ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಮಾತನಾಡಿ, ‘ವೇಮನರು ಕೇವಲ ಒಂದು ಜಾತಿ-ಧರ್ಮಕ್ಕೆ ಸೀಮಿತವಾಗಿರದೆ, ಬಸವಣ್ಣನವರ ನಂತರ ಸಮಾಜದಲ್ಲಿ ಎಲ್ಲರೂ ಒಂದೇ ಎನ್ನುವುದನ್ನು ಸಾರಿ ಹೇಳುವ ಮೂಲಕ ಸಮಾನತೆಗಾಗಿ ಕೊಡುಗೆ ನೀಡುವಲ್ಲಿ ಅವರ ಪಾತ್ರ ದೊಡ್ಡದು. ಅಂತಹ ಮಹಾಪುರುಷರ ಹೆಸರನ್ನು ಉದ್ಯಾನಕ್ಕೆ ನಾಮಕರಣ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದೆ’ ಎಂದರು.