ್ತು ನಾವಿನ್ಯವನ್ನು ಉತ್ತೇಜಿಸುವ ಕಾರ್ಯವನ್ನು ಮುಂದುವರಿಸುತ್ತಿದೆ’ ಎಂದರು.</p>.<p>ನೂತನ ವಿದ್ಯಾರ್ಥಿಗಳು ಪರಿಸರ ಕಾಳಜಿಯ ಪ್ರತಿಜ್ಞೆ ಸ್ವೀಕರಿಸಿದರು. ನಂತರ ಪ್ರತಿ ವಿದ್ಯಾರ್ಥಿಯು ‘ಒಬ್ಬ ವಿದ್ಯಾರ್ಥಿ-ಒಂದು ಮರ’ ಎಂಬ ತತ್ವದಡಿ ಒಂದೊಂದು ಸಸಿಯನ್ನು ನೆಟ್ಟರು.</p>.<p>ಮಾರ್ವಾಡಿ ವಿಶ್ವವಿದ್ಯಾಲಯದ ಟ್ರಸ್ಟಿ ಎಂ.ಡಿ.ಜೀತ್ ಮಾರ್ವಾಡಿ, ರೇವಾ ವಿಶ್ವವಿದ್ಯಾಲಯದ ಕುಲಪತಿ ಸಂಜಯ್.ಆರ್ ಚಟ್ನಿಸ್, ಕುಲಸಚಿವ ಕೆ.ಎಸ್.ನಾರಾಯಣಸ್ವಾಮಿ, ಬ್ಯುಸಿನೆಸ್ ಸ್ಕೂಲ್ನ ಡೀನ್ ಶುಭ.ಎ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ‘ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಲ್ಲಿ ಕಲಿಯುವ ಅವಧಿಯಲ್ಲಿ ಲಭ್ಯವಾಗುವ ಪ್ರತಿ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು, ಪರಿಪೂರ್ಣ ವ್ಯಕ್ತಿಗಳಾಗಬೇಕು’ ಎಂದು ಡಬ್ಲ್ಯು.ಎಲ್.ಡಿ.ಡಿ ಪ್ರೈ. ಲಿಮಿಟೆಡ್ ಕಂಪನಿಯ ಕಾರ್ಯನಿರ್ವಹಣಾಧಿಕಾರಿ ಅರಿಹಂತ್ ಜೈನ್ ಸಲಹೆ ನೀಡಿದರು.</p>.<p>ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 2025-26ನೇ ಶೈಕ್ಷಣಿಕ ಸಾಲಿನ ತಾಂತ್ರಿಕೇತರ ಕಾರ್ಯಕ್ರಮದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತಕೋರುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪದವಿ ಪಡೆದ ನಂತರ ನಿಮ್ಮೊಂದಿಗೆ ನಿಜವಾಗಿ ಉಳಿಯುವುದು ಅನುಭವ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಉತ್ಸವಗಳು, ಸ್ಪರ್ಧೆಗಳು ಹಾಗೂ ಬಹು ಇಂಟರ್ನ್ಷಿಪ್ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸ್ಪರ್ಧಾತ್ಮಕ ಜಗತ್ತಿನಲ್ಲಿ ಎದುರಾಗುವ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಜ್ಜಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ.ಶ್ಯಾಮರಾಜು ಮಾತನಾಡಿ, ‘ವಿಶ್ವವಿದ್ಯಾಲಯವು ಪ್ರತಿಭೆಯನ್ನು ಪೋಷಿಸುವ ಮತ್ತು ನಾವಿನ್ಯವನ್ನು ಉತ್ತೇಜಿಸುವ ಕಾರ್ಯವನ್ನು ಮುಂದುವರಿಸುತ್ತಿದೆ’ ಎಂದರು.</p>.<p>ನೂತನ ವಿದ್ಯಾರ್ಥಿಗಳು ಪರಿಸರ ಕಾಳಜಿಯ ಪ್ರತಿಜ್ಞೆ ಸ್ವೀಕರಿಸಿದರು. ನಂತರ ಪ್ರತಿ ವಿದ್ಯಾರ್ಥಿಯು ‘ಒಬ್ಬ ವಿದ್ಯಾರ್ಥಿ-ಒಂದು ಮರ’ ಎಂಬ ತತ್ವದಡಿ ಒಂದೊಂದು ಸಸಿಯನ್ನು ನೆಟ್ಟರು.</p>.<p>ಮಾರ್ವಾಡಿ ವಿಶ್ವವಿದ್ಯಾಲಯದ ಟ್ರಸ್ಟಿ ಎಂ.ಡಿ.ಜೀತ್ ಮಾರ್ವಾಡಿ, ರೇವಾ ವಿಶ್ವವಿದ್ಯಾಲಯದ ಕುಲಪತಿ ಸಂಜಯ್.ಆರ್ ಚಟ್ನಿಸ್, ಕುಲಸಚಿವ ಕೆ.ಎಸ್.ನಾರಾಯಣಸ್ವಾಮಿ, ಬ್ಯುಸಿನೆಸ್ ಸ್ಕೂಲ್ನ ಡೀನ್ ಶುಭ.ಎ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>