<p><strong>ಕೆಂಗೇರಿ:</strong> ಜೀವನಾನುಭವ ಹೇಳಿ ಕೊಡುವ ಜನಪದ ಸಾಹಿತ್ಯ, ಅಕ್ಷರ ಕಲಿಸುವ ವಿಶ್ವವಿದ್ಯಾಲಯಕ್ಕಿಂತ ಮಿಗಿಲು ಎಂದು ಜನಪದ ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಹೇಳಿದರು.</p>.<p>ಯಶವಂತಪುರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೆಂಗೇರಿ ಉಪನಗರದ ಗುರುರಾಜ ಸಭಾ ಭವನದಲ್ಲಿ ಆಯೋಜಿಸಿದ್ದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಪ್ರತಿ ಸಾಹಿತ್ಯ ಸಮ್ಮೇಳನದಲ್ಲೂ ಹಲವು ಹಕ್ಕೊತ್ತಾಯಗಳು ವ್ಯಕ್ತವಾಗುತ್ತವೆ. ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ಆ ನಿರ್ಧಾರಗಳ ಪೈಕಿ ಕನಿಷ್ಠ ಶೇ 10ರಷ್ಟು ಕೂಡಾ ನೆರವೇರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಆಸ್ಪತ್ರೆ, ನಿಲ್ದಾಣಗಳು ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಬಳಕೆ ಆಗುವಂತಾಗಬೇಕು ಎಂದು ಮನವಿ ಮಾಡಿದರು.</p>.<p>ಐಟಿ–ಬಿಟಿ ಕಂಪನಿಗಳಲ್ಲಿ ಕನ್ನಡ ಕಲಿಕಾ ಶಿಬಿರ ಆಯೋಜನೆ ಆಗಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನ್ನಡ ಕಲಿಕಾ ಕೇಂದ್ರ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದರು.</p>.<p>‘ನೆಲದ ಮೂಲ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಕಾಯಕಕ್ಕೆ ಯಾವುದೇ ಸರ್ಕಾರ ಉತ್ತೇಜನ ನೀಡುತ್ತಿಲ್ಲ. ಸಾಂಸ್ಕೃತಿಕ ವಲಯದ ಚಿಂತಕರ ದನಿಯನ್ನು ಅಡಗಿಸುವ ಷಡ್ಯಂತ್ರ ಎಲ್ಲಾ ಸರ್ಕಾರದ ಅವಧಿಯಲ್ಲೂ ನಡೆಯುತ್ತಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ ದೂರಿದರು.</p>.<p>ರಾಜಧಾನಿಯಲ್ಲಿ ಕನ್ನಡ ಉಳಿದರೆ ರಾಜ್ಯದಲ್ಲೂ ಕನ್ನಡ ಉಳಿಯುತ್ತದೆ ಎಂದರು.</p>.<p>ಕೀಳರಿಮೆ ತೊರೆದರೆ ಕನ್ನಡ ಸೇರಿದಂತೆ ಯಾವುದೇ ಪ್ರಾದೇಶಿಕ ಭಾಷೆ ಬೆಳವಣಿಗೆಯಾಗಲು ಸಾಧ್ಯವಿದೆ ಎಂದು ಸಂಸದ ಡಿ.ವಿ.ಸದಾನಂದಗೌಡ ಹೇಳಿದರು.</p>.<p>ಸಾಹಿತಿ ನಲ್ಲೂರು ಪ್ರಸಾದ್, ಡಾ.ಗೀತಾ ರಾಮಾನುಜಂ, ಡಾ.ಡಿ.ವಿ.ಗುರುಪ್ರಸಾದ್, ನಟಿ ಭಾವನಾ, ಬಿಬಿಎಂಪಿ ಮಾಜಿ ಸದಸ್ಯ ವಿ.ವಿ.ಸತ್ಯನಾರಾಯಣ, ಕಲಾವಿದ ನಾಗರಾಜ ಮೂರ್ತಿ, ಚಿಕ್ಕರಾಜು, ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್.ಸುಧೀಂದ್ರ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ಜೀವನಾನುಭವ ಹೇಳಿ ಕೊಡುವ ಜನಪದ ಸಾಹಿತ್ಯ, ಅಕ್ಷರ ಕಲಿಸುವ ವಿಶ್ವವಿದ್ಯಾಲಯಕ್ಕಿಂತ ಮಿಗಿಲು ಎಂದು ಜನಪದ ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಹೇಳಿದರು.</p>.<p>ಯಶವಂತಪುರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೆಂಗೇರಿ ಉಪನಗರದ ಗುರುರಾಜ ಸಭಾ ಭವನದಲ್ಲಿ ಆಯೋಜಿಸಿದ್ದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಪ್ರತಿ ಸಾಹಿತ್ಯ ಸಮ್ಮೇಳನದಲ್ಲೂ ಹಲವು ಹಕ್ಕೊತ್ತಾಯಗಳು ವ್ಯಕ್ತವಾಗುತ್ತವೆ. ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ಆ ನಿರ್ಧಾರಗಳ ಪೈಕಿ ಕನಿಷ್ಠ ಶೇ 10ರಷ್ಟು ಕೂಡಾ ನೆರವೇರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಆಸ್ಪತ್ರೆ, ನಿಲ್ದಾಣಗಳು ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಬಳಕೆ ಆಗುವಂತಾಗಬೇಕು ಎಂದು ಮನವಿ ಮಾಡಿದರು.</p>.<p>ಐಟಿ–ಬಿಟಿ ಕಂಪನಿಗಳಲ್ಲಿ ಕನ್ನಡ ಕಲಿಕಾ ಶಿಬಿರ ಆಯೋಜನೆ ಆಗಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನ್ನಡ ಕಲಿಕಾ ಕೇಂದ್ರ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದರು.</p>.<p>‘ನೆಲದ ಮೂಲ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಕಾಯಕಕ್ಕೆ ಯಾವುದೇ ಸರ್ಕಾರ ಉತ್ತೇಜನ ನೀಡುತ್ತಿಲ್ಲ. ಸಾಂಸ್ಕೃತಿಕ ವಲಯದ ಚಿಂತಕರ ದನಿಯನ್ನು ಅಡಗಿಸುವ ಷಡ್ಯಂತ್ರ ಎಲ್ಲಾ ಸರ್ಕಾರದ ಅವಧಿಯಲ್ಲೂ ನಡೆಯುತ್ತಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ ದೂರಿದರು.</p>.<p>ರಾಜಧಾನಿಯಲ್ಲಿ ಕನ್ನಡ ಉಳಿದರೆ ರಾಜ್ಯದಲ್ಲೂ ಕನ್ನಡ ಉಳಿಯುತ್ತದೆ ಎಂದರು.</p>.<p>ಕೀಳರಿಮೆ ತೊರೆದರೆ ಕನ್ನಡ ಸೇರಿದಂತೆ ಯಾವುದೇ ಪ್ರಾದೇಶಿಕ ಭಾಷೆ ಬೆಳವಣಿಗೆಯಾಗಲು ಸಾಧ್ಯವಿದೆ ಎಂದು ಸಂಸದ ಡಿ.ವಿ.ಸದಾನಂದಗೌಡ ಹೇಳಿದರು.</p>.<p>ಸಾಹಿತಿ ನಲ್ಲೂರು ಪ್ರಸಾದ್, ಡಾ.ಗೀತಾ ರಾಮಾನುಜಂ, ಡಾ.ಡಿ.ವಿ.ಗುರುಪ್ರಸಾದ್, ನಟಿ ಭಾವನಾ, ಬಿಬಿಎಂಪಿ ಮಾಜಿ ಸದಸ್ಯ ವಿ.ವಿ.ಸತ್ಯನಾರಾಯಣ, ಕಲಾವಿದ ನಾಗರಾಜ ಮೂರ್ತಿ, ಚಿಕ್ಕರಾಜು, ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್.ಸುಧೀಂದ್ರ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>