ಐಎಸ್ಟಿಇ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ. ಡಿ.ಎಸ್. ಸುರೇಶ್, ‘ಭಾರತದ ಶಿಕ್ಷಣದ ನೀತಿಯಲ್ಲಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ನಾವು ಎಡವುತ್ತಿದ್ದೇವೆ. ಶೇ.17 ರಷ್ಟು ವಿದ್ಯಾರ್ಥಿಗಳು ಮಾತ್ರ ಉದ್ಯೋಗಕ್ಕೆ ಯೋಗ್ಯರಾಗಿದ್ದರೆ, ಇನ್ನುಳಿದ ಶೇ.83ರಷ್ಟು ವಿದ್ಯಾರ್ಥಿಗಳು ಕಂಪನಿಗಳ ನಿರೀಕ್ಷೆಗೆ ತಕ್ಕಂತೆ ಸಿದ್ಧರಾಗಿರುವುದಿಲ್ಲ. ಈ ಅಂತರವನ್ನು ಸರಿಪಡಿಸಬೇಕು’ ಎಂದು ತಿಳಿಸಿದರು.