ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರದ ಕಿಟ್ ವಿತರಣೆ, ಲಸಿಕೆ ಅಭಿಯಾನಕ್ಕೆ ಚಾಲನೆ

Last Updated 7 ಜೂನ್ 2021, 18:38 IST
ಅಕ್ಷರ ಗಾತ್ರ

ಯಲಹಂಕ: ‘ಕೊರೊನಾದಿಂದ ಬಡವರು ಮತ್ತು ರೈತರು ತಮ್ಮ ಬಳಿಯಿದ್ದ ಅಲ್ಪಸ್ವಲ್ಪ ಆದಾಯವನ್ನು ಕಳೆದುಕೊಂಡು ಹೊಟ್ಟೆಪಾಡಿಗಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಕೆಂದ್ರ ಸರ್ಕಾರ, ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿರುವುದರಿಂದ ಅವರು ಮತ್ತಷ್ಟು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ’ ಎಂದು ಶಾಸಕ ಕೃಷ್ಣ ಬೈರೇಗೌಡ ಆರೋಪಿಸಿದರು.

ಯಲಹಂಕ ಕ್ಷೇತ್ರದ ಕಾಂಗ್ರೆಸ್ ಮುಖಂಡರ ವತಿಯಿಂದ ಹಳೇನಗರ ಮತ್ತು ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಡವರಿಗೆ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು.

‘ಬಡವರಿಂದ ತೆರಿಗೆ ವಸೂಲಿ ಮಾಡುತ್ತಿರುವ ಕೇಂದ್ರ ಸರ್ಕಾರ, ಪ್ರತಿ ಗಂಟೆಗೆ ₹100 ಕೋಟಿ ಸಂಪಾದಿಸುತ್ತಿರುವ ಅಂಬಾನಿ, ಅದಾನಿಯಂತಹ ಶ್ರೀಮಂತರ ಮೇಲೆ ತೆರಿಗೆ ವಿಧಿಸದಿರುವುದು ದುರದೃಷ್ಟಕರ. ಇದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ’ ಎಂದರು.

‘ಕಾಂಗ್ರೆಸ್ ಮುಖಂಡರು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಶಕ್ತಿಗನುಸಾರವಾಗಿ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯಮಾಡಬೇಕೆಂಬ ಎಐಸಿಸಿ ಮತ್ತು ಕೆಪಿಸಿಸಿ ನಾಯಕರು ಸೂಚಿಸಿದ್ದಾರೆ. ಇದರ ಭಾಗವಾಗಿ ಸೋಮವಾರ ಸುಮಾರು 1000 ಆಹಾರದ ಕಿಟ್‌ಗಳನ್ನು ವಿತರಿಸಲಾಗಿದೆ. ಅಲ್ಲದೆ ಯುವ ಕಾಂಗ್ರೆಸ್ ವತಿಯಿಂದ ಮನೆಮನೆಗೆ ತರಳಿ, ಲಸಿಕೆ ಹಾಕಿಸಿಕೊಳ್ಳಲು ಜನರಿಗೆ ಅರಿವು ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT