<p><strong>ಬೆಂಗಳೂರು: </strong>ದುಷ್ಕರ್ಮಿಯೊಬ್ಬ ಅಂಗನವಾಡಿ ಕೇಂದ್ರದ ಬಳಿ ಆಟವಾಡುತ್ತಿದ್ದ ಎರಡು ವರ್ಷದ ಮಗುವನ್ನು ಅಪಹರಿಸಿರುವ ಘಟನೆ ಬೈಯಪ್ಪನಹಳ್ಳಿ ಸಮೀಪದ ನಾಗವಾರ ಮುಖ್ಯರಸ್ತೆಯಲ್ಲಿ ಬುಧವಾರ ನಡೆದಿದೆ.ಮಗುವಿನ ಪೋಷಕರು ಆಂಧ್ರಪ್ರದೇಶ ಮೂಲದವರು. ನಾಗವಾರ ಮುಖ್ಯರಸ್ತೆಯಲ್ಲಿ ವಾಸವಾಗಿದ್ದ ಅವರು, ಕೂಲಿ ಕೆಲಸ ಮಾಡುತ್ತಿದ್ದರು.<br /> <br /> ಪ್ರತಿದಿನ ಕೆಲಸಕ್ಕೆ ಹೋಗುವಾಗ ಮಗುವನ್ನು ಸಮೀಪದ ಅಂಗನವಾಡಿಗೆ ಬಿಟ್ಟು ಹೋಗುತ್ತಿದ್ದರು. ಅಂತೆಯೇ ಬುಧವಾರ ಸಹ ಮಗುವನ್ನು ಅಂಗನವಾಡಿಗೆ ಬಿಟ್ಟು ಹೋಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮಗು ಅಂಗನವಾಡಿ ಬಳಿ ಆಟವಾಡುತ್ತಿತ್ತು. ಈ ವೇಳೆ ಅಲ್ಲಿಗೆ ಬಂದಿರುವ ಅಪರಿಚಿತ ವ್ಯಕ್ತಿಯೊಬ್ಬ ಚಾಕೊಲೇಟ್ ಕೊಡಿಸುವುದಾಗಿ ಅಕ್ಷಯ್ನನ್ನು ಕರೆದುಕೊಂಡು ಹೋಗಿದ್ದಾನೆ.<br /> <br /> ಆ ವ್ಯಕ್ತಿ ತುಂಬಾ ಹೊತ್ತಾದರೂ ಬಾರದ ಹಿನ್ನೆಲೆಯಲ್ಲಿ ಗಾಬರಿಗೊಂಡ ಕೇಂದ್ರದ ಸಹಾಯಕಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಘಟನೆ ಸಂಬಂಧ ಅಪಹರಣ ಪ್ರಕರಣ ದಾಖಲಿಸಿಕೊಂಡು ಸಹಾಯಕಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೈಯಪ್ಪನಹಳ್ಳಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದುಷ್ಕರ್ಮಿಯೊಬ್ಬ ಅಂಗನವಾಡಿ ಕೇಂದ್ರದ ಬಳಿ ಆಟವಾಡುತ್ತಿದ್ದ ಎರಡು ವರ್ಷದ ಮಗುವನ್ನು ಅಪಹರಿಸಿರುವ ಘಟನೆ ಬೈಯಪ್ಪನಹಳ್ಳಿ ಸಮೀಪದ ನಾಗವಾರ ಮುಖ್ಯರಸ್ತೆಯಲ್ಲಿ ಬುಧವಾರ ನಡೆದಿದೆ.ಮಗುವಿನ ಪೋಷಕರು ಆಂಧ್ರಪ್ರದೇಶ ಮೂಲದವರು. ನಾಗವಾರ ಮುಖ್ಯರಸ್ತೆಯಲ್ಲಿ ವಾಸವಾಗಿದ್ದ ಅವರು, ಕೂಲಿ ಕೆಲಸ ಮಾಡುತ್ತಿದ್ದರು.<br /> <br /> ಪ್ರತಿದಿನ ಕೆಲಸಕ್ಕೆ ಹೋಗುವಾಗ ಮಗುವನ್ನು ಸಮೀಪದ ಅಂಗನವಾಡಿಗೆ ಬಿಟ್ಟು ಹೋಗುತ್ತಿದ್ದರು. ಅಂತೆಯೇ ಬುಧವಾರ ಸಹ ಮಗುವನ್ನು ಅಂಗನವಾಡಿಗೆ ಬಿಟ್ಟು ಹೋಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮಗು ಅಂಗನವಾಡಿ ಬಳಿ ಆಟವಾಡುತ್ತಿತ್ತು. ಈ ವೇಳೆ ಅಲ್ಲಿಗೆ ಬಂದಿರುವ ಅಪರಿಚಿತ ವ್ಯಕ್ತಿಯೊಬ್ಬ ಚಾಕೊಲೇಟ್ ಕೊಡಿಸುವುದಾಗಿ ಅಕ್ಷಯ್ನನ್ನು ಕರೆದುಕೊಂಡು ಹೋಗಿದ್ದಾನೆ.<br /> <br /> ಆ ವ್ಯಕ್ತಿ ತುಂಬಾ ಹೊತ್ತಾದರೂ ಬಾರದ ಹಿನ್ನೆಲೆಯಲ್ಲಿ ಗಾಬರಿಗೊಂಡ ಕೇಂದ್ರದ ಸಹಾಯಕಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಘಟನೆ ಸಂಬಂಧ ಅಪಹರಣ ಪ್ರಕರಣ ದಾಖಲಿಸಿಕೊಂಡು ಸಹಾಯಕಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೈಯಪ್ಪನಹಳ್ಳಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>