<p><strong>ಬೆಂಗಳೂರು: </strong>ರಾಜ್ಯದಲ್ಲಿ ಮುಂಗಾರು ಬಿಡುವು ಪಡೆದಿದ್ದು, ಕರಾವಳಿ ಭಾಗದಲ್ಲಿ ಜು.27 ಮತ್ತು 28ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇದೇ 28ರವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ 3.6 ಮೀಟರ್ಗಳಷ್ಟು ಎತ್ತರದ ಸಮುದ್ರ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಮೀನುಗಾರರನ್ನು ಎಚ್ಚರಿಸಿದೆ.</p>.<p>ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜು.31ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.</p>.<p class="Subhead"><strong>ಮಳೆ–ಎಲ್ಲಿ, ಎಷ್ಟು?:</strong> ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 13 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸುಬ್ರಹ್ಮಣ್ಯ 11, ಪುತ್ತೂರು 10, ಸುಳ್ಯ, ವಿರಾಜಪೇಟೆ 9, ಮಂಗಳೂರು, ಬೆಳ್ತಂಗಡಿ 8, ಕಾರ್ಕಳ, ಮೂಡುಬಿದಿರೆ 6, ಭಟ್ಕಳ, ಕೊಪ್ಪ, ಹೊಸಕೋಟೆ, ತೀರ್ಥಹಳ್ಳಿ, ಕೋಲಾರ 3, ಕುಂದಾಪುರ, ನಿಪ್ಪಾಣಿ, ಚಿಂತಾಮಣಿ 2, ಧಾರವಾಡ, ಬೆಳಗಾವಿ, ಆನೇಕಲ್, ಶ್ರೀನಿವಾಸಪುರ, ಬಂಗಾರಪೇಟೆ, ಸಾಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<p>ರಾಯಚೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಮುಂಗಾರು ಬಿಡುವು ಪಡೆದಿದ್ದು, ಕರಾವಳಿ ಭಾಗದಲ್ಲಿ ಜು.27 ಮತ್ತು 28ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇದೇ 28ರವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ 3.6 ಮೀಟರ್ಗಳಷ್ಟು ಎತ್ತರದ ಸಮುದ್ರ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಮೀನುಗಾರರನ್ನು ಎಚ್ಚರಿಸಿದೆ.</p>.<p>ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜು.31ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.</p>.<p class="Subhead"><strong>ಮಳೆ–ಎಲ್ಲಿ, ಎಷ್ಟು?:</strong> ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 13 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸುಬ್ರಹ್ಮಣ್ಯ 11, ಪುತ್ತೂರು 10, ಸುಳ್ಯ, ವಿರಾಜಪೇಟೆ 9, ಮಂಗಳೂರು, ಬೆಳ್ತಂಗಡಿ 8, ಕಾರ್ಕಳ, ಮೂಡುಬಿದಿರೆ 6, ಭಟ್ಕಳ, ಕೊಪ್ಪ, ಹೊಸಕೋಟೆ, ತೀರ್ಥಹಳ್ಳಿ, ಕೋಲಾರ 3, ಕುಂದಾಪುರ, ನಿಪ್ಪಾಣಿ, ಚಿಂತಾಮಣಿ 2, ಧಾರವಾಡ, ಬೆಳಗಾವಿ, ಆನೇಕಲ್, ಶ್ರೀನಿವಾಸಪುರ, ಬಂಗಾರಪೇಟೆ, ಸಾಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<p>ರಾಯಚೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>