<p><strong>ಬೆಂಗಳೂರು:</strong> ಮಿದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಹೃದಯ ಹಾಗೂ ಶ್ವಾಸಕೋಶವನ್ನು ಬೇರೆ ವ್ಯಕ್ತಿಗಳಿಗೆ ಅಳವಡಿಸಲು ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಸಂಚಾರಕ್ಕೆ ಪೊಲೀಸರು ಗುರುವಾರ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿಕೊಟ್ಟರು.</p>.<p>ಹೆಬ್ಬಾಳದ ಆಸ್ಟರ್ ಸಿಎಂಐ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದರು. ಇವರ ಅಂಗಾಂಗಗಳನ್ನು ಕುಟುಂಬದವರು ದಾನ ಮಾಡಿದ್ದರು.</p>.<p>ವ್ಯಕ್ತಿಯ ಹೃದಯವನ್ನು ಚೆನ್ನೈನಲ್ಲಿರುವ ಆಸ್ಪತ್ರೆಯೊಂದರಲ್ಲಿ ರೋಗಿಯೊಬ್ಬರಿಗೆ ಅಳವಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.</p>.<p>ವಿಶೇಷ ಪೆಟ್ಟಿಗೆಯಲ್ಲಿ ಹೃದಯವನ್ನು ಆಸ್ಪತ್ರೆಯಿಂದ ಆಂಬುಲೆನ್ಸ್ನಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಗ್ನಲ್ ಮುಕ್ತ ರಸ್ತೆಯಲ್ಲಿ ಕೊಂಡೊಯ್ಯಲಾಯಿತು. ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು, ಆಂಬುಲೆನ್ಸ್ ತಡೆರಹಿತವಾಗಿ ಸಂಚರಿಸಲು ಅನುಕೂಲ ಮಾಡಿಕೊಟ್ಟರು. ವಿಮಾನದಲ್ಲಿ ಹೃದಯವನ್ನು ಚೆನ್ನೈಗೆ ಕಳುಹಿಸಲಾಯಿತು.</p>.<p>ಅದೇ ವ್ಯಕ್ತಿಯ ಶ್ವಾಸಕೋಶವನ್ನು ಜೆ.ಪಿ.ನಗರದ ಆರ್.ವಿ. ಆಸ್ಟರ್ ಆಸ್ಪತ್ರೆಯಲ್ಲಿರುವ ರೋಗಿಗೆ ಕಸಿ ಮಾಡಲಾಯಿತು. ಶ್ವಾಸಕೋಶ ಕೊಂಡೊಯ್ಯಲು ಸಹ ಪೊಲೀಸರು, ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಿದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಹೃದಯ ಹಾಗೂ ಶ್ವಾಸಕೋಶವನ್ನು ಬೇರೆ ವ್ಯಕ್ತಿಗಳಿಗೆ ಅಳವಡಿಸಲು ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಸಂಚಾರಕ್ಕೆ ಪೊಲೀಸರು ಗುರುವಾರ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿಕೊಟ್ಟರು.</p>.<p>ಹೆಬ್ಬಾಳದ ಆಸ್ಟರ್ ಸಿಎಂಐ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದರು. ಇವರ ಅಂಗಾಂಗಗಳನ್ನು ಕುಟುಂಬದವರು ದಾನ ಮಾಡಿದ್ದರು.</p>.<p>ವ್ಯಕ್ತಿಯ ಹೃದಯವನ್ನು ಚೆನ್ನೈನಲ್ಲಿರುವ ಆಸ್ಪತ್ರೆಯೊಂದರಲ್ಲಿ ರೋಗಿಯೊಬ್ಬರಿಗೆ ಅಳವಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.</p>.<p>ವಿಶೇಷ ಪೆಟ್ಟಿಗೆಯಲ್ಲಿ ಹೃದಯವನ್ನು ಆಸ್ಪತ್ರೆಯಿಂದ ಆಂಬುಲೆನ್ಸ್ನಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಗ್ನಲ್ ಮುಕ್ತ ರಸ್ತೆಯಲ್ಲಿ ಕೊಂಡೊಯ್ಯಲಾಯಿತು. ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು, ಆಂಬುಲೆನ್ಸ್ ತಡೆರಹಿತವಾಗಿ ಸಂಚರಿಸಲು ಅನುಕೂಲ ಮಾಡಿಕೊಟ್ಟರು. ವಿಮಾನದಲ್ಲಿ ಹೃದಯವನ್ನು ಚೆನ್ನೈಗೆ ಕಳುಹಿಸಲಾಯಿತು.</p>.<p>ಅದೇ ವ್ಯಕ್ತಿಯ ಶ್ವಾಸಕೋಶವನ್ನು ಜೆ.ಪಿ.ನಗರದ ಆರ್.ವಿ. ಆಸ್ಟರ್ ಆಸ್ಪತ್ರೆಯಲ್ಲಿರುವ ರೋಗಿಗೆ ಕಸಿ ಮಾಡಲಾಯಿತು. ಶ್ವಾಸಕೋಶ ಕೊಂಡೊಯ್ಯಲು ಸಹ ಪೊಲೀಸರು, ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>