ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾದ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಗುರುರಾಜ ದೇಸಾಯಿ, ‘ಗರೀಬಿ ಹಟಾವೋ ಎಂದವರು, ಅಚ್ಚೇ ದಿನ್ ತರುತ್ತೇವೆ ಎಂದವರೂ ಯುವಜನರ ಶ್ರಮವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ದೇಶದಲ್ಲಿ ಪ್ರತಿವರ್ಷ 1.5 ಕೋಟಿ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಪೂರೈಸುತ್ತಾರೆ. ಅದರಲ್ಲಿ 5.5 ಲಕ್ಷ ಜನರಿಗೆ ಮಾತ್ರ ಉದ್ಯೋಗ ಸಿಗುತ್ತಿದೆ’ ಎಂದು ಆಡಳಿತ ವರ್ಗದ ವಿರುದ್ಧ ಆಕ್ರೋಶ ಹೊರಹಾಕಿದರು.