<p><strong>ಬೆಂಗಳೂರು</strong>: ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಾಟ ಮಾಡಿ ವಂಚಿಸುತ್ತಿದ್ದ ಆರೋಪಿಯನ್ನು ಯಲಹಂಕ ನ್ಯೂಟೌನ್ ಠಾಣೆಯ ಪೊಲೀಸರು ಹೊರ ರಾಜ್ಯದಲ್ಲಿ ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ.</p>.<p>ಪ್ರದೀಪ್ ಅಲಿಯಾಸ್ ‘ಪಾಯಿಸನ್’ ಪ್ರದೀಪ್ ಬಂಧಿತ ಆರೋಪಿ.</p>.<p>‘ವಂಚನೆ ಸಂಬಂಧ ಇಬ್ಬರು ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.</p>.<p>‘ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್ ಸೇರಿದಂತೆ ಹಲವು ಕಡೆಯ ನಿವಾಸಿಗಳಿಗೆ ಆರೋಪಿ ವಂಚಿಸಿದ್ದಾನೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ಬೇರೆಯವರ ನಿವೇಶನಕ್ಕೆ ಆರೋಪಿ ನಕಲಿ ದಾಖಲೆ ಸೃಷ್ಟಿಸುತ್ತಿದ್ದ. ನಂತರ, ನನ್ನದೇ ನಿವೇಶನ ಎಂಬುದಾಗಿ ನಂಬಿಸಿ ಮಾರಾಟ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಪ್ರದೀಪ್, ರೌಡಿಶೀಟರ್ ಆಟೊರಾಮನ ಶಿಷ್ಯ. ಆಟೊ ರಾಮನ ಜತೆಗೆ ಸೇರಿಕೊಂಡು ನಕಲಿ ದಾಖಲೆ ಸೃಷ್ಟಿಸುತ್ತಿದ್ದ. ಸರ್ಕಾರಿ ಅಧಿಕಾರಿಗಳನ್ನೇ ಹುಡುಕಿ ಅವರಿಗೆ ಮಾರಾಟ ಮಾಡುತ್ತಿದ್ದ. ಈ ರೀತಿ ದಂಧೆ ನಡೆಸಿ ಆರೋಪಿ ಕೋಟ್ಯಂತರ ರೂಪಾಯಿ ಗಳಿಸಿರುವುದು ತನಿಖೆಯಿಂದ ಪತ್ತೆಯಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಕಾನ್ಸ್ಟೆಬಲ್ಗಳು, ಪೊಲೀಸ್ ಅಧಿಕಾರಿಗಳಿಗೂ ಆರೋಪಿ ವಂಚನೆ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.</p>.<p>‘ಪ್ರಕರಣದ ಕುರಿತು ಇಬ್ಬರು ಮಾತ್ರ ದೂರು ನೀಡಿದ್ದಾರೆ. ವಂಚನೆಗೆ ಒಳಗಾದ ಬಗ್ಗೆ ಯಾವುದೇ ಪೊಲೀಸ್ ಸಿಬ್ಬಂದಿ ದೂರು ನೀಡಿಲ್ಲ. ದೂರು ನೀಡಿದರೆ ತನಿಖೆ ನಡೆಸಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಾಟ ಮಾಡಿ ವಂಚಿಸುತ್ತಿದ್ದ ಆರೋಪಿಯನ್ನು ಯಲಹಂಕ ನ್ಯೂಟೌನ್ ಠಾಣೆಯ ಪೊಲೀಸರು ಹೊರ ರಾಜ್ಯದಲ್ಲಿ ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ.</p>.<p>ಪ್ರದೀಪ್ ಅಲಿಯಾಸ್ ‘ಪಾಯಿಸನ್’ ಪ್ರದೀಪ್ ಬಂಧಿತ ಆರೋಪಿ.</p>.<p>‘ವಂಚನೆ ಸಂಬಂಧ ಇಬ್ಬರು ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.</p>.<p>‘ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್ ಸೇರಿದಂತೆ ಹಲವು ಕಡೆಯ ನಿವಾಸಿಗಳಿಗೆ ಆರೋಪಿ ವಂಚಿಸಿದ್ದಾನೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ಬೇರೆಯವರ ನಿವೇಶನಕ್ಕೆ ಆರೋಪಿ ನಕಲಿ ದಾಖಲೆ ಸೃಷ್ಟಿಸುತ್ತಿದ್ದ. ನಂತರ, ನನ್ನದೇ ನಿವೇಶನ ಎಂಬುದಾಗಿ ನಂಬಿಸಿ ಮಾರಾಟ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಪ್ರದೀಪ್, ರೌಡಿಶೀಟರ್ ಆಟೊರಾಮನ ಶಿಷ್ಯ. ಆಟೊ ರಾಮನ ಜತೆಗೆ ಸೇರಿಕೊಂಡು ನಕಲಿ ದಾಖಲೆ ಸೃಷ್ಟಿಸುತ್ತಿದ್ದ. ಸರ್ಕಾರಿ ಅಧಿಕಾರಿಗಳನ್ನೇ ಹುಡುಕಿ ಅವರಿಗೆ ಮಾರಾಟ ಮಾಡುತ್ತಿದ್ದ. ಈ ರೀತಿ ದಂಧೆ ನಡೆಸಿ ಆರೋಪಿ ಕೋಟ್ಯಂತರ ರೂಪಾಯಿ ಗಳಿಸಿರುವುದು ತನಿಖೆಯಿಂದ ಪತ್ತೆಯಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಕಾನ್ಸ್ಟೆಬಲ್ಗಳು, ಪೊಲೀಸ್ ಅಧಿಕಾರಿಗಳಿಗೂ ಆರೋಪಿ ವಂಚನೆ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.</p>.<p>‘ಪ್ರಕರಣದ ಕುರಿತು ಇಬ್ಬರು ಮಾತ್ರ ದೂರು ನೀಡಿದ್ದಾರೆ. ವಂಚನೆಗೆ ಒಳಗಾದ ಬಗ್ಗೆ ಯಾವುದೇ ಪೊಲೀಸ್ ಸಿಬ್ಬಂದಿ ದೂರು ನೀಡಿಲ್ಲ. ದೂರು ನೀಡಿದರೆ ತನಿಖೆ ನಡೆಸಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>