<p><strong>ಬೆಂಗಳೂರು: </strong>`ರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯದ 15 ಬಿಜೆಪಿ ಶಾಸಕರು ಅಡ್ಡ ಮತದಾನ ಮಾಡಿದ ಪ್ರಕರಣದ ತನಿಖೆಗೆ ಸಮಿತಿಯನ್ನು ರಚಿಸಲಾಗುವುದು. ಸಮಿತಿಯು ಕೂಲಂಕಶವಾಗಿ ಪರಿಶೀಲನೆ ಮಾಡಿ ನೀಡುವ ವರದಿಯ ಆಧಾರದಲ್ಲಿ ಈ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು. <br /> <br /> ವಾರ್ತಾ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ಸಭಾಂಗಣದಲ್ಲಿ ಸೋಮವಾರ ನಡೆದ `ಕರ್ನಾಟಕ ವಿಧಾನಸಭೆ-60~ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ವಿಧಾನಸಭೆಯ ಅರವತ್ತನೇ ವರ್ಷಾಚರಣೆಯನ್ನು ವಿಧಾನಸಭೆಯಲ್ಲಿ ಇತ್ತೀಚೆಗೆ ಸಂಭ್ರಮದಿಂದ ಆಚರಿಸಲಾಗಿದೆ. ವಿಧಾನಸಭೆಯ ಇತಿಹಾಸದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಉದ್ದೇಶದಿಂದ ಈ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇಲ್ಲಿನ ಛಾಯಾಚಿತ್ರಗಳನ್ನು ವೀಕ್ಷಿಸಿದಾಗ ವಿಧಾನಸಭೆಯ ಇತಿಹಾಸ ಕಣ್ಮುಂದೆ ಬರುತ್ತದೆ~ ಎಂದು ಅವರು ಹೇಳಿದರು. <br /> <br /> ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ ಕುಮಾರ್, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಾರ್ತಾ ಇಲಾಖೆಯ ನಿರ್ದೇಶಕ ವಿಶು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. <br /> <br /> ಬುಧವಾರದ ವರೆಗೆ ಬೆಳಿಗ್ಗೆ 9.30ರಿಂದ ರಾತ್ರಿ 7ರ ವರೆಗೆ ಪ್ರದರ್ಶನ ಮುಂದುವರಿಯಲಿದೆ. ವಿಧಾನಸೌಧಕ್ಕೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಅಡಿಗಲ್ಲು ಹಾಕಿದ ಘಟನೆಯಿಂದ ಹಿಡಿದು ಜೂನ್ 18ರಂದು ವಿಧಾನಸಭೆಯ 60ನೇ ವರ್ಷಾಚರಣೆ ಕಾರ್ಯಕ್ರಮದ ವರೆಗಿನ ಅಪರೂಪದ ಚಿತ್ರಗಳು ಈ ಪ್ರದರ್ಶನದಲ್ಲಿ ಇವೆ. ಒಟ್ಟು 175 ಛಾಯಾಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯದ 15 ಬಿಜೆಪಿ ಶಾಸಕರು ಅಡ್ಡ ಮತದಾನ ಮಾಡಿದ ಪ್ರಕರಣದ ತನಿಖೆಗೆ ಸಮಿತಿಯನ್ನು ರಚಿಸಲಾಗುವುದು. ಸಮಿತಿಯು ಕೂಲಂಕಶವಾಗಿ ಪರಿಶೀಲನೆ ಮಾಡಿ ನೀಡುವ ವರದಿಯ ಆಧಾರದಲ್ಲಿ ಈ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು. <br /> <br /> ವಾರ್ತಾ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ಸಭಾಂಗಣದಲ್ಲಿ ಸೋಮವಾರ ನಡೆದ `ಕರ್ನಾಟಕ ವಿಧಾನಸಭೆ-60~ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ವಿಧಾನಸಭೆಯ ಅರವತ್ತನೇ ವರ್ಷಾಚರಣೆಯನ್ನು ವಿಧಾನಸಭೆಯಲ್ಲಿ ಇತ್ತೀಚೆಗೆ ಸಂಭ್ರಮದಿಂದ ಆಚರಿಸಲಾಗಿದೆ. ವಿಧಾನಸಭೆಯ ಇತಿಹಾಸದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಉದ್ದೇಶದಿಂದ ಈ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇಲ್ಲಿನ ಛಾಯಾಚಿತ್ರಗಳನ್ನು ವೀಕ್ಷಿಸಿದಾಗ ವಿಧಾನಸಭೆಯ ಇತಿಹಾಸ ಕಣ್ಮುಂದೆ ಬರುತ್ತದೆ~ ಎಂದು ಅವರು ಹೇಳಿದರು. <br /> <br /> ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ ಕುಮಾರ್, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಾರ್ತಾ ಇಲಾಖೆಯ ನಿರ್ದೇಶಕ ವಿಶು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. <br /> <br /> ಬುಧವಾರದ ವರೆಗೆ ಬೆಳಿಗ್ಗೆ 9.30ರಿಂದ ರಾತ್ರಿ 7ರ ವರೆಗೆ ಪ್ರದರ್ಶನ ಮುಂದುವರಿಯಲಿದೆ. ವಿಧಾನಸೌಧಕ್ಕೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಅಡಿಗಲ್ಲು ಹಾಕಿದ ಘಟನೆಯಿಂದ ಹಿಡಿದು ಜೂನ್ 18ರಂದು ವಿಧಾನಸಭೆಯ 60ನೇ ವರ್ಷಾಚರಣೆ ಕಾರ್ಯಕ್ರಮದ ವರೆಗಿನ ಅಪರೂಪದ ಚಿತ್ರಗಳು ಈ ಪ್ರದರ್ಶನದಲ್ಲಿ ಇವೆ. ಒಟ್ಟು 175 ಛಾಯಾಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>