<p><strong>ಬೆಂಗಳೂರು:</strong> ‘ಹುಬ್ಬಳ್ಳಿಯಲ್ಲಿ ಯುವತಿಯನ್ನು ಅಮಾನುಷವಾಗಿ ಕೊಲೆ ಮಾಡಿದ ಪ್ರಕರಣವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.</p>.<p>ಅಪರಾಧಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರಾದರೂ ತಕ್ಷಣವೇ ಕಾನೂನಿನ ಪ್ರಕ್ರಿಯೆ ನಡೆದು ಕೊಲೆಗಡುಕನನ್ನು ಉಗ್ರವಾದ ಶಿಕ್ಷೆಗೆ ಒಳಪಡಿಸಬೇಕು. ಇಂಥ ಬರ್ಬರ ಘಟನೆಗಳು ನಡೆದಾಗ ಶಿಕ್ಷೆ ನೀಡುವಲ್ಲಿ ವಿಳಂಬ ಮಾಡಬಾರದು ಎಂದು ಸಂಘಟನೆಯ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಪ್ರಧಾನ ಕಾರ್ಯದರ್ಶಿ ದೇವಿ ಆಗ್ರಹಿಸಿದ್ದಾರೆ.</p>.<p>‘ಯುವಕ ಮತ್ತು ಯುವತಿ ಪರಸ್ಪರ ಪರಿಚಿತರು ಎಂದು ವರದಿ ಇದೆ. ವಿವಾಹವಾಗಲು ನಿರಾಕರಿಸಿದಳೆಂದು ಕೊಲೆಯಾಗಿದೆ ಎನ್ನಲಾಗಿದೆ. ಸಮಾಜದಲ್ಲಿ ಆಳವಾಗಿ ಬೇರೂರಿರುವ ಪುರುಷ ಪ್ರಧಾನ ಪಾಳೆಯಗಾರಿ ಮನೋಭಾವ ಈ ಘಟನೆಯಲ್ಲಿ ಕಣ್ಣಿಗೆ ರಾಚುತ್ತಿದೆ. ಮಹಿಳೆಯೊಬ್ಬಳ ಆಯ್ಕೆ ಸ್ವಾತಂತ್ರ್ಯ ಅಥವಾ ನಿರಾಕರಣೆಯ ಸ್ವಾತಂತ್ರ್ಯವನ್ನು ಒಪ್ಪದ ಈ ತೆರನ ದಾರ್ಷ್ಟ್ಯ ಎಲ್ಲೆಲ್ಲೂ ಕಾಣಸಿಗುತ್ತವೆ. ಇದನ್ನು ಹೀನ ಅಪರಾಧವನ್ನಾಗಿ ಪರಿಗಣಿಸಬೇಕು. ಮತ್ತು ಅಪರಾದಕ್ಕೆ ತಕ್ಕ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಇಂಥ ಘಟನೆಗಳಿಗೆ ಧರ್ಮ ಜಾತಿಗಳ ಬಣ್ಣ ಬಳಿದು ರಾಜಕಾರಣಿಗಳು ದುರ್ಬಳಕೆ ಮಾಡಿಕೊಳ್ಳಬಾರದು. ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹುಬ್ಬಳ್ಳಿಯಲ್ಲಿ ಯುವತಿಯನ್ನು ಅಮಾನುಷವಾಗಿ ಕೊಲೆ ಮಾಡಿದ ಪ್ರಕರಣವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.</p>.<p>ಅಪರಾಧಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರಾದರೂ ತಕ್ಷಣವೇ ಕಾನೂನಿನ ಪ್ರಕ್ರಿಯೆ ನಡೆದು ಕೊಲೆಗಡುಕನನ್ನು ಉಗ್ರವಾದ ಶಿಕ್ಷೆಗೆ ಒಳಪಡಿಸಬೇಕು. ಇಂಥ ಬರ್ಬರ ಘಟನೆಗಳು ನಡೆದಾಗ ಶಿಕ್ಷೆ ನೀಡುವಲ್ಲಿ ವಿಳಂಬ ಮಾಡಬಾರದು ಎಂದು ಸಂಘಟನೆಯ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಪ್ರಧಾನ ಕಾರ್ಯದರ್ಶಿ ದೇವಿ ಆಗ್ರಹಿಸಿದ್ದಾರೆ.</p>.<p>‘ಯುವಕ ಮತ್ತು ಯುವತಿ ಪರಸ್ಪರ ಪರಿಚಿತರು ಎಂದು ವರದಿ ಇದೆ. ವಿವಾಹವಾಗಲು ನಿರಾಕರಿಸಿದಳೆಂದು ಕೊಲೆಯಾಗಿದೆ ಎನ್ನಲಾಗಿದೆ. ಸಮಾಜದಲ್ಲಿ ಆಳವಾಗಿ ಬೇರೂರಿರುವ ಪುರುಷ ಪ್ರಧಾನ ಪಾಳೆಯಗಾರಿ ಮನೋಭಾವ ಈ ಘಟನೆಯಲ್ಲಿ ಕಣ್ಣಿಗೆ ರಾಚುತ್ತಿದೆ. ಮಹಿಳೆಯೊಬ್ಬಳ ಆಯ್ಕೆ ಸ್ವಾತಂತ್ರ್ಯ ಅಥವಾ ನಿರಾಕರಣೆಯ ಸ್ವಾತಂತ್ರ್ಯವನ್ನು ಒಪ್ಪದ ಈ ತೆರನ ದಾರ್ಷ್ಟ್ಯ ಎಲ್ಲೆಲ್ಲೂ ಕಾಣಸಿಗುತ್ತವೆ. ಇದನ್ನು ಹೀನ ಅಪರಾಧವನ್ನಾಗಿ ಪರಿಗಣಿಸಬೇಕು. ಮತ್ತು ಅಪರಾದಕ್ಕೆ ತಕ್ಕ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಇಂಥ ಘಟನೆಗಳಿಗೆ ಧರ್ಮ ಜಾತಿಗಳ ಬಣ್ಣ ಬಳಿದು ರಾಜಕಾರಣಿಗಳು ದುರ್ಬಳಕೆ ಮಾಡಿಕೊಳ್ಳಬಾರದು. ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>