‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಆರೋಪಿ ಪ್ರೀಯೋನಾಥ್, ಗುತ್ತಿಗೆದಾರ ಐನಕ್ ಹಕ್ ಬಳಿ ಕೆಲಸಕ್ಕೆ ಸೇರಿದ್ದ. ಡಿ. 18ರಂದು ಕೂಲಿ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಆಗಿತ್ತು. ಕಬ್ಬಿಣದ ರಾಡ್ನಿಂದ ಐನಕ್ ತಲೆಗೆ ನಾಲ್ಕು ಬಾರಿ ಹೊಡೆದಿದ್ದ ಆರೋಪಿ, ಸ್ಥಳದಿಂದ ಪರಾರಿಯಾಗಿದ್ದ. ಪ್ರಜ್ಞೆ ತಪ್ಪಿ ಬಿದ್ದಿದ್ದ ಐನಕ್ ಅವರನ್ನು ಕಾರ್ಮಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಡಿ. 19ರಂದು ಅವರು ಮೃತಪಟ್ಟಿದ್ದರು’ ಎಂದು ಹೇಳಿದರು.