<p><strong>ಬೆಂಗಳೂರು:</strong> ಯುವತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿದಿದ್ದ ಇಬ್ಬರು ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ನಾಯಂಡಹಳ್ಳಿ ನಿವಾಸಿಗಳಾದ ಧನುಷ್(20) ಹಾಗೂ ಶಾಬುದ್ದೀನ್(22) ಬಂಧಿತರು.</p>.<p>ಆರೋಪಿಗಳು, ಡಿ.21ರಂದು ನಾಯಂಡಹಳ್ಳಿ ಸಮೀಪದ ವಿನಾಯಕ ಲೇಔಟ್ನಲ್ಲಿ ಕಾರ್ತಿಕ್ ಎಂಬಾತನಿಗೆ ಚಾಕುವಿನಿಂದ ಇರಿದಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಧನುಷ್ ಪ್ರೇಯಸಿಯ ನಂಬರ್ ಪಡೆದಿದ್ದ ಕಾರ್ತಿಕ್, ಆಕೆಗೆ ಕರೆ ಮಾಡಿ ಮಾತಾಡಿದ್ದ. ಜತೆಗೆ ಆಕೆಯ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ವಿಚಾರವನ್ನು ಧನುಷ್ಗೆ ಯುವತಿ ತಿಳಿಸಿದ್ದಳು. ವಿಚಾರ ಕೇಳಿ ಕುಪಿತಗೊಂಡಿದ್ದ ಧನುಷ್ ತನ್ನ ಸ್ನೇಹಿತ ಶಾಬುದ್ದೀನ್ಗೆ ತಿಳಿಸಿದ್ದ. ಕಾರ್ತಿಕ್ ಮೇಲೆ ಹಲ್ಲೆ ನಡೆಸಿ ಬುದ್ಧಿ ಕಲಿಸಲು ನಿರ್ಧರಿಸಿದ್ದರು. ಅದರಂತೆ ಡಿ.21ರ ಸಂಜೆ 6.30ಕ್ಕೆ ಕಾರ್ತಿಕ್ಗೆ ಕರೆ ಮಾಡಿದ ಧನುಷ್, ಮನೆಯಿಂದ ಹೊರ ಬರುವಂತೆ ಹೇಳಿದ್ದಾನೆ. ಮನೆಯಿಂದ 500 ಮೀಟರ್ ದೂರಕ್ಕೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿ ಆಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಚೇತರಿಕೆ: ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕಾರ್ತಿಕ್ ತಾನೇ ಬೈಕ್ ಹತ್ತಿ ಆಸ್ಪತ್ರೆಗೆ ದಾಖಲಾಗಿದ್ದ. ಸದ್ಯ ಆತ ಚೇತರಿಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯುವತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿದಿದ್ದ ಇಬ್ಬರು ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ನಾಯಂಡಹಳ್ಳಿ ನಿವಾಸಿಗಳಾದ ಧನುಷ್(20) ಹಾಗೂ ಶಾಬುದ್ದೀನ್(22) ಬಂಧಿತರು.</p>.<p>ಆರೋಪಿಗಳು, ಡಿ.21ರಂದು ನಾಯಂಡಹಳ್ಳಿ ಸಮೀಪದ ವಿನಾಯಕ ಲೇಔಟ್ನಲ್ಲಿ ಕಾರ್ತಿಕ್ ಎಂಬಾತನಿಗೆ ಚಾಕುವಿನಿಂದ ಇರಿದಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಧನುಷ್ ಪ್ರೇಯಸಿಯ ನಂಬರ್ ಪಡೆದಿದ್ದ ಕಾರ್ತಿಕ್, ಆಕೆಗೆ ಕರೆ ಮಾಡಿ ಮಾತಾಡಿದ್ದ. ಜತೆಗೆ ಆಕೆಯ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ವಿಚಾರವನ್ನು ಧನುಷ್ಗೆ ಯುವತಿ ತಿಳಿಸಿದ್ದಳು. ವಿಚಾರ ಕೇಳಿ ಕುಪಿತಗೊಂಡಿದ್ದ ಧನುಷ್ ತನ್ನ ಸ್ನೇಹಿತ ಶಾಬುದ್ದೀನ್ಗೆ ತಿಳಿಸಿದ್ದ. ಕಾರ್ತಿಕ್ ಮೇಲೆ ಹಲ್ಲೆ ನಡೆಸಿ ಬುದ್ಧಿ ಕಲಿಸಲು ನಿರ್ಧರಿಸಿದ್ದರು. ಅದರಂತೆ ಡಿ.21ರ ಸಂಜೆ 6.30ಕ್ಕೆ ಕಾರ್ತಿಕ್ಗೆ ಕರೆ ಮಾಡಿದ ಧನುಷ್, ಮನೆಯಿಂದ ಹೊರ ಬರುವಂತೆ ಹೇಳಿದ್ದಾನೆ. ಮನೆಯಿಂದ 500 ಮೀಟರ್ ದೂರಕ್ಕೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿ ಆಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಚೇತರಿಕೆ: ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕಾರ್ತಿಕ್ ತಾನೇ ಬೈಕ್ ಹತ್ತಿ ಆಸ್ಪತ್ರೆಗೆ ದಾಖಲಾಗಿದ್ದ. ಸದ್ಯ ಆತ ಚೇತರಿಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>