<p><strong>ಬೆಂಗಳೂರು:</strong> ಮದುವೆ ಆಗುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿದೇಶಕ್ಕೆ ಪರಾರಿಯಾಗಿರುವ ಆರೋಪಿ ವಿರುದ್ಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>22 ವರ್ಷದ ಸಂತ್ರಸ್ತೆ ನೀಡಿರುವ ದೂರಿನ ಅನ್ವಯ ಭರತ್ ಮತ್ತು ಆತನ ತಂದೆ ಸೂರ್ಯ ಪ್ರಸಾದ್, ತಾಯಿ ಅನುರಾಧಾ, ಅಕ್ಕ ರಂಜಿತಾ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ಸಂತ್ರಸ್ತೆಗೆ ಆರೋಪಿ ಭರತ್ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ. ನಂತರ, ಇಬ್ಬರೂ ಪ್ರೀತಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>‘ಕೆಲವು ದಿನಗಳ ನಂತರ ಮನೆಯಲ್ಲಿ ಮದುವೆಗೆ ಒಪ್ಪುತ್ತಿಲ್ಲ. ಪೋಷಕರ ವಿರೋಧದ ನಡುವೆಯೂ ಮದುವೆ ಆಗಲು ಸಿದ್ಧ ಇರುವುದಾಗಿ ಹೇಳಿ ಮದುವೆಯ ಸಿದ್ಧತೆಗೆ ಸೂಚಿಸಿದ್ದ. ಮದುವೆ ಮಂಟಪ ಕೂಡ ಕಾಯ್ದಿರಿಸಲಾಗಿತ್ತು. ಪ್ರೀ –ವೆಡ್ಡಿಂಗ್ ಶೂಟ್ ಸಹ ನಡೆದಿತ್ತು. ನಂತರ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ. ಈ ಬಗ್ಗೆ ನಮ್ಮ ಪೋಷಕರು, ಭರತ್ ಅವರ ಮನೆಗೆ ಹೋಗಿ ವಿಚಾರಿಸಿದ್ದಾಗ ಅವರ ತಂದೆ– ತಾಯಿ ಅವಮಾನಿಸಿ, ಜಾತಿ ನಿಂದನೆ ಮಾಡಿದ್ದಾರೆ’ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯ ವಿರುದ್ಧ ಹಾಗೂ ನನ್ನನ್ನು ಮದುವೆ ಆಗದಂತೆ ತಡೆದಿರುವ ಆರೋಪಿಯ ಮನೆಯವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ಸಂತ್ರಸ್ತೆ ದೂರಿನಲ್ಲಿ ಕೋರಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮದುವೆ ಆಗುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿದೇಶಕ್ಕೆ ಪರಾರಿಯಾಗಿರುವ ಆರೋಪಿ ವಿರುದ್ಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>22 ವರ್ಷದ ಸಂತ್ರಸ್ತೆ ನೀಡಿರುವ ದೂರಿನ ಅನ್ವಯ ಭರತ್ ಮತ್ತು ಆತನ ತಂದೆ ಸೂರ್ಯ ಪ್ರಸಾದ್, ತಾಯಿ ಅನುರಾಧಾ, ಅಕ್ಕ ರಂಜಿತಾ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ಸಂತ್ರಸ್ತೆಗೆ ಆರೋಪಿ ಭರತ್ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ. ನಂತರ, ಇಬ್ಬರೂ ಪ್ರೀತಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>‘ಕೆಲವು ದಿನಗಳ ನಂತರ ಮನೆಯಲ್ಲಿ ಮದುವೆಗೆ ಒಪ್ಪುತ್ತಿಲ್ಲ. ಪೋಷಕರ ವಿರೋಧದ ನಡುವೆಯೂ ಮದುವೆ ಆಗಲು ಸಿದ್ಧ ಇರುವುದಾಗಿ ಹೇಳಿ ಮದುವೆಯ ಸಿದ್ಧತೆಗೆ ಸೂಚಿಸಿದ್ದ. ಮದುವೆ ಮಂಟಪ ಕೂಡ ಕಾಯ್ದಿರಿಸಲಾಗಿತ್ತು. ಪ್ರೀ –ವೆಡ್ಡಿಂಗ್ ಶೂಟ್ ಸಹ ನಡೆದಿತ್ತು. ನಂತರ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ. ಈ ಬಗ್ಗೆ ನಮ್ಮ ಪೋಷಕರು, ಭರತ್ ಅವರ ಮನೆಗೆ ಹೋಗಿ ವಿಚಾರಿಸಿದ್ದಾಗ ಅವರ ತಂದೆ– ತಾಯಿ ಅವಮಾನಿಸಿ, ಜಾತಿ ನಿಂದನೆ ಮಾಡಿದ್ದಾರೆ’ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯ ವಿರುದ್ಧ ಹಾಗೂ ನನ್ನನ್ನು ಮದುವೆ ಆಗದಂತೆ ತಡೆದಿರುವ ಆರೋಪಿಯ ಮನೆಯವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ಸಂತ್ರಸ್ತೆ ದೂರಿನಲ್ಲಿ ಕೋರಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>