<p><strong>ಬೆಂಗಳೂರು</strong>: ಗೋದಾಮಿನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸಿದ್ದಾಪುರ ನಿವಾಸಿ ಅಬ್ದುಲ್ ಹುಸೇನ್(30) ಮೃತ ಯುವಕ. ಘಟನೆ ಸಂಬಂಧ ಮೃತ ಯುವಕನ ಪೋಷಕರು ದೂರು ನೀಡಿದ್ದಾರೆ. ದೂರು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಸಿದ್ದಾಪುರದ ನಿವಾಸಿ ಅಬ್ದುಲ್ ಹುಸೇನ್ ಅವರು ಮಾವನ ಪುತ್ರಿಯನ್ನು ಪ್ರೀತಿಸುತ್ತಿದ್ದರು. ಪುತ್ರಿ ಮದುವೆ ಮಾಡಿಕೊಡುವಂತೆ ಮಾವನ ಬಳಿ ಹುಸೇನ್ ಮನವಿ ಮಾಡಿದ್ದರು. ಅದಕ್ಕೆ ಮಾವ ಒಪ್ಪಿರಲಿಲ್ಲ. ಈ ಮಧ್ಯೆ ಆರು ತಿಂಗಳ ಹಿಂದೆ ಕುಟುಂಬ ಸಮೇತರಾಗಿ ಮಾವ ಅಂದ್ರಹಳ್ಳಿಗೆ ಸ್ಥಳಾಂತರಗೊಂಡಿದ್ದರು. ಗೋದಾಮು ಬಾಡಿಗೆ ಪಡೆದು ಗುಜರಿ ವ್ಯಾಪಾರ ಮಾಡುತ್ತಿದ್ದರು. ಇತ್ತೀಚೆಗೆ ಆ ಗೋದಾಮಿಗೆ ಬೆಂಕಿ ಬಿದ್ದು ನಷ್ಟವಾಗಿತ್ತು. ಅದಾದ ಮೇಲೆ ಯುವಕ, ಮಾವನ ಜತೆಗೆ ಸೇರಿಕೊಂಡು ಗುಜರಿ ವ್ಯಾಪಾರ ಆರಂಭಿಸಿದ್ದರು. ಈ ನಡುವೆ ಪುತ್ರಿಯನ್ನು ಮದುವೆ ಮಾಡಿಕೊಡುವಂತೆ ಯುವಕ ಮತ್ತೊಮ್ಮೆ ಕೇಳಿಕೊಂಡಿದ್ದರು. ಆಗಲೂ ಮಾವ ಒಪ್ಪಿರಲಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ: ಗೋದಾಮಿನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂದು ಪರಿಶೀಲಿಸಿದ್ದಾರೆ.</p>.<p>ಮೃತದೇಹದ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೇಲ್ನೋಟಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಾಣಿಸುತ್ತಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೋದಾಮಿನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸಿದ್ದಾಪುರ ನಿವಾಸಿ ಅಬ್ದುಲ್ ಹುಸೇನ್(30) ಮೃತ ಯುವಕ. ಘಟನೆ ಸಂಬಂಧ ಮೃತ ಯುವಕನ ಪೋಷಕರು ದೂರು ನೀಡಿದ್ದಾರೆ. ದೂರು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಸಿದ್ದಾಪುರದ ನಿವಾಸಿ ಅಬ್ದುಲ್ ಹುಸೇನ್ ಅವರು ಮಾವನ ಪುತ್ರಿಯನ್ನು ಪ್ರೀತಿಸುತ್ತಿದ್ದರು. ಪುತ್ರಿ ಮದುವೆ ಮಾಡಿಕೊಡುವಂತೆ ಮಾವನ ಬಳಿ ಹುಸೇನ್ ಮನವಿ ಮಾಡಿದ್ದರು. ಅದಕ್ಕೆ ಮಾವ ಒಪ್ಪಿರಲಿಲ್ಲ. ಈ ಮಧ್ಯೆ ಆರು ತಿಂಗಳ ಹಿಂದೆ ಕುಟುಂಬ ಸಮೇತರಾಗಿ ಮಾವ ಅಂದ್ರಹಳ್ಳಿಗೆ ಸ್ಥಳಾಂತರಗೊಂಡಿದ್ದರು. ಗೋದಾಮು ಬಾಡಿಗೆ ಪಡೆದು ಗುಜರಿ ವ್ಯಾಪಾರ ಮಾಡುತ್ತಿದ್ದರು. ಇತ್ತೀಚೆಗೆ ಆ ಗೋದಾಮಿಗೆ ಬೆಂಕಿ ಬಿದ್ದು ನಷ್ಟವಾಗಿತ್ತು. ಅದಾದ ಮೇಲೆ ಯುವಕ, ಮಾವನ ಜತೆಗೆ ಸೇರಿಕೊಂಡು ಗುಜರಿ ವ್ಯಾಪಾರ ಆರಂಭಿಸಿದ್ದರು. ಈ ನಡುವೆ ಪುತ್ರಿಯನ್ನು ಮದುವೆ ಮಾಡಿಕೊಡುವಂತೆ ಯುವಕ ಮತ್ತೊಮ್ಮೆ ಕೇಳಿಕೊಂಡಿದ್ದರು. ಆಗಲೂ ಮಾವ ಒಪ್ಪಿರಲಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ: ಗೋದಾಮಿನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂದು ಪರಿಶೀಲಿಸಿದ್ದಾರೆ.</p>.<p>ಮೃತದೇಹದ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೇಲ್ನೋಟಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಾಣಿಸುತ್ತಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>