<p><strong>ಯಲಹಂಕ:</strong> ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯ (ಐಎಸ್ಟಿಇ) ಕೇಂದ್ರನ್ನು ನಗರದ ಏಟ್ರಿಯಾ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ತೆರೆಯಲಾಗಿದೆ. ವಿದ್ಯಾರ್ಥಿಗಳು ಮತ್ತು ಬೋಧಕರ ಕೌಶಲ ವೃದ್ಧಿಸುವ ಕಾರ್ಯವನ್ನು ಈ ಕೇಂದ್ರ ಮಾಡಲಿದೆ.</p>.<p>ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಐಎಸ್ಟಿಇ ಅಧ್ಯಕ್ಷ ಡಾ. ಪ್ರತಾಪ್ ದೇಸಾಯಿ, ‘ಜೀವನದಲ್ಲಿ ಎಂಜಿನಿಯರ್ ಆಗಬೇಕೆಂದು ಬಯಸುವ ವಿದ್ಯಾರ್ಥಿಯು ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿಕರ್ತನಾಗಬೇಕೇ ಹೊರತು, ಇನ್ನೊಬ್ಬರ ಕೈಕೆಳಗೆ ಕೆಲಸ ಮಾಡುವಂತಾಗಬಾರದು. ನಿಮ್ಮ ಸ್ವ-ಇಚ್ಛೆಯಿಂದ ಎಂಜಿನಿಯರ್ ಆಗಬೇಕೇ ವಿನಾ ಯಾರದೋ ಒತ್ತಾಯಕ್ಕೆ ಕಟ್ಟುಬಿದ್ದು ಎಂಜಿನಿಯರ್ ಆಗಬೇಡಿ’ ಎಂದರು.</p>.<p>‘ಭಾರತವು 40 ವರ್ಷಗಳಿಂದಲೂ ವಿಶ್ವದ ಮುಂಚೂಣಿ ದೇಶಗಳೊಂದಿಗೆ ಸ್ಪರ್ಧೆ ಮಾಡುತ್ತಾ ಬಂದಿದೆ. ಈ ಅವಧಿಯಲ್ಲಿ ಸಾಕಷ್ಟು ಬದಲಾವಣೆ ಮತ್ತು ಬೆಳವಣಿಗೆಗಳಾಗಿದ್ದು, ಮುಂದಿನ 10 ವರ್ಷಗಳಲ್ಲಿ ಮುಂಚೂಣಿಯಲ್ಲಿರುವ ಜಗತ್ತಿನ ಎಲ್ಲ ಕಂಪನಿಗಳ ಕಚೇರಿಗಳು ಭಾರತದಲ್ಲಿರುತ್ತವೆ’ ಎಂದು ತಿಳಿಸಿದರು.</p>.<p>ಐಎಸ್ಟಿಇ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ. ಡಿ.ಎಸ್. ಸುರೇಶ್, ‘ಭಾರತದ ಶಿಕ್ಷಣದ ನೀತಿಯಲ್ಲಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ನಾವು ಎಡವುತ್ತಿದ್ದೇವೆ. ಶೇ.17 ರಷ್ಟು ವಿದ್ಯಾರ್ಥಿಗಳು ಮಾತ್ರ ಉದ್ಯೋಗಕ್ಕೆ ಯೋಗ್ಯರಾಗಿದ್ದರೆ, ಇನ್ನುಳಿದ ಶೇ.83ರಷ್ಟು ವಿದ್ಯಾರ್ಥಿಗಳು ಕಂಪನಿಗಳ ನಿರೀಕ್ಷೆಗೆ ತಕ್ಕಂತೆ ಸಿದ್ಧರಾಗಿರುವುದಿಲ್ಲ. ಈ ಅಂತರವನ್ನು ಸರಿಪಡಿಸಬೇಕು’ ಎಂದು ತಿಳಿಸಿದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಗಣಕಯಂತ್ರ ವಿಭಾಗದಲ್ಲಿ 10ನೇ ರ್ಯಾಂಕ್ ಪಡೆದ ಸುಪ್ರಿತಾ ಎಸ್.ರಾವ್ ಸೇರಿದಂತೆ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಏಟ್ರಿಯಾ ತಾಂತ್ರಿಕ ಶಿಕ್ಷಣಸಂಸ್ಥೆಯ ತಾಂತ್ರಿಕ ನಿರ್ದೇಶಕ ಡಾ. ಕೌಶಿಕ್ ರಾಜು, ವ್ಯವಸ್ಥಾಪಕ ಟ್ರಸ್ಟಿ ಕೆ.ನಾಗರಾಜು, ಡಾ.ಸಂಗಪ್ಪ, ಪ್ರಾಚಾರ್ಯ ಡಾ.ಟಿ.ಎನ್.ಶ್ರೀನಿವಾಸ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯ (ಐಎಸ್ಟಿಇ) ಕೇಂದ್ರನ್ನು ನಗರದ ಏಟ್ರಿಯಾ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ತೆರೆಯಲಾಗಿದೆ. ವಿದ್ಯಾರ್ಥಿಗಳು ಮತ್ತು ಬೋಧಕರ ಕೌಶಲ ವೃದ್ಧಿಸುವ ಕಾರ್ಯವನ್ನು ಈ ಕೇಂದ್ರ ಮಾಡಲಿದೆ.</p>.<p>ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಐಎಸ್ಟಿಇ ಅಧ್ಯಕ್ಷ ಡಾ. ಪ್ರತಾಪ್ ದೇಸಾಯಿ, ‘ಜೀವನದಲ್ಲಿ ಎಂಜಿನಿಯರ್ ಆಗಬೇಕೆಂದು ಬಯಸುವ ವಿದ್ಯಾರ್ಥಿಯು ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿಕರ್ತನಾಗಬೇಕೇ ಹೊರತು, ಇನ್ನೊಬ್ಬರ ಕೈಕೆಳಗೆ ಕೆಲಸ ಮಾಡುವಂತಾಗಬಾರದು. ನಿಮ್ಮ ಸ್ವ-ಇಚ್ಛೆಯಿಂದ ಎಂಜಿನಿಯರ್ ಆಗಬೇಕೇ ವಿನಾ ಯಾರದೋ ಒತ್ತಾಯಕ್ಕೆ ಕಟ್ಟುಬಿದ್ದು ಎಂಜಿನಿಯರ್ ಆಗಬೇಡಿ’ ಎಂದರು.</p>.<p>‘ಭಾರತವು 40 ವರ್ಷಗಳಿಂದಲೂ ವಿಶ್ವದ ಮುಂಚೂಣಿ ದೇಶಗಳೊಂದಿಗೆ ಸ್ಪರ್ಧೆ ಮಾಡುತ್ತಾ ಬಂದಿದೆ. ಈ ಅವಧಿಯಲ್ಲಿ ಸಾಕಷ್ಟು ಬದಲಾವಣೆ ಮತ್ತು ಬೆಳವಣಿಗೆಗಳಾಗಿದ್ದು, ಮುಂದಿನ 10 ವರ್ಷಗಳಲ್ಲಿ ಮುಂಚೂಣಿಯಲ್ಲಿರುವ ಜಗತ್ತಿನ ಎಲ್ಲ ಕಂಪನಿಗಳ ಕಚೇರಿಗಳು ಭಾರತದಲ್ಲಿರುತ್ತವೆ’ ಎಂದು ತಿಳಿಸಿದರು.</p>.<p>ಐಎಸ್ಟಿಇ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ. ಡಿ.ಎಸ್. ಸುರೇಶ್, ‘ಭಾರತದ ಶಿಕ್ಷಣದ ನೀತಿಯಲ್ಲಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ನಾವು ಎಡವುತ್ತಿದ್ದೇವೆ. ಶೇ.17 ರಷ್ಟು ವಿದ್ಯಾರ್ಥಿಗಳು ಮಾತ್ರ ಉದ್ಯೋಗಕ್ಕೆ ಯೋಗ್ಯರಾಗಿದ್ದರೆ, ಇನ್ನುಳಿದ ಶೇ.83ರಷ್ಟು ವಿದ್ಯಾರ್ಥಿಗಳು ಕಂಪನಿಗಳ ನಿರೀಕ್ಷೆಗೆ ತಕ್ಕಂತೆ ಸಿದ್ಧರಾಗಿರುವುದಿಲ್ಲ. ಈ ಅಂತರವನ್ನು ಸರಿಪಡಿಸಬೇಕು’ ಎಂದು ತಿಳಿಸಿದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಗಣಕಯಂತ್ರ ವಿಭಾಗದಲ್ಲಿ 10ನೇ ರ್ಯಾಂಕ್ ಪಡೆದ ಸುಪ್ರಿತಾ ಎಸ್.ರಾವ್ ಸೇರಿದಂತೆ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಏಟ್ರಿಯಾ ತಾಂತ್ರಿಕ ಶಿಕ್ಷಣಸಂಸ್ಥೆಯ ತಾಂತ್ರಿಕ ನಿರ್ದೇಶಕ ಡಾ. ಕೌಶಿಕ್ ರಾಜು, ವ್ಯವಸ್ಥಾಪಕ ಟ್ರಸ್ಟಿ ಕೆ.ನಾಗರಾಜು, ಡಾ.ಸಂಗಪ್ಪ, ಪ್ರಾಚಾರ್ಯ ಡಾ.ಟಿ.ಎನ್.ಶ್ರೀನಿವಾಸ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>