<p><strong>ಬೆಂಗಳೂರು</strong>: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, ಆರಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ವೆಂಕಟಾಲ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳೀಯರೇ ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಹೆಸರು ಗೊತ್ತಾಗಿಲ್ಲ.</p>.<p>‘ನಗರದಿಂದ ವಿಮಾನ ನಿಲ್ದಾಣದತ್ತ ಹೊರಟಿದ್ದ ಕಾರೊಂದು ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿತ್ತು. ಆ ಕಾರಿಗೂ ಹಿಂದೆಯೇ ಬರುತ್ತಿದ್ದ ಇನ್ನೊಂದು ಕಾರು ಗುದ್ದಿತ್ತು. ಮೂರು ಕಾರುಗಳು ಜಖಂಗೊಂಡವು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.</p>.<p>‘ಮೂರು ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಅಪಘಾತದಿಂದಾಗಿ ಕಾರುಗಳ ಅವಶೇಷಗಳು ರಸ್ತೆಯಲ್ಲೆಲ್ಲ ಬಿದ್ದಿದ್ದವು. ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿ ದಟ್ಟಣೆ ಉಂಟಾಯಿತು’ ಎಂದು ವಿವರಿಸಿದರು.</p>.<p>ಯಲಹಂಕ ಸಂಚಾರ ಪೊಲೀಸರು, ‘ಘಟನಾ ಸ್ಥಳವನ್ನು ತೆರವು ಮಾಡಲಾಗಿದೆ. ಠಾಣೆ ಸಿಬ್ಬಂದಿ ಆಸ್ಪತ್ರೆಗೆ ಹೋಗಿ ಗಾಯಾಳುಗಳ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, ಆರಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ವೆಂಕಟಾಲ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳೀಯರೇ ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಹೆಸರು ಗೊತ್ತಾಗಿಲ್ಲ.</p>.<p>‘ನಗರದಿಂದ ವಿಮಾನ ನಿಲ್ದಾಣದತ್ತ ಹೊರಟಿದ್ದ ಕಾರೊಂದು ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿತ್ತು. ಆ ಕಾರಿಗೂ ಹಿಂದೆಯೇ ಬರುತ್ತಿದ್ದ ಇನ್ನೊಂದು ಕಾರು ಗುದ್ದಿತ್ತು. ಮೂರು ಕಾರುಗಳು ಜಖಂಗೊಂಡವು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.</p>.<p>‘ಮೂರು ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಅಪಘಾತದಿಂದಾಗಿ ಕಾರುಗಳ ಅವಶೇಷಗಳು ರಸ್ತೆಯಲ್ಲೆಲ್ಲ ಬಿದ್ದಿದ್ದವು. ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿ ದಟ್ಟಣೆ ಉಂಟಾಯಿತು’ ಎಂದು ವಿವರಿಸಿದರು.</p>.<p>ಯಲಹಂಕ ಸಂಚಾರ ಪೊಲೀಸರು, ‘ಘಟನಾ ಸ್ಥಳವನ್ನು ತೆರವು ಮಾಡಲಾಗಿದೆ. ಠಾಣೆ ಸಿಬ್ಬಂದಿ ಆಸ್ಪತ್ರೆಗೆ ಹೋಗಿ ಗಾಯಾಳುಗಳ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>