ಕೊಮ್ಮಘಟ್ಟ ರಸ್ತೆಯ ಬಂಡೇಶ್ವರಸ್ವಾಮಿ ಸಮುದಾಯಭವನದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿ, ‘ನಾನು ಬಿಜೆಪಿಗೆ ಸೇರುತ್ತೇನೆ ಎಂದು ಜವರಾಯಿಗೌಡಗೆ ಗೊತ್ತಿದ್ದರೆ ಪಕ್ಷದ ನಾಯಕರ ಜೊತೆ ಚರ್ಚಿಸುತ್ತಿರಲಿಲ್ಲ. ನಾನು ಬಿಜೆಪಿ ಸೇರಿದ ವಿಷಯ ತಿಳಿದು ಆತಂಕಕ್ಕೆ ಒಳಗಾದರು’ ಎಂದರು.