<p><strong>ಯಲಹಂಕ</strong>: ‘ಯುವಕರು ರಾಷ್ಟ್ರದ ಅತ್ಯಂತ ಪ್ರಬಲ ಆಸ್ತಿಯಾಗಿದ್ದು, ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳು ತಮ್ಮ ಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಿಕೊಳ್ಳಬೇಕು’ ಎಂದು ಎಬಿಆರ್ಎಸ್ಎಂ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಗುಂತಾ ಲಕ್ಷ್ಮಣ್ ಹೇಳಿದರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಪರಿವರ್ತನಾ ಟ್ರಸ್ಟ್ ಆಯೋಜಿಸಿದ್ದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಯುವಶಕ್ತಿ ಸರಿಯಾದ ಮಾರ್ಗದಲ್ಲಿ ಸಾಗಿದಾಗ ಮಾತ್ರ ಬಲಿಷ್ಠರಾಷ್ಟ್ರ ನಿರ್ಮಾಣ ಸಾಧ್ಯ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಮಾದಕದ್ರವ್ಯ ಬಳಕೆಯಿಂದ ದೂರವಿದ್ದು, ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪರಿವರ್ತನಾ ಟ್ರಸ್ಟ್ನ ಟ್ರಸ್ಟಿ ವಿ.ಎಸ್.ಹೆಗ್ಡೆ ಮಾತನಾಡಿ, ‘ಮಾದಕ ದ್ರವ್ಯ ವ್ಯಸನವು ಅನೇಕ ವಿದ್ಯಾರ್ಥಿಗಳ ಜೀವನ ಮತ್ತು ವೃತ್ತಿಜೀವನವನ್ನು ಹಾಳುಮಾಡಿದೆ. ಯುವಕರು ಮಾದಕ ದ್ರವ್ಯಗಳಿಂದ ದೂರವಿದ್ದು, ಶಿಕ್ಷಣ ಮತ್ತು ಭವಿಷ್ಯದತ್ತ ಗಮನಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ಪರಿವರ್ತನಾ ಟ್ರಸ್ಟ್ ಇದುವರೆಗೆ 23 ರಾಜ್ಯಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದು, 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 10 ಸಾವಿರಕ್ಕೂ ಹೆಚ್ಚು ಯುವಕರನ್ನು ತಲುಪಿದೆ ಎಂದರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಎಸ್.ಜೆ. ತಿರುವೆಂಗಡಂ, ಸಹ ಕುಲಪತಿ ವಿದ್ಯಾಶಂಕರ್ ಶೆಟ್ಟಿ, ಬಿಜೆಪಿ ಮುಖಂಡ ರಾಜಣ್ಣ.ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ‘ಯುವಕರು ರಾಷ್ಟ್ರದ ಅತ್ಯಂತ ಪ್ರಬಲ ಆಸ್ತಿಯಾಗಿದ್ದು, ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳು ತಮ್ಮ ಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಿಕೊಳ್ಳಬೇಕು’ ಎಂದು ಎಬಿಆರ್ಎಸ್ಎಂ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಗುಂತಾ ಲಕ್ಷ್ಮಣ್ ಹೇಳಿದರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಪರಿವರ್ತನಾ ಟ್ರಸ್ಟ್ ಆಯೋಜಿಸಿದ್ದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಯುವಶಕ್ತಿ ಸರಿಯಾದ ಮಾರ್ಗದಲ್ಲಿ ಸಾಗಿದಾಗ ಮಾತ್ರ ಬಲಿಷ್ಠರಾಷ್ಟ್ರ ನಿರ್ಮಾಣ ಸಾಧ್ಯ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಮಾದಕದ್ರವ್ಯ ಬಳಕೆಯಿಂದ ದೂರವಿದ್ದು, ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪರಿವರ್ತನಾ ಟ್ರಸ್ಟ್ನ ಟ್ರಸ್ಟಿ ವಿ.ಎಸ್.ಹೆಗ್ಡೆ ಮಾತನಾಡಿ, ‘ಮಾದಕ ದ್ರವ್ಯ ವ್ಯಸನವು ಅನೇಕ ವಿದ್ಯಾರ್ಥಿಗಳ ಜೀವನ ಮತ್ತು ವೃತ್ತಿಜೀವನವನ್ನು ಹಾಳುಮಾಡಿದೆ. ಯುವಕರು ಮಾದಕ ದ್ರವ್ಯಗಳಿಂದ ದೂರವಿದ್ದು, ಶಿಕ್ಷಣ ಮತ್ತು ಭವಿಷ್ಯದತ್ತ ಗಮನಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ಪರಿವರ್ತನಾ ಟ್ರಸ್ಟ್ ಇದುವರೆಗೆ 23 ರಾಜ್ಯಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದು, 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 10 ಸಾವಿರಕ್ಕೂ ಹೆಚ್ಚು ಯುವಕರನ್ನು ತಲುಪಿದೆ ಎಂದರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಎಸ್.ಜೆ. ತಿರುವೆಂಗಡಂ, ಸಹ ಕುಲಪತಿ ವಿದ್ಯಾಶಂಕರ್ ಶೆಟ್ಟಿ, ಬಿಜೆಪಿ ಮುಖಂಡ ರಾಜಣ್ಣ.ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>