<p><strong>ಬೆಂಗಳೂರು:</strong> ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರೂ ಆಗಿದ್ದ ಬಿಜೆಪಿಯ ಯೋಗೀಶಗೌಡ ಗೌಡರ ಹತ್ಯೆ ಸಂಬಂಧ ಆರು ಸುಪಾರಿ ಹಂತಕರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.</p>.<p>‘ಹತ್ಯೆ ಪ್ರಕರಣದಲ್ಲಿ ಸ್ಥಳೀಯ ರಾಜಕಾರಣಿ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಕೆಲವು ಪೊಲೀಸರು ಭಾಗಿಯಾಗಿರುವ ಆತಂಕಕಾರಿ ಸಂಗತಿಯನ್ನು ಬಂಧಿತ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಅದನ್ನು ಖಚಿತಪಡಿಸಿಕೊಳ್ಳಲು ತನಿಖೆ ಮುಂದುವರಿದಿದೆ’ ಎಂದು ಸಿಬಿಐ ಮೂಲಗಳು ತಿಳಿಸಿವೆ.</p>.<p>ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ನಡೆದಿದ್ದ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು, ಕೃತ್ಯದ ನಂತರ ತಲೆಮರೆಸಿಕೊಂಡಿದ್ದ ತಮಿಳುನಾಡಿನ ಇಬ್ಬರು ಹಾಗೂ ಬೆಂಗಳೂರು ಸೇರಿ ರಾಜ್ಯದ ನಾಲ್ವರ ಮೇಲೆ ನಿಗಾ ಇಟ್ಟಿದ್ದರು.</p>.<p>ಆರೋಪಿಗಳು ತಮಿಳುನಾಡಿಗೆ ಪರಾರಿಯಾಗಿರುವ ಈ ಮಾಹಿತಿ ಸಿಗುತ್ತಿದ್ದಂತೆ ಸಿಬಿಐ ಅಧಿಕಾರಿಗಳು, ಸಿನಿಮೀಯ ರೀತಿಯಲ್ಲಿ<br />ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.</p>.<p>ವಿಚಾರಣೆ ವೇಳೆ, ಸುಪಾರಿ ಪಡೆದು ಕೃತ್ಯ ಎಸಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.</p>.<p>ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು, ಸ್ಥಳೀಯ ಆರು ಮಂದಿಯನ್ನು ಬಂಧಿಸಿದ್ದರು. ಇದೀಗ ಸಿಬಿಐ ಅಧಿಕಾರಿಗಳು ಆರು ಮಂದಿ ಸುಪಾರಿ ಹಂತಕರನ್ನು ಬಂಧಿಸಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ.</p>.<p><strong>ಮಹತ್ವದ ಮಾಹಿತಿ ಸಂಗ್ರಹ</strong>: ‘ಪ್ರಕರಣದ ಕೂಲಂಕಷ ತನಿಖೆ ನಡೆಸಲಾಗುತ್ತಿದ್ದು, ಮಹತ್ವದ ಸಂಗತಿಗಳೇ ಬಯಲಾಗಿವೆ. ಅದನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದ್ದು, ಹಲವರ ಮೇಲೆ ಕಣ್ಣಿಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಯೋಗೀಶಗೌಡ ಅವರ ಹತ್ಯೆಗೆ ಸ್ಥಳೀಯ ಪೊಲೀಸರು ಬಂಧಿಸಿರುವ ಬಸವರಾಜ ಮುತ್ತಗಿ ಎಂಬಾತನೇ ಸುಪಾರಿ ನೀಡಿದ್ದನೆಂಬ ಸಂಗತಿ ತನಿಖೆಯಿಂದ ಗೊತ್ತಾಗಿದೆ. ಇದರ ಹಿಂದೆ ಮತ್ತಷ್ಟು ಮಂದಿ ಇರುವ ಅನುಮಾನವೂ ಇದೆ’ ಎಂದು ಮೂಲಗಳು ಹೇಳಿವೆ.</p>.<p><strong>ನಿರಪರಾಧಿಗೆ ಆರೋಪಿ ಪಟ್ಟ?</strong><br />ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸರು, ಕೆಲವು ನಿರಪರಾಧಿಗಳನ್ನು ಆರೋಪಿಯನ್ನಾಗಿ ಮಾಡಿರುವ ಸಂಶಯ ಸಿಬಿಐ ಅಧಿಕಾರಿಗಳಿಗೆ ಬಂದಿದೆ. ಈ ಬಗ್ಗೆ, ತನಿಖೆ ಮುಂದುವರಿದಿದೆ.</p>.<p>ಪ್ರಕರಣದಲ್ಲಿ ಬಸವರಾಜ ಮುತ್ತಗಿ, ವಿಕ್ರಮ ಬಳ್ಳಾರಿ, ಕೀರ್ತಿಕುಮಾರ್ ಕುರಹಟ್ಟಿ, ಸಂದೀಪ್ ಸವದತ್ತಿ, ವಿನಾಯಕ ಕಟಗಿ ಮತ್ತು ಮಹಾಬಲ್ಲೇಶ್ವರ ಹೊಂಗಲ್ ಎಂಬುವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದರು. ಈ ಪೈಕಿ ಕೆಲವರು, ತಾವು ಈ ಪ್ರಕರಣದಲ್ಲಿ ನಿರಪರಾಧಿಗಳೆಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.</p>.<p><strong>‘ಹತ್ಯೆಯಲ್ಲಿ ವಿನಯ ಕುಲಕರ್ಣಿ ಕೈವಾಡ’</strong><br />‘ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಕೈವಾಡವಿದೆ‘ ಎಂದು ಆರೋಪಿಸಿ ಯೋಗೀಶಗೌಡ ಅವರ ಸಹೋದರ ಗುರುನಾಥಗೌಡ ಮತ್ತು ತಾಯಿ ತುಂಗಮ್ಮ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು. ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಪ್ರಕರಣದಡಿ ಬಂಧಿತನಾಗಿದ್ದ ಆರೋಪಿ ಬಸವರಾಜ ಮುತ್ತಗಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಪಡೆದಿದ್ದರು. ನಂತರದ ಬೆಳವಣಿಗೆಯಲ್ಲಿ ಹೈಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದ ಸುಪ್ರಿಂ ಕೋರ್ಟ್, ಸಿಬಿಐ ತನಿಖೆಗೆ ಹಸಿರು ನಿಶಾನೆ ತೋರಿಸಿತ್ತು.</p>.<p>ಅದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಚುರುಕಿನ ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.</p>.<p><strong>ಆರೋಪಿಗಳಿಗೆ ನ್ಯಾಯಾಂಗ ಬಂಧನ</strong><br /><strong>ಧಾರವಾಡ:</strong> ಯೋಗೀಶಗೌಡ ಹತ್ಯೆ ಪ್ರಕರಣದಡಿ ಬಂಧಿಸಿರುವ ಆರು ಆರೋಪಿಗಳನ್ನು ಇಲ್ಲಿನ 4ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಧೀಶರ ನಿವಾಸದಲ್ಲಿ ಭಾನುವಾರ ರಾತ್ರಿ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶೆ ವಿಜಯಲಕ್ಷ್ಮಿ ಗಾಣಾಪುರ ಅವರು ಆರೋಪಿಗಳನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದರು. ನಂತರ ಆರೋಪಿಗಳನ್ನು ಸಿಬಿಐ ಅಧಿಕಾರಿಗಳೂ ಉಪ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು.</p>.<p>ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಈ ಹಿಂದೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಸುಪ್ರಿಂ ಕೋರ್ಟ್ ಈ ತಡೆಯಾಜ್ಞೆಯನ್ನು ತೆರವುಗೊಳಿಸಿದ ಬಳಿಕ ತನಿಖೆಯನ್ನು ಸಿಬಿಐ ಚುರುಕುಗೊಳಿಸಿತ್ತು. ಕೆಲವು ದಿನಗಳ ಹಿಂದೆ ಧಾರವಾಡಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು, ಹಲವರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರೂ ಆಗಿದ್ದ ಬಿಜೆಪಿಯ ಯೋಗೀಶಗೌಡ ಗೌಡರ ಹತ್ಯೆ ಸಂಬಂಧ ಆರು ಸುಪಾರಿ ಹಂತಕರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.</p>.<p>‘ಹತ್ಯೆ ಪ್ರಕರಣದಲ್ಲಿ ಸ್ಥಳೀಯ ರಾಜಕಾರಣಿ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಕೆಲವು ಪೊಲೀಸರು ಭಾಗಿಯಾಗಿರುವ ಆತಂಕಕಾರಿ ಸಂಗತಿಯನ್ನು ಬಂಧಿತ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಅದನ್ನು ಖಚಿತಪಡಿಸಿಕೊಳ್ಳಲು ತನಿಖೆ ಮುಂದುವರಿದಿದೆ’ ಎಂದು ಸಿಬಿಐ ಮೂಲಗಳು ತಿಳಿಸಿವೆ.</p>.<p>ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ನಡೆದಿದ್ದ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು, ಕೃತ್ಯದ ನಂತರ ತಲೆಮರೆಸಿಕೊಂಡಿದ್ದ ತಮಿಳುನಾಡಿನ ಇಬ್ಬರು ಹಾಗೂ ಬೆಂಗಳೂರು ಸೇರಿ ರಾಜ್ಯದ ನಾಲ್ವರ ಮೇಲೆ ನಿಗಾ ಇಟ್ಟಿದ್ದರು.</p>.<p>ಆರೋಪಿಗಳು ತಮಿಳುನಾಡಿಗೆ ಪರಾರಿಯಾಗಿರುವ ಈ ಮಾಹಿತಿ ಸಿಗುತ್ತಿದ್ದಂತೆ ಸಿಬಿಐ ಅಧಿಕಾರಿಗಳು, ಸಿನಿಮೀಯ ರೀತಿಯಲ್ಲಿ<br />ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.</p>.<p>ವಿಚಾರಣೆ ವೇಳೆ, ಸುಪಾರಿ ಪಡೆದು ಕೃತ್ಯ ಎಸಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.</p>.<p>ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು, ಸ್ಥಳೀಯ ಆರು ಮಂದಿಯನ್ನು ಬಂಧಿಸಿದ್ದರು. ಇದೀಗ ಸಿಬಿಐ ಅಧಿಕಾರಿಗಳು ಆರು ಮಂದಿ ಸುಪಾರಿ ಹಂತಕರನ್ನು ಬಂಧಿಸಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ.</p>.<p><strong>ಮಹತ್ವದ ಮಾಹಿತಿ ಸಂಗ್ರಹ</strong>: ‘ಪ್ರಕರಣದ ಕೂಲಂಕಷ ತನಿಖೆ ನಡೆಸಲಾಗುತ್ತಿದ್ದು, ಮಹತ್ವದ ಸಂಗತಿಗಳೇ ಬಯಲಾಗಿವೆ. ಅದನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದ್ದು, ಹಲವರ ಮೇಲೆ ಕಣ್ಣಿಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಯೋಗೀಶಗೌಡ ಅವರ ಹತ್ಯೆಗೆ ಸ್ಥಳೀಯ ಪೊಲೀಸರು ಬಂಧಿಸಿರುವ ಬಸವರಾಜ ಮುತ್ತಗಿ ಎಂಬಾತನೇ ಸುಪಾರಿ ನೀಡಿದ್ದನೆಂಬ ಸಂಗತಿ ತನಿಖೆಯಿಂದ ಗೊತ್ತಾಗಿದೆ. ಇದರ ಹಿಂದೆ ಮತ್ತಷ್ಟು ಮಂದಿ ಇರುವ ಅನುಮಾನವೂ ಇದೆ’ ಎಂದು ಮೂಲಗಳು ಹೇಳಿವೆ.</p>.<p><strong>ನಿರಪರಾಧಿಗೆ ಆರೋಪಿ ಪಟ್ಟ?</strong><br />ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸರು, ಕೆಲವು ನಿರಪರಾಧಿಗಳನ್ನು ಆರೋಪಿಯನ್ನಾಗಿ ಮಾಡಿರುವ ಸಂಶಯ ಸಿಬಿಐ ಅಧಿಕಾರಿಗಳಿಗೆ ಬಂದಿದೆ. ಈ ಬಗ್ಗೆ, ತನಿಖೆ ಮುಂದುವರಿದಿದೆ.</p>.<p>ಪ್ರಕರಣದಲ್ಲಿ ಬಸವರಾಜ ಮುತ್ತಗಿ, ವಿಕ್ರಮ ಬಳ್ಳಾರಿ, ಕೀರ್ತಿಕುಮಾರ್ ಕುರಹಟ್ಟಿ, ಸಂದೀಪ್ ಸವದತ್ತಿ, ವಿನಾಯಕ ಕಟಗಿ ಮತ್ತು ಮಹಾಬಲ್ಲೇಶ್ವರ ಹೊಂಗಲ್ ಎಂಬುವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದರು. ಈ ಪೈಕಿ ಕೆಲವರು, ತಾವು ಈ ಪ್ರಕರಣದಲ್ಲಿ ನಿರಪರಾಧಿಗಳೆಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.</p>.<p><strong>‘ಹತ್ಯೆಯಲ್ಲಿ ವಿನಯ ಕುಲಕರ್ಣಿ ಕೈವಾಡ’</strong><br />‘ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಕೈವಾಡವಿದೆ‘ ಎಂದು ಆರೋಪಿಸಿ ಯೋಗೀಶಗೌಡ ಅವರ ಸಹೋದರ ಗುರುನಾಥಗೌಡ ಮತ್ತು ತಾಯಿ ತುಂಗಮ್ಮ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು. ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಪ್ರಕರಣದಡಿ ಬಂಧಿತನಾಗಿದ್ದ ಆರೋಪಿ ಬಸವರಾಜ ಮುತ್ತಗಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಪಡೆದಿದ್ದರು. ನಂತರದ ಬೆಳವಣಿಗೆಯಲ್ಲಿ ಹೈಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದ ಸುಪ್ರಿಂ ಕೋರ್ಟ್, ಸಿಬಿಐ ತನಿಖೆಗೆ ಹಸಿರು ನಿಶಾನೆ ತೋರಿಸಿತ್ತು.</p>.<p>ಅದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಚುರುಕಿನ ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.</p>.<p><strong>ಆರೋಪಿಗಳಿಗೆ ನ್ಯಾಯಾಂಗ ಬಂಧನ</strong><br /><strong>ಧಾರವಾಡ:</strong> ಯೋಗೀಶಗೌಡ ಹತ್ಯೆ ಪ್ರಕರಣದಡಿ ಬಂಧಿಸಿರುವ ಆರು ಆರೋಪಿಗಳನ್ನು ಇಲ್ಲಿನ 4ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಧೀಶರ ನಿವಾಸದಲ್ಲಿ ಭಾನುವಾರ ರಾತ್ರಿ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶೆ ವಿಜಯಲಕ್ಷ್ಮಿ ಗಾಣಾಪುರ ಅವರು ಆರೋಪಿಗಳನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದರು. ನಂತರ ಆರೋಪಿಗಳನ್ನು ಸಿಬಿಐ ಅಧಿಕಾರಿಗಳೂ ಉಪ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು.</p>.<p>ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಈ ಹಿಂದೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಸುಪ್ರಿಂ ಕೋರ್ಟ್ ಈ ತಡೆಯಾಜ್ಞೆಯನ್ನು ತೆರವುಗೊಳಿಸಿದ ಬಳಿಕ ತನಿಖೆಯನ್ನು ಸಿಬಿಐ ಚುರುಕುಗೊಳಿಸಿತ್ತು. ಕೆಲವು ದಿನಗಳ ಹಿಂದೆ ಧಾರವಾಡಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು, ಹಲವರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>