<p><strong>ಬೆಂಗಳೂರು:</strong> ಯಶವಂತಪುರ ರೈಲು ನಿಲ್ದಾಣದ ನವೀಕರಣ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ತಿಳಿಸಿದರು.</p>.<p>ನವೀಕರಣ ಕಾಮಗಾರಿಯನ್ನು ಅವರು ಪರಿಶೀಲಿಸಿ ಮಾತನಾಡಿ, ‘₹367 ಕೋಟಿ ವೆಚ್ಚದಲ್ಲಿ ನವೀಕರಣಗೊಳ್ಳುತ್ತಿರುವ ಯಶವಂತಪುರ ರೈಲು ನಿಲ್ದಾಣವು ಕಾಮಗಾರಿ ಪೂರ್ಣಗೊಂಡಾಗ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಸೌಲಭ್ಯಗಳು ದೊರೆಯಲಿವೆ’ ಎಂದು ತಿಳಿಸಿದರು.</p>.<p>ಕೆಎಸ್ಆರ್ ಬೆಂಗಳೂರು ಮತ್ತು ತುಮಕೂರು ನಡುವೆ ವಿಂಡೋ-ಟ್ರೇಲಿಂಗ್ ತಪಾಸಣೆ ನಡೆಸಿದರು. ವಿವಿಧ ಮೂಲಸೌಕರ್ಯ ಕಾರ್ಯಗಳನ್ನು ಪರಿಶೀಲಿಸಿದರು ಮತ್ತು ಈ ವಿಭಾಗದ ಪ್ರಮುಖ ನಿಲ್ದಾಣಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಪ್ರಯಾಣಿಕರ ಸೌಲಭ್ಯಗಳ ಪರಿಶೀಲನೆ ನಡೆಸಿದರು.</p>.<p>ನಿಡವಂದ ನಿಲ್ದಾಣದಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಗಳು ಮತ್ತು ಸರಕು ಸಾಗಣೆ ಕೇಂದ್ರದ ಸರಕು ಶೆಡ್ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಿದರು. ಅಮೃತ್ ಭಾರತ್ ನಿಲ್ದಾಣ ಯೋಜನೆ (ಎಬಿಎಸ್ಎಸ್) ಅಡಿಯಲ್ಲಿ ₹88 ಕೋಟಿಯಲ್ಲಿ ಅಭಿವೃದ್ಧಿಗೊಳ್ಳಲಿರುವ ತುಮಕೂರು ನಿಲ್ದಾಣಕ್ಕೆ ಭೇಟಿ ನೀಡಿದರು.</p>.<p>ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್, ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕ ಪರಿಕ್ಷಿತ್ ಮೋಹನ್ಪುರಿಯಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯಶವಂತಪುರ ರೈಲು ನಿಲ್ದಾಣದ ನವೀಕರಣ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ತಿಳಿಸಿದರು.</p>.<p>ನವೀಕರಣ ಕಾಮಗಾರಿಯನ್ನು ಅವರು ಪರಿಶೀಲಿಸಿ ಮಾತನಾಡಿ, ‘₹367 ಕೋಟಿ ವೆಚ್ಚದಲ್ಲಿ ನವೀಕರಣಗೊಳ್ಳುತ್ತಿರುವ ಯಶವಂತಪುರ ರೈಲು ನಿಲ್ದಾಣವು ಕಾಮಗಾರಿ ಪೂರ್ಣಗೊಂಡಾಗ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಸೌಲಭ್ಯಗಳು ದೊರೆಯಲಿವೆ’ ಎಂದು ತಿಳಿಸಿದರು.</p>.<p>ಕೆಎಸ್ಆರ್ ಬೆಂಗಳೂರು ಮತ್ತು ತುಮಕೂರು ನಡುವೆ ವಿಂಡೋ-ಟ್ರೇಲಿಂಗ್ ತಪಾಸಣೆ ನಡೆಸಿದರು. ವಿವಿಧ ಮೂಲಸೌಕರ್ಯ ಕಾರ್ಯಗಳನ್ನು ಪರಿಶೀಲಿಸಿದರು ಮತ್ತು ಈ ವಿಭಾಗದ ಪ್ರಮುಖ ನಿಲ್ದಾಣಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಪ್ರಯಾಣಿಕರ ಸೌಲಭ್ಯಗಳ ಪರಿಶೀಲನೆ ನಡೆಸಿದರು.</p>.<p>ನಿಡವಂದ ನಿಲ್ದಾಣದಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಗಳು ಮತ್ತು ಸರಕು ಸಾಗಣೆ ಕೇಂದ್ರದ ಸರಕು ಶೆಡ್ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಿದರು. ಅಮೃತ್ ಭಾರತ್ ನಿಲ್ದಾಣ ಯೋಜನೆ (ಎಬಿಎಸ್ಎಸ್) ಅಡಿಯಲ್ಲಿ ₹88 ಕೋಟಿಯಲ್ಲಿ ಅಭಿವೃದ್ಧಿಗೊಳ್ಳಲಿರುವ ತುಮಕೂರು ನಿಲ್ದಾಣಕ್ಕೆ ಭೇಟಿ ನೀಡಿದರು.</p>.<p>ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್, ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕ ಪರಿಕ್ಷಿತ್ ಮೋಹನ್ಪುರಿಯಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>